ಸುಳ್ಯ: ಅಂತಾರಾಜ್ಯ ರಸ್ತೆಗಳಾದ ಸುಳ್ಯ-ಪಾಣತ್ತೂರು, ಸುಳ್ಯ-ಬಂದಡ್ಕ ರಸ್ತೆ ಸಂಪರ್ಕದ ಗಾಂಧಿನಗರ-ನಾಗಪಟ್ಟಣ ರಸ್ತೆಯಲ್ಲಿ ಕಾಂಕ್ರೀಟ್ ರಸ್ತೆಯ ಉದ್ಘಾಟನೆ ನಡೆಯಿತು. ರಸ್ತೆ ಕಾಂಕ್ರೀಟ್ ನಡೆಯುತ್ತಿದ್ದ ಹಿನ್ನಲೆಯಲ್ಲಿ ಕಲ್ಲುಮುಟ್ಲುವಿನಿಂದ ನಾಗಪಟ್ಟಣದವರೆಗೆ ಮುಚ್ಚಲಾಗಿದ್ದ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಶಾಸಕ ಎಸ್. ಅಂಗಾರ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಆಲೆಟ್ಟಿ ಗ್ರಾ. ಪಂ.ಮಾಜಿ ಅಧ್ಯಕ್ಷ ಹರೀಶ್ ರಂಗತ್ತಮಲೆ, ತಾ.ಪಂ.ಸದಸ್ಯೆ ಪದ್ಮಾವತಿ ಕುಡೆಂಬಿ, ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ಎ.ಪಿ.ಎಂ.ಸಿ.ನಿರ್ದೇಶಕ ಜಯಪ್ರಕಾಶ್ ಕುಂಚಡ್ಕ, ನಗರ ಪಂಚಾಯತ್ ಸದಸ್ಯರಾದ ಸುಶೀಲಾ ಜಿನ್ನಪ್ಪ ಪೂಜಾರಿ ಕಲ್ಲುಮುಟ್ಲು, ವಿನಯಕುಮಾರ್ ಕಂದಡ್ಕ, ಸುಧಾಕರ ಕೇರ್ಪಳ, ಕಿಶೋರಿ ಶೇಟ್, ಶೀಲಾ ಕುರುಂಜಿ, ಸರೋಜಿನಿ ಪೆಲತ್ತಡ್ಕ, ಆಲೆಟ್ಟಿ ಸೊಸೈಟಿ ಉಪಾಧ್ಯಕ್ಷ ಕರುಣಾಕರ ಹಾಸ್ಪಾರೆ, ನಿರ್ದೇಶಕರಾದ ಸುಧಾಕರ ಆಲೆಟ್ಟಿ, ಸುದರ್ಶನ ಪಾತಿಕಲ್ಲು, ಮಾಜಿ ಅಧ್ಯಕ್ಷ ಯತಿರಾಜ್ ಭೂತಕಲ್ಲು, ನ.ಪಂ.ಇಂಜಿನಿಯರ್ ಶಿವಕುಮಾರ್, ಬೂಡು ರಾಧಾಕೃಷ್ಣ ರೈ, ಜಿನ್ನಪ್ಪ ಪೂಜಾರಿ ಕಲ್ಲುಮುಟ್ಲು,ಜಗದೀಶ್ ಸರಳಿಕುಂಜ, ವಿಶ್ವನಾಥ ಶೆಟ್ಟಿ, ತೀರ್ಥರಾಮ ನೆಡ್ಚಿಲು, ಉಮೇಶ್ ಕೂಟೇಲು ,ಗೋಪಾಲ ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…