Advertisement
Political mirror

ನಪಂ ಚುನಾವಣೆ: ಬಂಡಾಯ ಅಭ್ಯರ್ಥಿಗಳ ಮೇಲೆ ಶಿಸ್ತು ಕ್ರಮ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

Share

ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪಕ್ಷವು ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಚುನಾವಣಾ ಸ್ಪರ್ಧೆಗೆ ಆಕಾಂಕ್ಷಿಗಳು ಇರುವುದು ಸಹಜ. ಆದರೆ ಪಕ್ಷದ ತೀರ್ಮಾನ, ಶಿಸ್ತನ್ನು ಎಲ್ಲರೂ ಪಾಲಿಸಬೇಕು. ಬಂಡಾಯವಾಗಿ ನಾಮಪತ್ರ ಸಲ್ಲಿಸಿದವರ ಜೊತೆ ಪಕ್ಷದ ನಾಯಕರು ಮಾತುಕತೆ ನಡೆಸಿ ನಾಮಪತ್ರ ಹಿಂಪಡೆಯುವಂತೆ ಮನವಿ ಮಾಡಲಾಗಿತ್ತು. ಆದರೆ ಕೆಲವರು ನಾಮಪತ್ರ ಹಿಂಪಡೆಯದೆ ಸ್ಪರ್ಧಾ ಕಣದಲ್ಲಿ ಇದ್ದಾರೆ. ಅಂತವರ ವಿರುದ್ಧ ಬ್ಲಾಕ್ ಅಧ್ಯಕ್ಷರ ವರದಿಯ ಆಧಾರದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು. ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹಿರಿಯರನ್ನು ಮತ್ತು ಹೊಸ ಮುಖಗಳು ಸೇರಿ ಉತ್ತಮ ತಂಡವನ್ನು ಕಣಕ್ಕಿಳಿಸಲಾಗಿದೆ. ಈ ಬಾರಿ ನಗರ ಪಂಚಾಯತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ‌ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ನಗರ ಪಂಚಾಯತ್ ಚುನಾವಣೆಗೆ ಹೋಲಿಸುವಂತಿಲ್ಲ. ಸ್ಥಳೀಯ ಸಮಸ್ಯೆಗಳೇ ಇಲ್ಲಿ ಚುನಾವಣಾ ವಿಷಯ. ಸುಳ್ಯದಲ್ಲಿ ಹಲವು ಸಮಸ್ಯೆಗಳಿದ್ದು ಅದರ ಪರಿಹಾರ ಮಾಡಲು ಮೂರು ಬಾರಿ ಆಡಳಿತ ನಡೆಸಿದ ಬಿಜೆಪಿ ವಿಫಲವಾಗಿದೆ ಎಂದು ದೂರಿದರು.
ಕೆಪಿಸಿಸಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ, ಮಡಿಕೇರಿ ನಗರ ಸಭೆ ಮಾಜಿ ಅಧ್ಯಕ್ಷ ನಂದಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಕೆ.ಎಂ.ಮುಸ್ತಫಾ, ಕೆ.ಗೋಕುಲ್ ದಾಸ್, ಧೀರಾ ಕ್ರಾಸ್ತಾ, ಚಂದ್ರಕುಮಾರ್, ಸುಜಯಾಕೃಷ್ಣ, ಶಶಿಧರ ಎಂ.ಜೆ, ಶ್ರೀಲತಾ ಪ್ರಸನ್ನ, ಎಸ್.ಎಂ.ಉಮ್ಮರ್, ಬಾಲಕೃಷ್ಣ ಭಟ್ ಕೊಡೆಂಕೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಸತೀಶ್ ಕೂಜುಗೋಡು, ಲಕ್ಷ್ಮಿ ಸುಬ್ರಹ್ಮಣ್ಯ, ರಫೀಕ್ ಪಡು, ಸುಧೀರ್ ರೈ ಮೇನಾಲ, ಎಸ್.ಸಂಶದುದ್ದಿನ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

2 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

3 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

3 days ago