Advertisement
ಸುದ್ದಿಗಳು

ನರೇಂದ್ರ ರೈ ದೇರ್ಲ ಅವರಿಗೆ ಕುವೆಂಪು ಭಾಷಾ ಭಾರತಿ ಪ್ರಶಸ್ತಿ

Share

ಪುತ್ತೂರು: ಡಾ| ನರೇಂದ್ರ ರೈ ದೇರ್ಲ ಅವರು ತುಳುವಿಗೆ ಅನುವಾದಿಸಿದ ಪೂರ್ಣಚಂದ್ರ ತೇಜಸ್ವಿಯವರ ಜನಪ್ರಿಯ ಕಾದಂಬರಿ ‘ಕರ್ವಾಲೋ’ ಅನುವಾದಕ್ಕೆ 2018ರ ಅತ್ಯುತ್ತಮ ಅನುವಾದ ಪ್ರಶಸ್ತಿ ಲಭಿಸಿದೆ.

ಕನ್ನಡದಿಂದ ಭಾರತೀಯ ಭಾಷೆಗಳಿಗೆ ಅನುವಾದಗೊಳ್ಳುವ ಕೃತಿಗಳಿಗೆ ‘ಕುವೆಂಪು ಭಾಷಾ ಭಾರತಿ’ ಸಂಸ್ಥೆ ಈ ಪ್ರಶಸ್ತಿಯನ್ನು ನೀಡುತ್ತದೆ. ಪ್ರಶಸ್ತಿಯು ರೂ. 25,000-00 ನಗದು ಮತ್ತು ಪ್ರಶಸ್ತಿ ಫಲಕವನ್ನು ಹೊಂದಿರುತ್ತದೆ. ಮುಂದಿನ ಡಿಸೆಂಬರ್ ತಿಂಗಳಲ್ಲಿ ಬೆಂಗಳೂರಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈಗಾಗಲೇ ಸುಮಾರು ಹತ್ತು ಭಾಷೆಗಳಿಗೆ ಅನುವಾದಗೊಂಡ ತೇಜಸ್ವಿಯವರ ‘ಕರ್ವಾಲೋ’ ಕಾದಂಬರಿಯನ್ನು ದೇರ್ಲ ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಗಾಗಿ ಅನುವಾದಿಸಿದ್ದರು. ಶ್ರೀ ಎ. ಸಿ. ಭಂಡಾರಿಯವರ ಅಧ್ಯಕ್ಷಾವಧಿಯಲ್ಲಿ ಈ ಕೃತಿ ತುಳುವಿಗೆ ಅನುವಾದಗೊಂಡಿತ್ತು.

ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿರುವ ಡಾ| ನರೇಂದ್ರ ರೈ ದೇರ್ಲ ಅವರು ‘ತರಂಗ’ ಸಾಪ್ತಾಹಿಕದಲ್ಲಿ ಏಳು ವರ್ಷಗಳ ಕಾಲ ಸಹ ಸಂಪಾದಕರಾಗಿ ಅನಂತರ ನಾಡಿನ ಅನೇಕ ಪತ್ರಿಕೆಗಳಲ್ಲಿ ಅಂಕಣಗಾರರಾಗಿ, ಲೇಖಕರಾಗಿ ಪರಿಸರ, ಸಾಹಿತ್ಯ, ಕೃಷಿಯ ಬಗ್ಗೆ ಲೇಖನಗಳನ್ನು ಬರೆದವರು. ಸುಮಾರು ಮೂವತ್ತಕ್ಕಿಂತಲೂ ಹೆಚ್ಚು ಕೃತಿಗಳನ್ನು ಈಗಾಗಲೇ ಬರೆದ, ಸಂಪಾದಿಸಿದ ದೇರ್ಲ ಅವರಿಗೆ ಈಗಾಗಲೇ ಕರ್ನಾಟಕ ರಾಜ್ಯ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ, ಡಾ| ಹಾ. ಮಾ. ನಾಯಕ ಅಂಕಣ ಪ್ರಶಸ್ತಿ, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಅತ್ಯುತ್ತಮ ಕೃಷಿ ಪುಸ್ತಕ ಪ್ರಶಸ್ತಿ, ಅಕ್ಷರ ಪ್ರತಿಷ್ಠಾನ ಪ್ರಶಸ್ತಿ, ಫ. ಗೋ. ಪ್ರಶಸ್ತಿಗಳು ಲಭಿಸಿವೆ. ದೇರ್ಲ ಬರೆದ ಅನೇಕ ಲೇಖನಗಳು, ಪರಿಸರ ಸಂಬಂಧೀ ಬರಹಗಳು ಈಗಾಗಲೇ ಕೇರಳ-ಕರ್ನಾಟಕದ ಅನೇಕ ಪಠ್ಯಗಳಿಗೆ ಪಾಠಗಳಾಗಿ ಸೇರಿವೆ. ‘ಕರಾವಳಿಯ ಕೃಷಿ ಪಲ್ಲಟ ಮತ್ತು ಪರಿಣಾಮ’ ಎಂಬ ಅಧ್ಯಯನಕ್ಕೆ ರೈಯವರು ಅಕಾಡೆಮಿ ಫೆಲೋಶಿಪ್ ಪಡೆದಿದ್ದರು. ನಾಡಿನ ಬಹುತೇಕ ಪತ್ರಿಕೆಗಳಲ್ಲಿ ದೇರ್ಲ ಅವರ ಸಾವಿರಕ್ಕಿಂತಲೂ ಹೆಚ್ಚು ನುಡಿಚಿತ್ರಗಳು ಪ್ರಕಟಗೊಂಡಿವೆ. ಸಂಪನ್ಮೂಲ ವ್ಯಕ್ತಿಗಳಾಗಿ ದೇಶ-ವಿದೇಶಗಳಲ್ಲಿ ಉಪನ್ಯಾಸ ನೀಡಿರುವ ದೇರ್ಲ ಅವರು ಡಿಸೆಂಬರ್ 7ಕ್ಕೆ ನಡೆಯಲಿರುವ ಪುತ್ತೂರು ತಾಲೂಕು ಹತ್ತೊಂಬತ್ತನೆಯ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷರಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

3 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

15 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

15 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

23 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago