Advertisement
MIRROR FOCUS

ನಾಗರಪಂಚಮಿಗೂ ಕಾಡಿದ ಕೊರೋನಾ | ಈ ಬಾರಿ ನಾಡಿಗೆ ಸಣ್ಣದಾದ ನಾಗರಪಂಚಮಿ |

Share

ನಾಗರಪಂಚಮಿ ನಾಡಿಗೆ ದೊಡ್ಡದು. ಈ ಹಬ್ಬದ ಮೂಲಕ ನಾಡಿನಲ್ಲಿ  ಹಬ್ಬಗಳು ಆರಂಭವಾಗುತ್ತದೆ. ಹಿಂದೂಗಳಿಗೆ ನಾಗರಪಂಚಮಿ ಅತ್ಯಂತ ಶ್ರೇಷ್ಟ ಹಾಗೂ ಸಂಭ್ರಮದ ಹಬ್ಬ. ಈ ಬಾರಿ ಕೊರೋನಾ ಈ ಹಬ್ಬವನ್ನು ಸಣ್ಣದು ಮಾಡಿದೆ. ಮನೆ ಮನೆಗಳಲ್ಲೇ ಆಚರಿಸುವಂತೆ ಮಾಡಿದೆ. ಆದರೆ ಸಡಗರಕ್ಕೆ ಕೊರತೆಯಾಗಲಿಲ್ಲ.

Advertisement
Advertisement
Advertisement
Advertisement

ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನ ಅಂದರೆ ಪಂಚಮಿಯಂದು ಆಚರಿಸಲ್ಪಡುವ ನಾಗರಪಂಚಮಿಗೆ  ತನ್ನದೇ ಆದ ವೈಶಿಷ್ಟ್ಯವಿದೆ. ನಾಗರ ಪಂಚಮಿ ಹಬ್ಬಕ್ಕೆ ಕರ್ನಾಟಕದಲ್ಲಿ ಅದರಲ್ಲೂ ತುಳುನಾಡಿನಲ್ಲಿ ವಿಶೇಷ  ಸ್ಥಾನವಿದೆ. ಈ ದಿನ ನಾಗನಿಗೆ  ಹಾಲೆರೆದು, ಪೂಜಿಸಲಾಗುತ್ತದೆ. ಪುರಾಣ ಕತೆಯೊಂದರ ಪ್ರಕಾರ ಹಾವು ಕಚ್ಚಿ ಮಡಿದ ತನ್ನ ಸಹೋದರನನ್ನು ಸಹೋದರಿಯೊಬ್ಬಳು ಬದುಕಿಸಿಕೊಂಡ ದಿನ ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಾಗಿತ್ತು. ಹಾವನ್ನು ಭಕ್ತಿಭಾವದಿಂದ ಪೂಜಿಸಿ ತನ್ನ ಅಣ್ಣನನ್ನು ತಂಗಿ ಬದುಕಿಸಿಕೊಂಡ ದಿನವಾಗಿದ್ದರಿಂದ ಈ ದಿನವನ್ನು ಭ್ರಾತೃತ್ವದ ಸಂಕೇತವಾಗಿಯೂ  ಆಚರಿಸಲಾಗುತ್ತದೆ.

Advertisement

ನಾಗರ ಪಂಚಮಿ ಆರಾಧನೆ ಹಿನ್ನೆಲೆ, ವಿಶೇಷ ಹಾಗೂ ಪೂಜಾ ಕ್ರಮದ ಮಾಹಿತಿ ಜನಮೇಜಯ ಎಂಬ ರಾಜ ತನ್ನ ತಂದೆ ಪರೀಕ್ಷಿತನ ಸಾವಿಗೆ ಹಾವು ಕಾರಣ ಎಂದು ತಿಳಿದು ಭೂಲೋಕದಲ್ಲಿರುವ ಸರ್ಪಸಂಕುಲವನ್ನೆಲ್ಲ ನಾಶ ಮಾಡುವ ಶಪಥ ಮಾಡಿ, ಸರ್ಪಯಜ್ಞ ಮಾಡಲು ಹೊರಡುತ್ತಾನೆ. ಆದರೆ ಪ್ರಾಣಿ ಹಿಂಸೆ ಮಹಾಪಾಪ ಎಂಬುದನ್ನು ಸಂತರೊಬ್ಬರ ಹಿತವಚನದಿಂದ ಅರಿತ ಜನಮೇಜಯ ಸರ್ಪಯಜ್ಞವನ್ನು ಹಿಂದೆಗೆದುಕೊಳ್ಳುತ್ತಾನೆ. ಹೀಗೆ ಜನಮೇಜಯ ಸರ್ಪಯಜ್ಞವನ್ನು ನಿಲ್ಲಿಸಲು ನಿರ್ಧರಿಸಿದ ದಿನ ಶ್ರಾವಣ ಶುಕ್ಲ ಪಂಚಮಿಯಾಗಿತ್ತು. ಆದ್ದರಿಂದ ಈ ದಿನವನ್ನು ನಾಗರ ಪಂಚಮಿ ಎಂದು ಆಚರಿಸಲಾಗುತ್ತದೆ ಎಂಬ ಪ್ರತೀತಿಯೂ ಇದೆ.

ಶ್ರೀಕೃಷ್ಣನ ನೆನಪು ನಾಗರ ಪಂಚಮಿಗೂ ಭಗವಾನ್ ಶ್ರೀಕೃಷ್ಣನಿಗೂ ಸಂಬಂಧವಿದೆ. ಪುರಾಣ ಕತೆಯೊಂದರ ಪ್ರಕಾರ ಬಾಲ ಕೃಷ್ಣ ಯಮುನಾ ನದಿ ತೀರದಲ್ಲಿ ಆಟವಾಡುತ್ತಿದ್ದಾಗ ನದಿಯಲ್ಲಿ ಜಾರಿ ಬೀಳುತ್ತಾನೆ. ಕೃಷ್ಣ ನದಿಗೆ ಬಿದ್ದ ಸಂದರ್ಭದಲ್ಲಿ ಕಾಳಿಯಾ ಎಂಬ ಹಾವೊಂದು ಆಅತನ ಮೇಲೆ ದಾಳಿ ನಡೆಸುತ್ತದೆ. ಆದರೆ ದೈವತ್ವದ ಸ್ವರೂಪವಾಗಿದ್ದ ಶ್ರೀಕೃಷ್ಣ ಕಾಳಿಯಾನನ್ನು ಮಣಿಸುತ್ತಾನೆ. ಈತ ಸಾಮಾನ್ಯ ಮಗುವಲ್ಲ ಎಂಬುದನ್ನು ಅರಿತ ಕಾಳಿಯ ಹಾವು ತನ್ನನ್ನು ಬಿಟ್ಟುಬಿಡುವಂತೆ ಕೃಷ್ಣನಲ್ಲಿ ಬೇಡುತ್ತದೆ. ಆಗ ಜನರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ವಚನ ಪಡೆದು, ಶ್ರೀಕೃಷ್ಣ ಆ ಹಾವನ್ನು ಬಿಟ್ಟು ಬಿಡುತ್ತಾನೆ. ಹೀಗೆ ಕೃಷ್ಣನು ಕಾಳಿಯಾ ಹಾವನ್ನು ಸೋಲಿಸಿದ ದಿನ ಶ್ರಾವಣ ಶುಕ್ಲ ಪಂಚಮಿಯಾಗಿತ್ತು. ಆ ದಿನದ ನೆನಪಿಗಾಗಿ ಈ ಹಬ್ಬ ಆಚರಿಸಲಾಗುತ್ತದೆ ಎಂಬ ನಂಬಿಕೆಯೂ ಇದೆ.

Advertisement

ಹೀಗೆ ಎರಡು-ಮೂರು ಪುರಾಣ ಹಿನ್ನೆಲೆ ಇರುವ ನಾಗರಪಂಚಮಿ ಹಿಂದೂ ಹಬ್ಬಗಳ ಆರಂಭ. ಶ್ರಾವಣ ಮಾಸದ  ಹಬ್ಬಗಳ ಸಾಲು ಆರಂಭವಾಗುತ್ತದೆ. ನಾಗರ ಪಂಚಮಿಯ ನಂತರ ರಕ್ಷಾಬಂಧನ, ಕೃಷ್ಣಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಹೀಗೆ ಹಬ್ಬಗಳು ಆರಂಭವಾಗುತ್ತವೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

18 mins ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

23 mins ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

28 mins ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago