ಪುತ್ತೂರು: ನವ್ಯ ಕಾವ್ಯ ಕರ್ನಾಟಕದ ಮೊತ್ತ ಮೊದಲ, ಕನ್ನಡ ಕವಿತೆಗಳ ಪ್ರಕಟಣೆ ಮತ್ತು ಪ್ರಸಾರಕ್ಕಾಗಿಯೇ ನಿರ್ಮಿತವಾದ ಅಂತರ್ಜಾಲ ತಾಣ. ಈ ತಾಣದ ಮೂಲಕ ಕಾವ್ಯ ಲಹರಿ 2019 ಕವನ ಸ್ಪರ್ಧೆಯನ್ನು ಆಯೋಜಿಸಿದೆ.
ನವ್ಯ ಕಾವ್ಯ ಜಾಲತಾಣವು ಉದಯೋನ್ಮುಖ ಕನ್ನಡ ಕವಿ-ಕವಯಿತ್ರಿಗಳ ಪ್ರತಿಭಾ ಪ್ರದರ್ಶನಕ್ಕೆ ಮತ್ತು ಕಾವ್ಯಾಸಕ್ತರ ಮನೋರಂಜನೆಗೆ ತಕ್ಕುದಾದ ವೇದಿಕೆಯಾಗಿದ್ದು, ನವರಸಯುಕ್ತ ಕವನಗಳ ಭರಪೂರ ಆನಂದವನ್ನು ಪಡೆಯಬಹುದು. ಅಲ್ಲದೆ ನವ ಪೀಳಿಗೆಯಲ್ಲಿ ಕನ್ನಡ ಸಾಹಿತ್ಯದ ಕುರಿತಾಗಿ ಆಸಕ್ತಿಯನ್ನು ಚಿಗುರಿಸಿ, ಯುವಕ-ಯುವತಿಯರನ್ನು
ಕನ್ನಡದಲ್ಲಿ ಸೃಜನಶೀಲ ಕವನಗಳನ್ನು ಬರೆಯಲು ಪ್ರೇರೇಪಿಸಿ, ತನ್ಮೂಲಕ ಕನ್ನಡ ನುಡಿ ಮತ್ತು ಕನ್ನಡ ಸಾಹಿತ್ಯದ ಉಳಿವು-ಬೆಳವಿಗೆ ಅಳಿಲ ಸೇವೆಯನ್ನು ಸಲ್ಲಿಸುವ ಉದ್ದೇಶವೂ ಇದರ ಹಿಂದಿದೆ.
ನವ್ಯ ಕಾವ್ಯ ಜಾಲತಾಣವು ಈ ವರ್ಷವೂ ಕವನ ಸ್ಪರ್ಧೆಯನ್ನು ಆಯೋಜಿಸಿದೆ. ಸ್ಪರ್ಧೆಯ ವಿವರಗಳನ್ನು ಚಿತ್ರದಲ್ಲಿ ನೀಡಲಾಗಿದೆ. ಆಸಕ್ತರು ನೊಂದಣಿಯನ್ನು ಮಾಡಲು https://imjo.in/3P6bUe ಕೊಂಡಿಯನ್ನು ಉಪಯೋಗಿಸಿ. ಹೆಚ್ಚಿನ ವಿವರಗಳಿಗೆ +919164561755, ಅನೀಶ್ ಪಿ ವಿ ಇವರಿಗೆ ಕರೆ ಮಾಡಬಹುದು.
ಜಾಲತಾಣದ ವೀಕ್ಷಣಗೆ http://www.navyakavya.in ಭೇಟಿ ಕೊಡಬಹುದು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…