Advertisement
ಸುದ್ದಿಗಳು

ನಮ್ಮೆಲ್ಲಲರ ಒಗ್ಗೂಡಿಸುವ ಶಕ್ತಿ ದೇವರ ಆರಾಧನೆಗಿದೆ

Share

ಬೆಳ್ಳಾರೆ: ನಮ್ಮೆಲ್ಲರ ಒಗ್ಗೂಡಿಸುವ ಶಕ್ತಿ ದೇವರ ಆರಾಧನೆಗಿದೆ. ಭಕ್ತಿಯ ಆರಾಧನೆಗೆ ದೇವರು ಅಸ್ತು ಅನ್ನುತ್ತಾನೆ. ಭಕ್ತಿಗೆ ಮೀರಿದ ಶಕ್ತಿ ಬೇರೊಂದಿಲ್ಲ. ತಪಸ್ಸಿನ ಶಕ್ತಿ ಭಕ್ತಿಗೂ ಇದೆ ಎಂದು ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗಣರಾಜ ಕುಂಬ್ಳೆ ಹೇಳಿದರು.

ಬಾಳಿಲ ಮುಪ್ಪೇರ್ಯ ನಾಗರೀಕ ಸೇವಾ ಸಮಿತಿಯ ವತಿಯಿಂದ ನಡೆದ 36ನೇ ವರ್ಷದ ಗಣೇಶೋತ್ಸವದ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಮುಖ್ಯ ಅತಿಥ ಸುಳ್ಯ ಶಾಸಕ ಎಸ್.ಅಂಗಾರ ಮಾತನಾಡಿ ಕೇವಲ ತೋರ್ಪಡಿಕೆಗಾಗಿ ರಾಷ್ಟ್ರಭಕ್ತಿಯನ್ನು ವಿಜೃಂಭಿಸಲಾಗುತ್ತಿದೆ. ಅದನ್ನು ಬಿಟ್ಟು ಪ್ರಾಮಾಣಿಕವಾಗಿ ನಾವೆಲ್ಲ ರಾಷ್ಟ್ರ ರಕ್ಷಣೆಗೆ ಸನ್ನದ್ಧರಾಗಬೇಕು. ನಮ್ಮ ತಾಯಿ ನಾಡು ರಕ್ಷಣೆಯ ಜವಾಬ್ದಾರಿ ನಮ್ಮದೇ ಎಂದರು.

ಕಾರ್ಯಕ್ರಮದಲ್ಲಿ ಚಿತ್ರಕಕಲಾ ಕ್ಷೇತ್ರದ ಸಾಧಕ ಉಮೇಶ್ ಕಾಪಡ್ಕ, ಅಂತರಾಷ್ಟ್ರೀಯ ಕ್ರೀಡಾಪಟು ಸುಭಾಷ್ ಕಂಡಿಕಟ್ಟ, ಬಾಳಿ ವಿದ್ಯಾಬೋಧಿನಿ ಪ್ರೌಢಶಾಲಾ ದೈಹಿಕ ಶಿಕ್ಷಕ ಹರಿಪ್ರಸಾದ್ ರೈ ಹಾಗು ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಇವರನ್ನು ಸನ್ಮಾನಿಸಲಾಯಿತು.

ಸಮಿತಿಯ ಅಧ್ಯಕ್ಷ ಗಂಗಾಧರ ಮುಪ್ಪೇರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸುಳ್ಯ ಭೂ ಬ್ಯಾಂಕ್ ಅಧ್ಯಕ್ಷ ಹಾಗು ಜಿಲ್ಲಾ ಪಂಚಾಯತ್ ಅರಂತೋಡು ಕ್ಷೇತ್ರದ ಸದಸ್ಯ ಹರೀಶ್ ಕಂಜಿಪಿಲಿ, ಬಾಳಿಲ ಗ್ರಾಮ ಪಂಚಾಯತ್ ಸದಸ್ಯೆ ವಾರಿಜ ಬೊಳಿಯಕಂಡ ಉಪಸ್ಥಿತರಿದ್ದರು. ಜಾಲ್ಸೂರು ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ, ರವೀಂದ್ರ ರೈ ಟಪಾಲುಕಟ್ಟೆರಮೇಶ್ ರೈ ಅಗಲ್ಪಾಡಿ ಹಾಗು ಸಹನ್ ರೈ ಸನ್ಮಾನ ಪತ್ರಗಳನ್ನು ವಾಚಿಸಿದರು.

ಸಮಿತಿಯ ಗೌರವಾಧ್ಯಕ್ಷ ಪಿಜಿಎಸ್‍ಎನ್ ಪ್ರಸಾದ್ ಪ್ರಸ್ತಾವಿಸಿದರು. ಸದಸ್ಯ ಶ್ರೀನಾಥ್ ರೈ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ರವಿಪ್ರಕಾಶ್ ಮುಪ್ಪೇರ್ಯ ವಂದಿಸಿದರು. ಉಪನ್ಯಾಸಕ ರಾಮ್‍ಪ್ರಸಾದ್ ಕಾಂಚೋಡು ಹಾಗು ರಾಜೇಶ್ ಅಯ್ಯನಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

4 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

13 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

17 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago