Advertisement
ಅನುಕ್ರಮ

ನಮ್ಮ ಭವಿಷ್ಯದ ಬೆಳೆ : ಗೇರುಬೀಜ

Share

 

ರಬ್ಬರ್ ಕೃಷಿಗೆ ಮನಸೋತು ಗೇರುಬೀಜದ ಕಾಡನ್ನೆಲ್ಲ ಕಡಿದವರು ಮತ್ತೆ ಗೇರುಬೀಜ ಸೂಕ್ತ ಅಂತ ತಿಳಿದುಕೊಂಡು ಅದರತ್ತ ಮನಸ್ಸು ಮಾಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಗೇರು ಕೃಷಿಗೆ ಹೊಸತನ, ಹೊಸ ಉತ್ಸಾಹ ಮತ್ತು ಹೊಸತಳಿಗಳು ಮುಪ್ಪುರಿಗೊಂಡು ಅದೊಂದು ಭವಿಷ್ಯದ ಬೆಳೆ ಎಂಬುದು ಸಾಬೀತಾಗಿದೆ. ಅಲ್ಲಿ ಇಲ್ಲಿ ಜಾಗ ಇದ್ದ ಕೃಷಿಕರು ಈಗ ಅದನ್ನು ಅಡಿಕೆ ಅಥವ ರಬ್ಬರಿಗೆ ಮೀಸಲಿಡುವ ಬದಲು ಗೇರುಬೀಜದ ತೋಟಕ್ಕೆ ಮೀಸಲಿಡುತ್ತಿದ್ದಾರೆ. ಇನ್ನೂ ನಾವು ಬಹುತೇಕ ಕೃಷಿ ಭೂಮಿ ಯಾವುದೇ ಕೃಷಿ ಮಾಡದೆ ಸುಮ್ಮನೆ ಬಿಟ್ಟಿದ್ದೇವೆ ಎಂದಾದರೆ ಅಲ್ಲಿ ಗೇರುಬೀಜದ ಕೃಷಿ ಅತ್ಯಂತ ಸೂಕ್ತ. ಆಧುನಿಕ ಕೃಷಿ ವಿಧಾನಗಳನ್ನು ಗೇರುಕೃಷಿಯಲ್ಲಿ ಅಳವಡಿಸಿಕೊಂಡರೆ ಇಳುವರಿಯೂ ದುಪ್ಪಟ್ಟು ಸಿಗುತ್ತದೆ. ಕಾಲಕಾಲಕ್ಕೆ ಗಿಡ ಮರಗಳಿಗೆ ಬೇಕಾದ ಆರೈಕೆ, ಗೊಬ್ಬರ ಪೂರೈಕೆ ಮಾಡಿದರೆ, ಗೆಲ್ಲು ಸವರುವಿಕೆ ಕಡೆಗೆ ಗಮನ ಕೊಟ್ಟರೆ ಉದ್ದೇಶಿಸಿದ ಫಸಲು ಕೊಡುವ ಅನೇಕ ತಳಿಗಳು ಈಗ ಇವೆ.

ಮೊದಲೆಲ್ಲ ಗೇರುಬೀಜದ ಮರಗಳೆಂದರೆ ಅದು ಬೇಕಾಬಿಟ್ಟಿ ಬೆಳೆಯುತ್ತಿತ್ತು. ಅನೇಕ ವರ್ಷಗಳಿಂದ ಬೆಳೆದುನಿಂತ ಮರಗಳು ಕೂಡ ಅಲ್ಲಿದ್ದವು. ಗೇರುಬೀಜದ ಒಟ್ಟು ಕೃಷಿಯ ಬಗ್ಗೆ ಆ ಕಾಲದಲ್ಲಿ ಹೇಳಿಕೊಳ್ಳುವ ಉತ್ಸಾಹ ಮತ್ತು ಹುರುಪುಗಳಿರಲಿಲ್ಲ. ಬಿಡುವಿನ ಸಮಯದಲ್ಲಿ ಗೇರುಬೀಜ ಸಂಗ್ರಹಕ್ಕೆ ಹೋಗುತ್ತಿದ್ದರು ಇಲ್ಲವೆ ಕೂಡು ಕುಟುಂಬಗಳಿದ್ದ ಕಾಲವಾದ್ದರಿಂದ ನಾಲ್ಕು ಜನ ಅಣ್ಣ ತಮ್ಮಂದಿರಿದ್ದರೆ ಅವರಲ್ಲಿ ಒಬ್ಬ ಗೇರುಬೀಜ ಕೊಯ್ಲಿಗೆ ಮೀಸಲಿರುತ್ತಿದ್ದ. ಗುಡ್ಡದಲ್ಲಿನ ಗೇರುಮರಗಳಿಂದ ಬಿದ್ದ ಗೇರುಬೀಜಗಳನ್ನು ಮಾತ್ರ ಹೆಕ್ಕಿ ತರುವ ಕ್ರಮ ಅಂದಿರಲಿಲ್ಲ. ಅವರು ಮರದಿಂದ ಕೊಯ್ದು ಸಂಗ್ರಹಿಸುತ್ತಿದ್ದರು. ಅದರಲ್ಲಿ ಎಲ್ಲ ಬಗೆಯ ಗೇರುಬೀಜಗಳೂ ಇರುತ್ತಿದ್ದವು. ಹಸಿ ಇದ್ದರೆ ಅದರ ಮೇಲೆ ಒಲೆಯಿಂದ ತೆಗೆದ ಬೂದಿ ಹಾಕಿ ಬಿಸಿಲಿಗೆ ಒಣಗಲು ಬಿಡುತ್ತಿದ್ದರು. ಒಟ್ಟು ಗೇರುಬೀಜಕ್ಕೆ ದೊಡ್ಡ ಗುಣಮಟ್ತ ಅಂತ ಇರಲಿಲ್ಲ. ಎಲ್ಲವೂ ಮಿಶ್ರವಾಗಿರುತ್ತಿತ್ತು.

ಅಂದಿನ ಗೇರುಕೃಷಿಯಲ್ಲಿ ವೈಜ್ಞಾನಿಕ ಕೃಷಿಯ ಹೊಳಹುಗಳಿರಲಿಲ್ಲ. ಅವು ಅವರಷ್ಟಕ್ಕೆ ಬಳ್ಳಿ ಬಲ್ಲೆಗಳನ್ನು ತುಂಬಿಕೊಂಡು ಬೆಳೆದುನಿಂತವುಗಳು. ಯಾವಾಗಲೋ ಹೂವು ಬಿಟ್ಟು ಮಳೆಗಾಲದ ನಡುವಿನವರೆಗೂ ಗೇರುಬೀಜ ಸಿಗುತ್ತಿತ್ತು. ಮಳೆಗಾಲದ ಮೊಳಕೆಯೊಡೆದ ಗೇರುಬೀಜಗಳನ್ನು ಕೂಡ ಅಂದಿನ ಕೃಷಿಕರು ಪ್ರೀತಿಸುತ್ತಿದ್ದರು. ಗುಡ್ಡಗಳಿಗೆ ಅಲೆದು ಅವನ್ನೆಲ್ಲ ಹೆಕ್ಕಿ ಪದಾರ್ಥ ಮಾಡಿ ಉಂಡು ತೇಗುತ್ತಿದ್ದರು. ಆ ಕಾಲದಲ್ಲಿ ಗೇರುತೋಟದಿಂದ ಕಳವು ಕೂಡ ಜೋರಿತ್ತು. ಕೇವಲ ಗೇರುಬೀಜಕ್ಕಾಗಿ ಅನೇಕ ಮನೆ ಮನಸ್ಸುಗಳು ಮನಸ್ತಾಪಗೊಂಡು ನೆರೆ ಹೊರೆ ಹೊಡೆದಾಟಗಳೂ ಆಗುತ್ತಿದ್ದವು. ಅದಕ್ಕೆ ಬಡತನ ಕಾರಣ. ಇಂದು ಹಾಗಿಲ್ಲ. ಇದ್ದರೂ ಅಷ್ಟಿಲ್ಲ. ಎಲ್ಲರಿಗೂ ಮರ್ಯಾದೆಯ ಬದುಕು ಬೇಕಾದ ಕಾರಣ ಕಳ್ಳತನಗಳು ಕಡಿ ಮೆಯಾಗಹತ್ತಿವೆ.

 

ಈಗ ಹಾಗಲ್ಲ. ಗೇರು ಕೃಷಿಕರಿಗೆ ಬೇಕು ಬೇಕಾದ ರೀತಿಯ ಹೊಸ ಹೊಸ ತಳಿವೈವಿಧ್ಯಗಳನ್ನು ವಿಜ್ಞಾನಿಗಳು ಸಂಶೋಧನೆ ಮಾಡಿ ಒದಗಿಸುತ್ತಿದ್ದಾರೆ. ಕೃಷಿ ಕ್ಷೇತ್ರದ ಮಣ್ಣಿಗೆ ಸರಿಹೊಂದುವ ತಳಿಗಳನ್ನು ಆಯ್ಕೆ ಮಾಡಿ ವೈಜ್ಞಾನಿಕ ರೀತಿಯಲ್ಲಿ ಕೃಷಿ ಮಾಡುವ ವಿಧಾನಗಳು ಕೂಡ ಗೇರು ಸಂಶೋಧನಾ ಕೇಂದ್ರಗಳಿಂದ ಸಿಗುತ್ತಿದೆ. ಪುತ್ತೂರಿನಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯವಂತು ಹೊಸ ಗೇರು ತಳಿಗಳನ್ನು ಸಂಶೋಧನೆ ಮಾಡುವುದು, ಕೃಷಿಯಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವುದು, ಕೃಷಿಕರೊಂದಿಗೆ ಸಂವಾದ, ಕೃಷಿ ಕ್ಷೇತ್ರಗಳಿಗೆ ಭೇಟಿ, ಮಾಹಿತಿ ವಿನಿಮಯ, ಕೃಷಿ ತಾಂತ್ರಿಕತೆಯ ವಿನಿಮಯ ಹೀಗೆ ಹತ್ತು ಹಲವು ರೀತಿಯಲ್ಲಿ ಅದು ಗೇರು ಕೃಷಿಯ ವಿಸ್ತರಣೆಗೆ ಹೆಚ್ಚಿನ ಗಮನ ಕೊಡುತ್ತಿದೆ. ಕೃಷಿ ಇಲಾಖೆಗಳು ಕೂಡ ಗೇರು ಕೃಷಿಯತ್ತ ಜನರನ್ನು ಸೆಳೆಯಲು ಹೆಚ್ಚಿನ ಗಮನ ಕೊಡುತ್ತಿವೆ.

ಅಡಿಕೆ ಕೃಷಿಕರು ಒಂದಷ್ಟು ಜಾಗವಿದ್ದಲ್ಲಿ ಗೇರುಕೃಷಿಗೆ ತೊಡಗುವುದು ಒಳ್ಳೆಯದು. ಯಾವತ್ತು ಸಮಗ್ರ ಕೃಷಿಯನ್ನು ಕೃಷಿಕ ತನ್ನ ಜಾಗದಲ್ಲಿ ಅಳವಡಿಸಿಕೊಳ್ಳುತ್ತಾನೋ ಆತ ಒಂದು ಬೆಳೆ ಕೈಕೊಟ್ಟರೆ ಮತ್ತೊಂದರಲ್ಲಿ ಆದಾಯ ಗಳಿಸಿ ಪೂರ್ತಿ ಸೋಲದೆ ಇರುತ್ತಾನೆ. ಹತ್ತು ಇಪ್ಪತ್ತು ಗಿಡ ನಡುವಷ್ಟು ಜಾಗವಾದರೂ ಸರಿ ಕೃಷಿಗೆ ಈಗಲೇ ಮನ ಮಾಡುವುದು ಸೂಕ್ತ. ಅಡಿಕೆ ತೋಟದ ಬದಿಗಳಲ್ಲಿ ಬಿಸಿಲು ಬೀಳುವ ಜಾಗವಿದ್ದರೆ ಅಲ್ಲೂ ಗಿಡ ನಡಬಹುದು. ಈಗ ಗೆಲ್ಲು ಸವರುವ ಕ್ರಮ ಬಂದಿರುವುದರಿಂದ ಗೇರು ಮರಗಳು ದೊಡ್ಡದಾಗಿ ಬೆಳೆಯಲು ಅನುಕೂಲವಿಲ್ಲ. ಇನ್ನೊಂದು ಬೆಳೆಗೆ ತೊಡಕಾಗುವ ಪ್ರಮೇಯವೂ ಇಲ್ಲ.

ಗೇರು ಕೃಷಿಯನ್ನು ತಾತ್ಸಾರ ಮಾಡುವ ಮನೋಭಾವವನ್ನು ಇನ್ನೂ ಯಾರಾದರೂ ಉಳಿಸಿಕೊಂಡಿದ್ದರೆ ಅದನ್ನು ಬಿಟ್ಟುಬಿಡಬಹುದು. ಈಗಂತು ಗೇರು ಬೆಳೆಗಾರರ ಅಖಿಲ ಭಾರತ ಮಟ್ಟದ ಸಂಘಟನೆ ಅಸ್ತಿತ್ವಕ್ಕೆ ಬಂದಾಗಿದೆ. ಮುಂದೆ ಉತ್ತಮ ಧಾರಣೆ ಬಂದು ತೋಟ ವಿಸ್ತರಣೆಗೆ ಇದು ಪ್ರೇರಣೆಯಾಗಬಹುದು. ಇನ್ನಷ್ಟು ಹೊಸ ರೋಗನಿರೋಧಕ ತಳಿಗಳು ಬರಬಹುದು. ಧಾರಣೆಯ ಬಗೆಗೆ ನಿಗಾ ವಹಿಸಲು ಬೆಳೆಗಾರರ ಸಂಘಟನೆ ಅನುಕೂಲ. ಈಗ ವಿದೇಶದಿಂದ ಆಮದಾಗುವ ಪ್ರಮಾಣದ ಗೋಡಂಬಿಯನ್ನು ವಿದೇಶಗಳಿಗೆ ರಫ್ತು ಮಾಡುವ ದಿನಗಳು ದೂರವಿಲ್ಲ. ಆದ ಕಾರಣ ಗೇರು ಕೃಷಿ ಎಂಬುದು ಭವಿಷ್ಯದ ಬೆಳೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಶಂ. ನಾ. ಖಂಡಿಗೆ

ಕೃಷಿಕ, ಬರಹಗಾರರು

View Comments

Published by
ಶಂ. ನಾ. ಖಂಡಿಗೆ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

1 hour ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

7 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

8 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

16 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

18 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

24 hours ago