ಸವಣೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಹಾಗೂ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾ ಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಹಾಗೂ 29ನೇ ವರ್ಷದ ಸತ್ಯನಾರಾಯಣ ಪೂಜೆ, ಪರಿವಾರ ದೈವಗಳ ನೇಮೋತ್ಸವ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.23 ಮತ್ತು ಫೆ 24 ರಂದು ನಡೆಯಲಿದೆ. ಇದರ ಪೂರ್ವಭಾವಿಯಾಗಿ ಫೆ.16ರಂದು ಗೊನೆ ಮುಹೂರ್ತ ನಡೆಯಿತು.
ದೇವಸ್ಥಾನದ ಅರ್ಚಕ ಹರಿನಾರಾಯಣ ಮನೋಳಿತ್ತಾಯ ಅವರು ಧಾರ್ಮಿಕ ವಿಧಿವಿದಾನ ನೆರವೇರಿಸಿದರು.
ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು, ಮೊಕ್ತೇಸರರಾದ ಮೋಹನ್ದಾಸ್ ರೈ ನಳೀಲು, ಕಿಶೋರ್ ಕುಮಾರ್, ಅರುಣ ಕುಮಾರ್ ರೈ, ಸತೀಶ್ ರೈ ನಳೀಲು, ಪ್ರವೀಣ್ ಕುಮಾರ್, ಪಾಲ್ತಾಡು ನಡುಮನೆ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ನವೀನ್ ರೈ ನಡುಮನೆ, ಸುರೇಶ್ಚಂದ್ರ ರೈ ನಳೀಲು, ದೈವದ ಪರಿಚಾರಕರಾದ ಹರೀಶ್ ಮಡಿವಾಳ, ಬಾಲಕೃಷ್ಣ ಗೌಡ ಪೂಜಾರಿಮನೆ, ಉದಯ, ಮುಂಡಪ್ಪ ಪೂಜಾರಿ ಮೊದಲಾದವರಿದ್ದರು.
ದೇವಳದ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.23, 24ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಹಸಿರುವಾಣಿ ಸಮರ್ಪಣೆ ಫೆ.22ರಂದು ನಡೆಯಲಿದೆ.
ಫೆ.23ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಬಳಿಕ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ದೈವಗಳ ಭಂಡಾರ ತೆಗೆದ ಬಳಿಕ ವಲ್ಮೀಕ ರೂಪಿ ಸುಬ್ರಹ್ಮಣ್ಯ ದೇವರಿಗೆ ರಂಗಪೂಜೆ ನಡೆಯಲಿದೆ. ಸಂಜೆ 7ರಿಂದ ಗುರುಪ್ರಿಯಾ ಶಿವಾನಂದ ನಾಯಕ್ ನಿರ್ದೆಶನದಲ್ಲಿ ಗುರುಕು ಕಲಾಕೇಂದ್ರ ಪುತ್ತೂರು ತಂಡದ ಭಕ್ತಿ ಗೀತಾ ಗಾಯನ ನಡೆಯಲಿದೆ. ವಿಶೇಷ ಅತಿಥಿಯಾಗಿ ಕಲರ್ಸ್ ಕನ್ನಡ ಕನ್ನಡ ಕೋಗಿಲೆಯ ಅಪೇಕ್ಷಾ ಪೈ ಭಕ್ತಿ ಗೀತೆಗಳನ್ನು ಹಾಡಲಿದ್ದಾರೆ. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಫೆ.24ರಂದು ಪ್ರಾತಃ ಕಾಲ ವ್ಯಾಘ್ರ ಚಾಮುಂಡಿಯ ನೇಮೋತ್ಸವ, ಬೆಳಿಗ್ಗೆ ರುದ್ರ ಚಾಮುಂಡಿಯ ನೇಮೋತ್ಸವ ಗುಳಿಗ ದೈವಕ್ಕೆ ತಂಬಿಲ ಸೇವೆ ನಡೆಯಲಿದೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…