ಉಪ್ಪಿನಂಗಡಿ: ನರೇಂದ್ರ ಮೋದಿ ಅವರು ಇಂದು ಸಂಜೆ ದೇಶದ ಪ್ರಧಾನಿಯಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವರು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಯಲ್ಲಿ 15 ಅಟೋ ರಿಕ್ಷಾ ಚಾಲಕರಿಂದ ವಿನೂತನ ಸೇವೆ ನಡೆಯುತ್ತಿದೆ. 5 ಕಿ ಮೀ ವ್ಯಾಪ್ತಿಯೊಳಗಿನ ಪ್ರಯಾಣಿಕರಿಗೆ ದಿನವಿಡೀ ಉಚಿತ ಪ್ರಯಾಣ ಸೇವೆ. ದೇಶದ ಭವ್ಯ ಭವಿಷ್ಯದಲ್ಲಿ ಜನ ಸಾಮಾನ್ಯರಿಗೆ ಅನುಕೂಲವಿದೆ ಎಂಬುವುದಕ್ಕೆ ಸಾಕ್ಷಿಯಾಗಿ ಈ ರೀತಿಯ ಉಚಿತ ಸೇವೆ ನೀಡುತ್ತಿದ್ದಾರೆ.
ಅದೇ ರೀತಿ ಇಂದು ಸಂಜೆ ಗಂಟೆ 5 ರಿಂದ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಭಾರತದ ಪ್ರಧಾನ ಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದ ನೇರಪ್ರಸಾರವನ್ನು LED ಪರದೆಯ ಮೂಲಕ ವೀಕ್ಷಿಸುವ ವ್ಯವಸ್ಥೆಯನ್ನು ಯುವಬ್ರಿಗೆಡ್ ಸಹಿತ ವಿವಿಧ ಸಂಘಟನೆಗಳ ಸಹಕಾರದಿಂದ ನಡೆಯುತ್ತಿದೆ.
ವಿಶೇಷವಾಗಿ ಲಾಡು ಮತ್ತು ಚಹಾದ ವ್ಯವಸ್ಥೆ ಇರುತ್ತದೆ. ಅಲ್ಲದೆ ಆಕರ್ಷಕ “ಸಿಡಿಮದ್ದು” ಪ್ರದರ್ಶನ ಇರಲಿದೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…