ನರೇಂದ್ರ ಪ.ಪೂ. ಕಾಲೇಜು ವತಿಯಿಂದ ಕುರಿಯ ಗ್ರಾಮದಲ್ಲಿ ವೃಕ್ಷಾರೋಪಣ

August 4, 2019
4:00 PM

ಪುತ್ತೂರು: ವಿದ್ಯಾರ್ಥಿಗಳಲ್ಲಿ ಕಂಡು ಬರುತ್ತಿರುವ ಗಿಡನೆಡುವ ಉತ್ಸಾಹವು ಹಿರಿಯರಾದ ನಮಗೆ ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಪ್ರೇರಣೆಯಾಗಿದೆ ಎಂದು ಗ್ರಾಮ  ಪಂಚಾಯತ್ ಸದಸ್ಯರಾದ  ರೇಖನಾಥ್ ಹೇಳಿದರು.

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶಯದ ಗ್ರಾಮ ವಿಕಾಸ ಯೋಜನೆಯಲ್ಲಿ ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಇದರ ವತಿಯಿಂದ ನೈತಾಡಿ ಹಾಗೂ ಕುರಿಯ ಗ್ರಾಮದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಇದರ ವತಿಯಿಂದ ನೈತಾಡಿ ಹಾಗೂ ಕುರಿಯ ಗ್ರಾಮದ ಸುಮಾರು 50 ಮನೆಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ವೃಕ್ಷಾರೋಪಣ 2019 ಎಂಬ ವಿಶಿಷ್ಟ ಕಲ್ಪನೆಯಲ್ಲಿ ಸಾಕಾರಗೊಂಡ ಈ ವನಮಹೋತ್ಸವ ಕಾರ್ಯಕ್ರಮವು ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿಯನ್ನಲ್ಲದೆ ಸಮಾಜ ದರ್ಶನದ ಅನುಭವವನ್ನೂ ನೀಡಿತು.

ಕಾರ್ಯಕ್ರಮದ ಯಶಸ್ಸಿಗೆ ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ತಾಲೂಕು ಪಂಚಾಯತ್ ಸದಸ್ಯರಾದ  ಶಿವರಂಜನ್, ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರೂಪಲೇಖ, ಸಂಚಾಲಕರಾದ ವಿಜಯಕೃಷ್ಣ ಭಟ್ , ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ , ಗ್ರಾಮಸ್ಥರಾದ ಯಶವಂತ್, ಅಭಿಷೇಕ್, ಚಂದ್ರಪ್ರಕಾಶ್, ಚಂದ್ರಹಾಸ ರೈ ಡಿಂಬ್ರಿ, ಪುರಂದರ, ಸಂಯೋಜಕ ಉಪನ್ಯಾಸಕರಾದ ವಿಘ್ನೇಶ ವೈ , ಹಾಗೂ ಉಪನ್ಯಾಸಕರು , ವಿದ್ಯಾರ್ಥಿಗಳು ಸಹಕರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror