ಸುದ್ದಿಗಳು

ನರೇಂದ್ರ ರೈ ದೇರ್ಲ ಅವರಿಗೆ ಕುವೆಂಪು ಭಾಷಾ ಭಾರತಿ ಪ್ರಶಸ್ತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಡಾ| ನರೇಂದ್ರ ರೈ ದೇರ್ಲ ಅವರು ತುಳುವಿಗೆ ಅನುವಾದಿಸಿದ ಪೂರ್ಣಚಂದ್ರ ತೇಜಸ್ವಿಯವರ ಜನಪ್ರಿಯ ಕಾದಂಬರಿ ‘ಕರ್ವಾಲೋ’ ಅನುವಾದಕ್ಕೆ 2018ರ ಅತ್ಯುತ್ತಮ ಅನುವಾದ ಪ್ರಶಸ್ತಿ ಲಭಿಸಿದೆ.

Advertisement
Advertisement

ಕನ್ನಡದಿಂದ ಭಾರತೀಯ ಭಾಷೆಗಳಿಗೆ ಅನುವಾದಗೊಳ್ಳುವ ಕೃತಿಗಳಿಗೆ ‘ಕುವೆಂಪು ಭಾಷಾ ಭಾರತಿ’ ಸಂಸ್ಥೆ ಈ ಪ್ರಶಸ್ತಿಯನ್ನು ನೀಡುತ್ತದೆ. ಪ್ರಶಸ್ತಿಯು ರೂ. 25,000-00 ನಗದು ಮತ್ತು ಪ್ರಶಸ್ತಿ ಫಲಕವನ್ನು ಹೊಂದಿರುತ್ತದೆ. ಮುಂದಿನ ಡಿಸೆಂಬರ್ ತಿಂಗಳಲ್ಲಿ ಬೆಂಗಳೂರಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈಗಾಗಲೇ ಸುಮಾರು ಹತ್ತು ಭಾಷೆಗಳಿಗೆ ಅನುವಾದಗೊಂಡ ತೇಜಸ್ವಿಯವರ ‘ಕರ್ವಾಲೋ’ ಕಾದಂಬರಿಯನ್ನು ದೇರ್ಲ ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಗಾಗಿ ಅನುವಾದಿಸಿದ್ದರು. ಶ್ರೀ ಎ. ಸಿ. ಭಂಡಾರಿಯವರ ಅಧ್ಯಕ್ಷಾವಧಿಯಲ್ಲಿ ಈ ಕೃತಿ ತುಳುವಿಗೆ ಅನುವಾದಗೊಂಡಿತ್ತು.

ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿರುವ ಡಾ| ನರೇಂದ್ರ ರೈ ದೇರ್ಲ ಅವರು ‘ತರಂಗ’ ಸಾಪ್ತಾಹಿಕದಲ್ಲಿ ಏಳು ವರ್ಷಗಳ ಕಾಲ ಸಹ ಸಂಪಾದಕರಾಗಿ ಅನಂತರ ನಾಡಿನ ಅನೇಕ ಪತ್ರಿಕೆಗಳಲ್ಲಿ ಅಂಕಣಗಾರರಾಗಿ, ಲೇಖಕರಾಗಿ ಪರಿಸರ, ಸಾಹಿತ್ಯ, ಕೃಷಿಯ ಬಗ್ಗೆ ಲೇಖನಗಳನ್ನು ಬರೆದವರು. ಸುಮಾರು ಮೂವತ್ತಕ್ಕಿಂತಲೂ ಹೆಚ್ಚು ಕೃತಿಗಳನ್ನು ಈಗಾಗಲೇ ಬರೆದ, ಸಂಪಾದಿಸಿದ ದೇರ್ಲ ಅವರಿಗೆ ಈಗಾಗಲೇ ಕರ್ನಾಟಕ ರಾಜ್ಯ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ, ಡಾ| ಹಾ. ಮಾ. ನಾಯಕ ಅಂಕಣ ಪ್ರಶಸ್ತಿ, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಅತ್ಯುತ್ತಮ ಕೃಷಿ ಪುಸ್ತಕ ಪ್ರಶಸ್ತಿ, ಅಕ್ಷರ ಪ್ರತಿಷ್ಠಾನ ಪ್ರಶಸ್ತಿ, ಫ. ಗೋ. ಪ್ರಶಸ್ತಿಗಳು ಲಭಿಸಿವೆ. ದೇರ್ಲ ಬರೆದ ಅನೇಕ ಲೇಖನಗಳು, ಪರಿಸರ ಸಂಬಂಧೀ ಬರಹಗಳು ಈಗಾಗಲೇ ಕೇರಳ-ಕರ್ನಾಟಕದ ಅನೇಕ ಪಠ್ಯಗಳಿಗೆ ಪಾಠಗಳಾಗಿ ಸೇರಿವೆ. ‘ಕರಾವಳಿಯ ಕೃಷಿ ಪಲ್ಲಟ ಮತ್ತು ಪರಿಣಾಮ’ ಎಂಬ ಅಧ್ಯಯನಕ್ಕೆ ರೈಯವರು ಅಕಾಡೆಮಿ ಫೆಲೋಶಿಪ್ ಪಡೆದಿದ್ದರು. ನಾಡಿನ ಬಹುತೇಕ ಪತ್ರಿಕೆಗಳಲ್ಲಿ ದೇರ್ಲ ಅವರ ಸಾವಿರಕ್ಕಿಂತಲೂ ಹೆಚ್ಚು ನುಡಿಚಿತ್ರಗಳು ಪ್ರಕಟಗೊಂಡಿವೆ. ಸಂಪನ್ಮೂಲ ವ್ಯಕ್ತಿಗಳಾಗಿ ದೇಶ-ವಿದೇಶಗಳಲ್ಲಿ ಉಪನ್ಯಾಸ ನೀಡಿರುವ ದೇರ್ಲ ಅವರು ಡಿಸೆಂಬರ್ 7ಕ್ಕೆ ನಡೆಯಲಿರುವ ಪುತ್ತೂರು ತಾಲೂಕು ಹತ್ತೊಂಬತ್ತನೆಯ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷರಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

59 minutes ago

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…

1 hour ago

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

1 hour ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

11 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

12 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

15 hours ago