ಸುದ್ದಿಗಳು

ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯವಿದೆ : ಕಟೀಲ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯಗಳಿದ್ದಾವೆ. ರಾಹುಲ್ ಗಾಂಧಿ ಯಾವ ಹೋರಾಟದವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದರು.

Advertisement

ಸ್ವಾತಂತ್ರ್ಯಕ್ಕಾಗಿ ಬಿಜೆಪಿ ಕೊಡುಗೆ ಶೂನ್ಯ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಖಾರವಾಗಿ ಮಾತನಾಡಿದರು. ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯಗಳಿವೆ. ರಾಹುಲ್ ಗಾಂಧಿ ಯಾವ ಹೋರಾಟದವರು? ಗಾಂಧಿ ಅಂತ ಹೇಳುವಂಥದ್ದು ರಾಹುಲ್ ಗಾಂಧಿಗೆ ಹೇಗೆ ಬಂತು ಎಂಬುದನ್ನು ವಿವರಣೆ ನೀಡಲಿ. 224 ಕ್ಷೇತ್ರಕ್ಕೂ ರಾಹುಲ್ ಗಾಂಧಿ ಪ್ರವಾಸ ಮಾಡಬೇಕು. ಇಡೀ ದೇಶದಲ್ಲಿ ಎಲ್ಲೆಲ್ಲಿ ರಾಹುಲ್ ಗಾಂಧಿ ಪ್ರವಾಸ ಮಾಡಿದ್ದಾರೋ, ಅಲ್ಲಲ್ಲಿ ಕಾಂಗ್ರೆಸ್ ಸೋತಿದೆ ಎಂದು ಕುಟುಕಿದರು.

ಶೆಟ್ಟರ್‌ಗೆ ಬಿಜೆಪಿ ಗೌರವ, ಅಧಿಕಾರ ಎಲ್ಲವನ್ನೂ ಕೊಟ್ಟಿದೆ. ಈಗ ಅವರು ಕಾಂಗ್ರೆಸ್ ಸೇರಿದ್ದಾರೆ. ಅವರ ವಿರುದ್ಧ ಬಿಜೆಪಿ ಗೆಲ್ಲಲೇಬೇಕು. ಕೌರವರು ಮತ್ತು ಪಾಂಡವರ ಯುದ್ಧ ಮಾಡಲೇಬೇಕು. ಕಾಂಗ್ರೆಸ್ ವಿರುದ್ಧ ನಮ್ಮ ಹೋರಾಟ ಅನಿವಾರ್ಯ ಎಂದರು.

Advertisement

ಲಿಂಗಾಯತ ಸಿಎಂ ವಿಚಾರವಾಗಿ ಮಾತನಾಡಿ, ಈಗಾಗಲೇ ಬಿಜೆಪಿಯೇ 3 ಬಾರಿ ಲಿಂಗಾಯತ ಮುಖ್ಯಮಂತ್ರಿಗಳನ್ನು ಮಾಡಿದೆ. ಮುಂದೆಯೂ ಲಿಂಗಾಯತರನ್ನೇ ಸಿಎಂ ಮಾಡೋದು. ಇದನ್ನೇ ಸಿದ್ರಾಮಣ್ಣ ಅಥವಾ ಡಿಕೆಶಿ ಶಕ್ತಿ, ತಾಕತ್ತು ಇದ್ರೆ ಹೇಳಲಿ ಅಂತ ಸವಾಲು ಹಾಕಿದರು.

Advertisement

ಗದಗ ಮತಕ್ಷೇತ್ರದಲ್ಲೂ ಗುಂಡಾಗಿರಿ ರಾಜಕಾರಣ ನೋಡಿದ್ದೇವೆ. ನಾಮಪತ್ರ ಸಲ್ಲಿಕೆ ವೇಳೆ ನಮ್ಮ ಅಭ್ಯರ್ಥಿ ಮೇಲೆ ಹಲ್ಲೆ ಪ್ರಯತ್ನ ಮಾಡಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಗುಂಡಾಗಿರಿಯಿಂದ ಈ ಕ್ಷೇತ್ರ ಗೆಲ್ಲಬಹುದೆಂದು ಪ್ರಯತ್ನ ಮಾಡಿದ್ದಾರೆ. ಆದ್ರೆ ನಮ್ಮ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಈ ಬಾರಿ ಇಲ್ಲಿ ಗೆಲ್ತಾರೆ ಎಂದರು.

ಸಮಾಜವನ್ನ ಒಡೆಯುವ ಕೆಲಸ ಕಾಂಗ್ರೆಸ್ ಮಾಡ್ತಿದೆ. ಅಧಿಕಾರ ಇದ್ದಾಗ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯುವ ಕೆಲಸ ಮಾಡಿದೆ. ಅಧಿಕಾರ ಬಿಟ್ಟಾಗ ಅವರ ಬಗ್ಗೆ ಕೆಟ್ಟದಾಗಿ ಸಿದ್ರಾಮಣ್ಣ ಮಾತಾಡ್ತಾರೆ. ಇದೆಲ್ಲವನ್ನ ಜನ ಮನಗಂಡು ಕಾಂಗ್ರೆಸ್ ತಿರಸ್ಕರಿಸ್ತಾರೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

3 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

4 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

12 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

14 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

15 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

21 hours ago