Advertisement
Political mirror

ನಪಂ ಚುನಾವಣೆ: ಬಂಡಾಯ ಅಭ್ಯರ್ಥಿಗಳ ಮೇಲೆ ಶಿಸ್ತು ಕ್ರಮ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

Share

ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪಕ್ಷವು ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಚುನಾವಣಾ ಸ್ಪರ್ಧೆಗೆ ಆಕಾಂಕ್ಷಿಗಳು ಇರುವುದು ಸಹಜ. ಆದರೆ ಪಕ್ಷದ ತೀರ್ಮಾನ, ಶಿಸ್ತನ್ನು ಎಲ್ಲರೂ ಪಾಲಿಸಬೇಕು. ಬಂಡಾಯವಾಗಿ ನಾಮಪತ್ರ ಸಲ್ಲಿಸಿದವರ ಜೊತೆ ಪಕ್ಷದ ನಾಯಕರು ಮಾತುಕತೆ ನಡೆಸಿ ನಾಮಪತ್ರ ಹಿಂಪಡೆಯುವಂತೆ ಮನವಿ ಮಾಡಲಾಗಿತ್ತು. ಆದರೆ ಕೆಲವರು ನಾಮಪತ್ರ ಹಿಂಪಡೆಯದೆ ಸ್ಪರ್ಧಾ ಕಣದಲ್ಲಿ ಇದ್ದಾರೆ. ಅಂತವರ ವಿರುದ್ಧ ಬ್ಲಾಕ್ ಅಧ್ಯಕ್ಷರ ವರದಿಯ ಆಧಾರದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು. ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹಿರಿಯರನ್ನು ಮತ್ತು ಹೊಸ ಮುಖಗಳು ಸೇರಿ ಉತ್ತಮ ತಂಡವನ್ನು ಕಣಕ್ಕಿಳಿಸಲಾಗಿದೆ. ಈ ಬಾರಿ ನಗರ ಪಂಚಾಯತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ‌ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ನಗರ ಪಂಚಾಯತ್ ಚುನಾವಣೆಗೆ ಹೋಲಿಸುವಂತಿಲ್ಲ. ಸ್ಥಳೀಯ ಸಮಸ್ಯೆಗಳೇ ಇಲ್ಲಿ ಚುನಾವಣಾ ವಿಷಯ. ಸುಳ್ಯದಲ್ಲಿ ಹಲವು ಸಮಸ್ಯೆಗಳಿದ್ದು ಅದರ ಪರಿಹಾರ ಮಾಡಲು ಮೂರು ಬಾರಿ ಆಡಳಿತ ನಡೆಸಿದ ಬಿಜೆಪಿ ವಿಫಲವಾಗಿದೆ ಎಂದು ದೂರಿದರು.
ಕೆಪಿಸಿಸಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ, ಮಡಿಕೇರಿ ನಗರ ಸಭೆ ಮಾಜಿ ಅಧ್ಯಕ್ಷ ನಂದಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಕೆ.ಎಂ.ಮುಸ್ತಫಾ, ಕೆ.ಗೋಕುಲ್ ದಾಸ್, ಧೀರಾ ಕ್ರಾಸ್ತಾ, ಚಂದ್ರಕುಮಾರ್, ಸುಜಯಾಕೃಷ್ಣ, ಶಶಿಧರ ಎಂ.ಜೆ, ಶ್ರೀಲತಾ ಪ್ರಸನ್ನ, ಎಸ್.ಎಂ.ಉಮ್ಮರ್, ಬಾಲಕೃಷ್ಣ ಭಟ್ ಕೊಡೆಂಕೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಸತೀಶ್ ಕೂಜುಗೋಡು, ಲಕ್ಷ್ಮಿ ಸುಬ್ರಹ್ಮಣ್ಯ, ರಫೀಕ್ ಪಡು, ಸುಧೀರ್ ರೈ ಮೇನಾಲ, ಎಸ್.ಸಂಶದುದ್ದಿನ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

20 minutes ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

31 minutes ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

45 minutes ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

58 minutes ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

10 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

14 hours ago