Advertisement
MIRROR FOCUS

ನಮ್ಮ ಚೊಕ್ಕಾಡಿಯವರಿಗೆ 80 | ಸುಬ್ರಾಯ ಚೊಕ್ಕಾಡಿಯವರ ಬದುಕು- ಬರಹಗಳ ಅವಲೋಕನ ವಿಶೇಷ ಕಾರ್ಯಕ್ರಮ ಇಂದು

Share

ನಮ್ಮ ಕವಿ ಸುಬ್ರಾಯ ಚೊಕ್ಕಾಡಿ ಅವರಿಗೆ  80 ವರ್ಷ. ಅವರಿಗೆ ಹುಟ್ಟುಹಬ್ಬದ ಶುಭಾಶಯ….

Advertisement

 


ಸುಳ್ಯ: ಖ್ಯಾತ ಕವಿ, ಹಿರಿಯ ಸಾಹಿತಿ ಸುಬ್ರಾಯ ಚೊಕ್ಕಾಡಿಯವರಿಗೆ ಇಂದು 80 ವರುಷ. ತನ್ನ ಕವನಗಳ ಮೂಲಕ ಲಕ್ಷಾಂತರ ಕನ್ನಡಿಗರ ಮನಸೂರೆಗೊಂಡ ನಾಡಿನ ಹೆಮ್ಮೆಯ ಕವಿ ಚೊಕ್ಕಾಡಿಯವರಿಗೆ  ಅವರ ಅಭಿಮಾನಿಗಳು, ಶಿಷ್ಯರು ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.

(ಕೃಪೆ – ಲಹರಿ ಭಾವಗೀತೆಗಳು)

ನೂರಾರು ಭಾವಗೀತೆಗಳು, ಕವಿತೆಗಳನ್ನು ರಚಿಸಿ ಕನ್ನಡ ಸಾಹಿತ್ಯ ಲೋಕವನ್ನು ಸಂಪನ್ನಗೊಳಿಸಿದ ಹೆಮ್ಮೆಯ ಕವಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತಿದೆ. 80ರ ಹರೆಯದಲ್ಲೂ ಮಗು ಮನಸಿನ, ಯುವಕರ ಉತ್ಸಾಹದಲ್ಲಿರುವ ಚೊಕ್ಕಾಡಿಯವರು ಸಾಹಿತ್ಯ ಕೃಷಿಯಲ್ಲಿ ತಲ್ಲೀನರಾಗಿದ್ದಾರೆ. ಅವರ ಕವನ ಸಂಕಲನ ‘ಕಲ್ಲು ಮಂಟಪ’ ಜನ್ಮ ದಿನದಂದೇ ಬಿಡುಗಡೆಯಾಗಲಿದೆ ಎಂಬುದು ಅವರ ಸಾಹಿತ್ಯ ಅಭಿಮಾನಿಗಳ ಸಂತಸವನ್ನು ಇನ್ನಷ್ಟು ಹೆಚ್ಚಿಸಲಿದೆ.

ಚೊಕ್ಕಾಡಿ ಬದುಕು-ಬರಹ: ವಿಶೇಷ ಕಾರ್ಯಕ್ರಮ ಇಂದು

ಸುಬ್ರಾಯ ಚೊಕ್ಕಾಡಿ ಅವರ ಜನ್ಮದಿನದ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಫ್ರೆಂಡ್ಸ್ ಕ್ಲಬ್ ಪೈಲಾರು ಇವರ ಜಂಟಿ ಸಹಯೋಗದಲ್ಲಿ ಸುಬ್ರಾಯ ಚೊಕ್ಕಾಡಿಯವರ ಬದುಕು-ಬರಹಗಳ ಬಗ್ಗೆ ಅವಲೋಕನ ಎಂಬ ವಿಶೇಷ ಕಾರ್ಯಕ್ರಮವನ್ನು ಜೂನ್ 29 ಸೋಮವಾರ ಸಂಜೆ ಗಂಟೆ 5.00 ಕ್ಕೆ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮ ಆಯೋಜಿಸುವ ಮೂಲಕ ಅವರ ತವರಿನಲ್ಲೇ ಗೌರವಿಸುವ ಕಾರ್ಯಕ್ರಮವನ್ನು ಸಾಹಿತ್ಯ ಪರಿಷತ್ತು ಮತ್ತು ಫ್ರೆಂಡ್ಸ್ ಕ್ಲಬ್ ಜೊತೆಯಾಗಿ ಹಮ್ಮಿಕೊಂಡಿದೆ. ಇದೇ ಸಂದರ್ಭ ಅವರ ಕವನ ಸಂಕಲನ “ಕಲ್ಲು ಮಂಟಪ” ಬಿಡುಗಡೆಯಾಗಲಿದೆ.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಚೊಕ್ಕಾಡಿಯವರ ಸಾಹಿತ್ಯ ಲೋಕದ ಪಯಣದ ಬಗ್ಗೆ ಮಾತನಾಡಿ ಅವರ ಕವನ ಸಂಕಲನ ಕಲ್ಲು ಮಂಟಪ ವನ್ನು ಹಿರಿಯ ಸಾಹಿತಿ, ಉಪನ್ಯಾಸಕ ಡಾ.ಪೂವಪ್ಪ ಕಣಿಯೂರು ಬಿಡುಗಡೆ ಮಾಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಯುವ ಬರಹಗಾರ-ಶಿಕ್ಷಕ ಅರವಿಂದ ಚೊಕ್ಕಾಡಿ ಹಾಗೂ ಬೆಳ್ತಂಗಡಿ ತಾಲೂಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಬೆಳಾಲು ಭಾಗವಹಿಸಲಿದ್ದಾರೆ. ಖ್ಯಾತ ಗಾಯಕ ರಮೇಶ್ ಮೆಟ್ಟಿನಡ್ಕ ಚೊಕ್ಕಾಡಿಯವರ ಭಾವಗೀತೆ ಗಳನ್ನು ಹಾಡಲಿದ್ದು,ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿದೆ.

ಸೀಮಿತ ಸಂಖ್ಯೆಯಲ್ಲಿ ಚೊಕ್ಕಾಡಿಯವರ ಅಭಿಮಾನಿಗಳು, ಶಿಷ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಸಾಹಿತ್ಯ ಪರಿಷತ್ತು ಪ್ರಕಟಣೆ ತಿಳಿಸಿದೆ.

 

 

ಜನ್ಸಾಲೆ – ಮುನಿಸು ತರವೇ ಮುಗುದೇ…..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

8 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

23 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

23 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

24 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

24 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

24 hours ago