ಮೈಸೂರು: ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡು ಜನರನ್ನು ಬಲಿ ಪಡೆದುಕೊಂಡಿದ್ದ ನರ ಭಕ್ಷಕ ಹುಲಿ ಕಾರ್ಯಾಚರಣೆಯ ಮೂಲಕ ಸೆರೆಯಾಗಿದೆ.
ಗುಂಡ್ಲು ಪೇಟೆ ಸಮೀಪದ ಮೇಲಕಾಮನಹಳ್ಳಿಯ ಸಿದ್ದಕ್ಕಿ ಎಂಬುವವರ ಜಮೀನಿನಲ್ಲಿ ಅಡಗಿ ಕುಳಿತಿದ್ದ ಹುಲಿಯನ್ನು ಪೋಲೀಸ್ ಇಲಾಖೆಯ ನಾಯಿ ರಾಣಾ ಪತ್ತೆ ಹಚ್ಚಿದೆ. ಕಳೆದ 5 ದಿನಗಳಿಂದಲೂ ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯಲು ಭಾರೀ ಕಾರ್ಯಾಚರಣೆ ನಡೆಸುತಿದ್ದು ಮೂರು ಆನೆಗಳ ಸಹಿತ ನೂರಾರು ಸಿಬ್ಬಂದಿಗಳು ಪ್ರಯತ್ನ ನಡೆಸಿದ್ದರು. ಆದರೆ 5 ದಿನಗಳಿಂದ ಯಾರ ಕಣ್ಣೀಗೂ ಬಿದ್ದಿಲ್ಲದ ಹುಲಿಯು ನಿನ್ನೆ ಕೂಡ ಕರುವೊಂದನ್ನು ಹೊತ್ತೊಯ್ದಿತ್ತು. ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಗೆ ಅರಿವಳಿಕೆ ನೀಡುವಲ್ಲಿ ಯಶಸ್ವಿಯಾಗಿದ್ದು ಅರವಳಿಕೆ ವೈದ್ಯ ಡಾ.ನಾಗರಾಜು, ಗುರಿಕಾರ ಅಸ್ಗರ್ ಮತ್ತು ಸಿಬ್ಬಂದಿಗಳಿಂದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…