Advertisement
ಧಾರ್ಮಿಕ

ನಳೀಲು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಪುತ್ತೂರು ತಾ.ನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ

Share

ಸವಣೂರು: ಪುತ್ತೂರು ತಾಲೂಕಿನಲ್ಲಿ ವಲ್ಮಿಕ (ಹುತ್ತ)ಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ ಹಾಗೂ ಕಾರಣಿಕ ಸಾನಿಧ್ಯ ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಡಿ.1 ಮತ್ತು ಡಿ.2 ರಂದು ನಡೆಯಿತು.

ಡಿ.1ರ ರಾತ್ರಿ ವಿಶೇಷ ಕಾರ್ತಿಕ ಪೂಜೆ ನಡೆಯಿತು. ಡಿ.2ರಂದು ಬೆಳಿಗ್ಗೆ ಗಣಪತಿ ಹೋಮ, ಕ್ಷೇತ್ರದ ನಾಗನಕಟ್ಟೆಯಲ್ಲಿ ನಾಗತಂಬಿಲ, ಸಾಮೂಹಿಕ ಆಶ್ಲೇಷ ಬಲಿ ಸೇವೆ , ಮದ್ಯಾಹ್ನ ಚಂಪಾಷಷ್ಠಿ ಮಹೋತ್ಸವ, ಹೂವಿನ ಪೂಜೆ, ವಿಶೇಷ ಪೂಜೆ, ದೈವಸ್ಥಾನದಲ್ಲಿ ಪರಿವಾರ ದೈವಗಳಿಗೆ ತಂಬಿಲ ಸೇವೆ, ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ಸೇವೆಗಳು ನಡೆಯಿತು.

ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುತ್ತಕ್ಕೆ ಆರಾಧನೆ ನಡೆಯುತ್ತದೆ. ಆದ್ದರಿಂದ ಇದು ಭಕ್ತರ ಪಾಲಿನ ಶ್ರದ್ದೆಯ ಹಾಗೂ ಭಕ್ತಿಯ ಕ್ಷೇತ್ರವಾಗಿದೆ. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಸೇವೆ ಪಡೆಯುವ ಏಕೈಕ ಕ್ಷೇತ್ರವಾಗಿರುವ ಇಲ್ಲಿ ಕಂಕಣ ಭಾಗ್ಯಕ್ಕಾಗಿ, ಸಂತಾನ ಭಾಗ್ಯಕ್ಕೆ, ಉದ್ಯೋಗ, ಇಷ್ಟಾರ್ಥ ಸಿದ್ದಿಗೆ, ವಿದ್ಯೆಗಾಗಿ ಪೂಜೆ ಸಲ್ಲಿಸಿದರೆ ಫಲ ಪ್ರಾಪ್ತಿ ಆಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

ಕ್ಷೇತ್ರದಲ್ಲಿ ಷಷ್ಠಿ ವ್ರತಾಚರಣೆಗೆ ಮಹತ್ವವಿದ್ದು, ಹೆಚ್ಚು ವೃತದಾರಿಗಳು ಪಾಲ್ಗೊಂಡಿದ್ದರು. ಇಲ್ಲಿ ಹುತ್ತದ ರೂಪದಲ್ಲಿರುವ ಸುಬ್ರಹ್ಮಣ್ಯನಿಗೆ ರಂಗಪೂಜೆ, ಹೂವಿನ ಪೂಜೆ, ರಾಹು ಜಪ, ಆಶ್ಲೇಷ ಬಲಿ, ಕುಂಕುಮಾರ್ಚನೆ, ಕಾರ್ತಿಕ ಪೂಜೆ, ನಾಗನ ಕಟ್ಟೆಯಲ್ಲಿ ನಾಗತಂಬಿಲ ಹಾಗೂ ಇತರ ಸೇವೆಗಳಾದ ಆಶ್ಲೇಷ ಬಲಿ, ಸರ್ಪ ಸಂಸ್ಕಾರ, ನವಗ್ರಹ ಶಾಂತಿ ಹೋಮ ನಡೆಯುತ್ತದೆ.

ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ, ಮೊಕ್ತೇಸರರಾದ ಮೋಹನ್‍ದಾಸ್ ರೈ, ಡಾ.ಸುಚೇತಾ ಜೆ.ಶೆಟ್ಟಿ, ನಾರಾಯಣ ರೈ ಮೊದೆಲ್ಕಾಡಿ, ಎನ್ ಚಂದ್ರಶೇಖರ್ ರೈ, ಕಿಶೋರ್ ಕುಮಾರ್, ಅರುಣ್ ಕುಮಾರ್, ಸತೀಶ್ ರೈ, ಪ್ರವೀಣ್ ಕುಮಾರ್, ಅರ್ಚಕ ಶ್ರೀನಿವಾಸ್ ಹೆಬ್ಬಾರ್, ಹರಿನಾರಾಯಣ ಮನೋಳಿತ್ತಾಯ ಭಕ್ತಾದಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

20 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

21 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

23 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago