Advertisement
ಸುದ್ದಿಗಳು

ನಶಿಸಿ ಹೋಗುತ್ತಿರುವ ಭಾಷೆಗಳನ್ನು ಉಳಿಸುವ ಅಗತ್ಯತೆ ಇದೆ: ಎ. ವಿ ತೀರ್ಥರಾಮ

Share

ಸುಳ್ಯ: ಈ ದೇಶದಲ್ಲಿ ಸಾವಿರಾರು ಭಾಷೆಗಳಿದ್ದು ಹೆಚ್ಚಿನ ಭಾಷೆಗಳು ಅವನತಿಯ ಅಂಚಿನಲ್ಲಿದೆ. ಒಂದು ಭಾಷೆ ಅಳಿದರೆ ಒಂದು ಸಂಸ್ಕೃತಿ ಅಳಿದಂತೆ. ಹಾಗಾಗಿ ಇವುಗಳನ್ನು ರಕ್ಷಿಸಬೇಕಾದರೆ ವಿಧ್ಯಾರ್ಥಿಗಳು ಮತ್ತು ಯುವಕರು ಈ ಭಾಷೆಗಳನ್ನು ಉಳಿಸಿ ಬೆಳೆಸುವ ಪ್ರಯತ್ನ ಮಾಡಬೇಕಾಗಿದೆ ಎಂದು ಜ್ನಾನದೀಪ ವಿದ್ಯಾ ಸಂಸ್ಥೆಯ ಸಂಚಾಲಕ ಎ. ವಿ. ತೀರ್ಥ ರಾಮ ಹೇಳಿದ್ದಾರೆ.

ಅರೆಭಾಷೆ ಸಂಸ್ಕ್ರತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗು ಸರಕಾರಿ ಪ್ರೌಢಶಾಲೆ ಎಲಿಮಲೆ ಇದರ ವತಿಯಿಂದ ನಡೆದ ವಿಧ್ಯಾರ್ಥಿ ಆಟಿ ಸಂಭ್ರಮ, ಅರೆಭಾಷೆ ಸಾಹಿತ್ಯ ಸಂಘ ಉದ್ಗಾಟನೆ ಹಾಗು ಶಾಲೆಗೆ ಪುಸ್ತಕ ಕೊಡುಗೆ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು‌.

ಪ್ರಧಾನ ಭಾಷಣ ಮಾಡಿದ ಅಕಾಡೆಮಿ ಸದಸ್ಯ ಎ.ಕೆ. ಹಿಮಕರ ಮಾತನಾಡಿ ಹಿಂದಿನ ಕಾಲದಲ್ಲಿ ಅತ್ಯಂತ ಕಷ್ಟದ ಸ್ಥಿತಿಯಲ್ಲಿ ಬದುಕನ್ನು ಕಟ್ಟಿಕೊಳ್ಳಲು ಅನಿವಾರ್ಯವಾಗಿ ಸೊಪ್ಪು ಗೆಡ್ಡೆ ಗೆಣಸುಗಳನ್ನು ತಿಂದು ತಮ್ಮ ಆರೋಗ್ಯವನ್ನು ಉಳಿಸಿಕೊಳ್ಳುತಿದ್ದರು.ಈಗ ಆಧುನಿಕ ಯುಗದಲ್ಲಿ ಇದು ಆಚರಣೆಯಾಗಿ ನಮ್ಮ ಮುಂದಿದೆ. ಹಿಂದಿನ ಕಾಲದ ಜನರು ಇದನ್ನು ಜೀವನಕ್ರಮವಾಗಿ ಪರಿಗಣಿಸಿದ್ದರು. ಈ ನಿಟ್ಟಿನಲ್ಲಿ ನಾವು ವೈಜ್ಞಾನಿಕ ಮನೋಭಾವ ವನ್ನು ಬೆಳೆಸಿಕೊಳ್ಳಲೇಬೇಕು ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಶಾಲಾ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಮಾತನಾಡಿದ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ. ಸಿ. ಜಯರಾಮ ಗ್ರಾಮೀಣ ಪ್ರದೇಶದ ಶಾಲೆಗಳಿಂದಲೇ ಭಾಷೆಯನ್ನು ಉಳಿಸಿ ಬೆಳೆಸುವ ಕಾರ್ಯಕ್ರಮಗಳಾಗಬೇಕು ಎಂದು ಹೇಳಿದರು. ತದನಂತರ ಆಟಿ ಕಳಂಜ ಪ್ರದರ್ಶನ ಸೋಭಾನೆ ಹಾಡು ಕವನವಾಚನ ರಸಪ್ರಶ್ನೆ ಹಾಗು ಆಟಿ ಖಾದ್ಯ ಪ್ರದರ್ಶನ ನಡೆಯಿತು.

ಸಮಾರಂಭದ ಕೊನೆಯಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಪುರುಷೊತ್ತಮ ಕಜೆ, ಅರೆಭಾಷೆ ಅಕಾಡೆಮಿ ಸದಸ್ಯಾರಾದ ಸುರೇಶ್ ಎಂ. ಎಚ್, ದಿನೇಶ್ ಹಾಲೆಮಜಲು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಚಂದ್ರಶೇಖರ್ ಪೇರಾಲ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಚಂದ್ರಶೇಖರ್, ಬೋಜಪ್ಪ ಗೌಡ, ವಿಶ್ವನಾಥ ನಂದಗೋಕುಲ, ಪವಿತ್ರ ಸುಳ್ಳಿ ಭರತ್ ಪಾರೆಮಜಲು ಹಾಗು ಪೂರ್ವ ವಿದ್ಯಾರ್ಥಿಗಳಾದ ಕಿರಣ್ ಗುಡ್ಡೆಮನೆ, ಜಯಂತ ತಳೂರು, ಜೀವನ್ ತಳೂರು,ರಂಜಿತ್ ಭಾಗವಹಿಸಿದ್ದರು.

ಗೋಪಿನಾಥ್ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿದರು. ಮುರಳೀಧರ ವಂದಿಸಿದರು. ಶಿಕ್ಷಕರಾದ ವಸಂತ್ ನಾಯಕ್, ತಿರುಮಲೇಶ್ವರಿ, ವಿರೂಪಾಕ್ಷ, ಸುಂದರ, ಶಶಿಕಲಾ, ಹಾಗು ವಾಸುದೇವ ಮಡಪ್ಪಾಡಿ ಸಹಕರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 hour ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

10 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

10 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

10 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

20 hours ago