Advertisement
ಸುದ್ದಿಗಳು

ನಮ್ಮೆಲ್ಲಲರ ಒಗ್ಗೂಡಿಸುವ ಶಕ್ತಿ ದೇವರ ಆರಾಧನೆಗಿದೆ

Share

ಬೆಳ್ಳಾರೆ: ನಮ್ಮೆಲ್ಲರ ಒಗ್ಗೂಡಿಸುವ ಶಕ್ತಿ ದೇವರ ಆರಾಧನೆಗಿದೆ. ಭಕ್ತಿಯ ಆರಾಧನೆಗೆ ದೇವರು ಅಸ್ತು ಅನ್ನುತ್ತಾನೆ. ಭಕ್ತಿಗೆ ಮೀರಿದ ಶಕ್ತಿ ಬೇರೊಂದಿಲ್ಲ. ತಪಸ್ಸಿನ ಶಕ್ತಿ ಭಕ್ತಿಗೂ ಇದೆ ಎಂದು ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗಣರಾಜ ಕುಂಬ್ಳೆ ಹೇಳಿದರು.

ಬಾಳಿಲ ಮುಪ್ಪೇರ್ಯ ನಾಗರೀಕ ಸೇವಾ ಸಮಿತಿಯ ವತಿಯಿಂದ ನಡೆದ 36ನೇ ವರ್ಷದ ಗಣೇಶೋತ್ಸವದ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಮುಖ್ಯ ಅತಿಥ ಸುಳ್ಯ ಶಾಸಕ ಎಸ್.ಅಂಗಾರ ಮಾತನಾಡಿ ಕೇವಲ ತೋರ್ಪಡಿಕೆಗಾಗಿ ರಾಷ್ಟ್ರಭಕ್ತಿಯನ್ನು ವಿಜೃಂಭಿಸಲಾಗುತ್ತಿದೆ. ಅದನ್ನು ಬಿಟ್ಟು ಪ್ರಾಮಾಣಿಕವಾಗಿ ನಾವೆಲ್ಲ ರಾಷ್ಟ್ರ ರಕ್ಷಣೆಗೆ ಸನ್ನದ್ಧರಾಗಬೇಕು. ನಮ್ಮ ತಾಯಿ ನಾಡು ರಕ್ಷಣೆಯ ಜವಾಬ್ದಾರಿ ನಮ್ಮದೇ ಎಂದರು.

ಕಾರ್ಯಕ್ರಮದಲ್ಲಿ ಚಿತ್ರಕಕಲಾ ಕ್ಷೇತ್ರದ ಸಾಧಕ ಉಮೇಶ್ ಕಾಪಡ್ಕ, ಅಂತರಾಷ್ಟ್ರೀಯ ಕ್ರೀಡಾಪಟು ಸುಭಾಷ್ ಕಂಡಿಕಟ್ಟ, ಬಾಳಿ ವಿದ್ಯಾಬೋಧಿನಿ ಪ್ರೌಢಶಾಲಾ ದೈಹಿಕ ಶಿಕ್ಷಕ ಹರಿಪ್ರಸಾದ್ ರೈ ಹಾಗು ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಇವರನ್ನು ಸನ್ಮಾನಿಸಲಾಯಿತು.

ಸಮಿತಿಯ ಅಧ್ಯಕ್ಷ ಗಂಗಾಧರ ಮುಪ್ಪೇರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸುಳ್ಯ ಭೂ ಬ್ಯಾಂಕ್ ಅಧ್ಯಕ್ಷ ಹಾಗು ಜಿಲ್ಲಾ ಪಂಚಾಯತ್ ಅರಂತೋಡು ಕ್ಷೇತ್ರದ ಸದಸ್ಯ ಹರೀಶ್ ಕಂಜಿಪಿಲಿ, ಬಾಳಿಲ ಗ್ರಾಮ ಪಂಚಾಯತ್ ಸದಸ್ಯೆ ವಾರಿಜ ಬೊಳಿಯಕಂಡ ಉಪಸ್ಥಿತರಿದ್ದರು. ಜಾಲ್ಸೂರು ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ, ರವೀಂದ್ರ ರೈ ಟಪಾಲುಕಟ್ಟೆರಮೇಶ್ ರೈ ಅಗಲ್ಪಾಡಿ ಹಾಗು ಸಹನ್ ರೈ ಸನ್ಮಾನ ಪತ್ರಗಳನ್ನು ವಾಚಿಸಿದರು.

ಸಮಿತಿಯ ಗೌರವಾಧ್ಯಕ್ಷ ಪಿಜಿಎಸ್‍ಎನ್ ಪ್ರಸಾದ್ ಪ್ರಸ್ತಾವಿಸಿದರು. ಸದಸ್ಯ ಶ್ರೀನಾಥ್ ರೈ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ರವಿಪ್ರಕಾಶ್ ಮುಪ್ಪೇರ್ಯ ವಂದಿಸಿದರು. ಉಪನ್ಯಾಸಕ ರಾಮ್‍ಪ್ರಸಾದ್ ಕಾಂಚೋಡು ಹಾಗು ರಾಜೇಶ್ ಅಯ್ಯನಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

6 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

7 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

9 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

12 hours ago