ಪುತ್ತೂರು: ವಿದ್ಯಾರ್ಥಿಗಳಲ್ಲಿ ಕಂಡು ಬರುತ್ತಿರುವ ಗಿಡನೆಡುವ ಉತ್ಸಾಹವು ಹಿರಿಯರಾದ ನಮಗೆ ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಪ್ರೇರಣೆಯಾಗಿದೆ ಎಂದು ಗ್ರಾಮ ಪಂಚಾಯತ್ ಸದಸ್ಯರಾದ ರೇಖನಾಥ್ ಹೇಳಿದರು.
ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶಯದ ಗ್ರಾಮ ವಿಕಾಸ ಯೋಜನೆಯಲ್ಲಿ ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಇದರ ವತಿಯಿಂದ ನೈತಾಡಿ ಹಾಗೂ ಕುರಿಯ ಗ್ರಾಮದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಇದರ ವತಿಯಿಂದ ನೈತಾಡಿ ಹಾಗೂ ಕುರಿಯ ಗ್ರಾಮದ ಸುಮಾರು 50 ಮನೆಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ವೃಕ್ಷಾರೋಪಣ – 2019 ಎಂಬ ವಿಶಿಷ್ಟ ಕಲ್ಪನೆಯಲ್ಲಿ ಸಾಕಾರಗೊಂಡ ಈ ವನಮಹೋತ್ಸವ ಕಾರ್ಯಕ್ರಮವು ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿಯನ್ನಲ್ಲದೆ ಸಮಾಜ ದರ್ಶನದ ಅನುಭವವನ್ನೂ ನೀಡಿತು.
ಕಾರ್ಯಕ್ರಮದ ಯಶಸ್ಸಿಗೆ ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ತಾಲೂಕು ಪಂಚಾಯತ್ ಸದಸ್ಯರಾದ ಶಿವರಂಜನ್, ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರೂಪಲೇಖ, ಸಂಚಾಲಕರಾದ ವಿಜಯಕೃಷ್ಣ ಭಟ್ , ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ , ಗ್ರಾಮಸ್ಥರಾದ ಯಶವಂತ್, ಅಭಿಷೇಕ್, ಚಂದ್ರಪ್ರಕಾಶ್, ಚಂದ್ರಹಾಸ ರೈ ಡಿಂಬ್ರಿ, ಪುರಂದರ, ಸಂಯೋಜಕ ಉಪನ್ಯಾಸಕರಾದ ವಿಘ್ನೇಶ ವೈ , ಹಾಗೂ ಉಪನ್ಯಾಸಕರು , ವಿದ್ಯಾರ್ಥಿಗಳು ಸಹಕರಿಸಿದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…