Advertisement
ಧಾರ್ಮಿಕ

ನಳೀಲು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಪುತ್ತೂರು ತಾ.ನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ

Share

ಸವಣೂರು: ಪುತ್ತೂರು ತಾಲೂಕಿನಲ್ಲಿ ವಲ್ಮಿಕ (ಹುತ್ತ)ಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ ಹಾಗೂ ಕಾರಣಿಕ ಸಾನಿಧ್ಯ ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಡಿ.1 ಮತ್ತು ಡಿ.2 ರಂದು ನಡೆಯಿತು.

Advertisement
Advertisement
Advertisement
Advertisement

Advertisement

ಡಿ.1ರ ರಾತ್ರಿ ವಿಶೇಷ ಕಾರ್ತಿಕ ಪೂಜೆ ನಡೆಯಿತು. ಡಿ.2ರಂದು ಬೆಳಿಗ್ಗೆ ಗಣಪತಿ ಹೋಮ, ಕ್ಷೇತ್ರದ ನಾಗನಕಟ್ಟೆಯಲ್ಲಿ ನಾಗತಂಬಿಲ, ಸಾಮೂಹಿಕ ಆಶ್ಲೇಷ ಬಲಿ ಸೇವೆ , ಮದ್ಯಾಹ್ನ ಚಂಪಾಷಷ್ಠಿ ಮಹೋತ್ಸವ, ಹೂವಿನ ಪೂಜೆ, ವಿಶೇಷ ಪೂಜೆ, ದೈವಸ್ಥಾನದಲ್ಲಿ ಪರಿವಾರ ದೈವಗಳಿಗೆ ತಂಬಿಲ ಸೇವೆ, ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ಸೇವೆಗಳು ನಡೆಯಿತು.

ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುತ್ತಕ್ಕೆ ಆರಾಧನೆ ನಡೆಯುತ್ತದೆ. ಆದ್ದರಿಂದ ಇದು ಭಕ್ತರ ಪಾಲಿನ ಶ್ರದ್ದೆಯ ಹಾಗೂ ಭಕ್ತಿಯ ಕ್ಷೇತ್ರವಾಗಿದೆ. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಸೇವೆ ಪಡೆಯುವ ಏಕೈಕ ಕ್ಷೇತ್ರವಾಗಿರುವ ಇಲ್ಲಿ ಕಂಕಣ ಭಾಗ್ಯಕ್ಕಾಗಿ, ಸಂತಾನ ಭಾಗ್ಯಕ್ಕೆ, ಉದ್ಯೋಗ, ಇಷ್ಟಾರ್ಥ ಸಿದ್ದಿಗೆ, ವಿದ್ಯೆಗಾಗಿ ಪೂಜೆ ಸಲ್ಲಿಸಿದರೆ ಫಲ ಪ್ರಾಪ್ತಿ ಆಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

Advertisement

ಕ್ಷೇತ್ರದಲ್ಲಿ ಷಷ್ಠಿ ವ್ರತಾಚರಣೆಗೆ ಮಹತ್ವವಿದ್ದು, ಹೆಚ್ಚು ವೃತದಾರಿಗಳು ಪಾಲ್ಗೊಂಡಿದ್ದರು. ಇಲ್ಲಿ ಹುತ್ತದ ರೂಪದಲ್ಲಿರುವ ಸುಬ್ರಹ್ಮಣ್ಯನಿಗೆ ರಂಗಪೂಜೆ, ಹೂವಿನ ಪೂಜೆ, ರಾಹು ಜಪ, ಆಶ್ಲೇಷ ಬಲಿ, ಕುಂಕುಮಾರ್ಚನೆ, ಕಾರ್ತಿಕ ಪೂಜೆ, ನಾಗನ ಕಟ್ಟೆಯಲ್ಲಿ ನಾಗತಂಬಿಲ ಹಾಗೂ ಇತರ ಸೇವೆಗಳಾದ ಆಶ್ಲೇಷ ಬಲಿ, ಸರ್ಪ ಸಂಸ್ಕಾರ, ನವಗ್ರಹ ಶಾಂತಿ ಹೋಮ ನಡೆಯುತ್ತದೆ.

Advertisement

ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ, ಮೊಕ್ತೇಸರರಾದ ಮೋಹನ್‍ದಾಸ್ ರೈ, ಡಾ.ಸುಚೇತಾ ಜೆ.ಶೆಟ್ಟಿ, ನಾರಾಯಣ ರೈ ಮೊದೆಲ್ಕಾಡಿ, ಎನ್ ಚಂದ್ರಶೇಖರ್ ರೈ, ಕಿಶೋರ್ ಕುಮಾರ್, ಅರುಣ್ ಕುಮಾರ್, ಸತೀಶ್ ರೈ, ಪ್ರವೀಣ್ ಕುಮಾರ್, ಅರ್ಚಕ ಶ್ರೀನಿವಾಸ್ ಹೆಬ್ಬಾರ್, ಹರಿನಾರಾಯಣ ಮನೋಳಿತ್ತಾಯ ಭಕ್ತಾದಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…

9 hours ago

ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…

9 hours ago

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ

ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…

9 hours ago

ಮಹಾಕುಂಭದಿಂದ ನಿರ್ಗಮಿಸಲು ವಿಶೇಷ ರೈಲು ಸಂಚಾರ | ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲು ಓಡಾಟ

ರೈಲ್ವೆ ಇಲಾಖೆ ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

9 hours ago

ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

ಮ್ಯಾನ್ಮಾರ್‌ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…

10 hours ago

ಹೆಚ್ಚುತ್ತಿರುವ ಅಡಿಕೆ ವಂಚನೆ ಪ್ರಕರಣ | ಅಡಿಕೆ ಬೆಳೆಗಾರರಲ್ಲಿ ಇರಲಿ ಎಚ್ಚರ |

ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ…

11 hours ago