Advertisement
ಮಾಹಿತಿ

ನಾಗರಿಕ ಸೇವಾ ಪರೀಕ್ಷೆಗಳ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಡಿ.20 ರ ತನಕ ಅವಕಾಶ

Share

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ನಡೆಸುತ್ತಿರುವ ನಾಗರಿಕ ಸೇವಾ ಪರೀಕ್ಷೆಗಳ ಬಗೆಗಿನ ಉಚಿತ ತರಬೇತಿ ಕೇಂದ್ರ ‘ಯಶಸ್’ ಇದರ ಈ ಬಾರಿಯ ಆಯ್ಕೆ ಪ್ರಕ್ರಿಯೆಯ ಮೊದಲ ಹಂತದ ಪ್ರವೇಶ ಪರೀಕ್ಷೆ ಡಿ.25ರಂದು ನಡೆಯಲಿದ್ದು ಆಸಕ್ತ ವಿದ್ಯಾರ್ಥಿಗಳಿಗೆ ಡಿ.20ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಒಂಬತ್ತನೆಯ ತರಗತಿಯಲ್ಲಿ ಕನಿಷ್ಟ 60% ಅಂಕ ಗಳಿಸಿ ಪ್ರಸ್ತುತ ಹತ್ತನೆಯ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಪ್ರವೇಶ ಬಯಸುವ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು yashas.vivekanandaedu.org ನಿಂದ ಡೌನ್‍ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಸಂಬಂಧಿತ ಶಾಲೆಯ ಮುಖ್ಯ ಶಿಕ್ಷಕರ ಸಹಿಯೊಂದಿಗೆ ಯಶಸ್ ಕಛೇರಿಗೆ ಅಂಚೆ ಮೂಲಕ ತಲುಪುವಂತೆ ಕಳುಹಿಸಬಹುದು. ಅಥವಾ ಆನ್‍ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.

ಡಿ.25ರಂದು ನಡೆಯುವ ಈ ಪರೀಕ್ಷೆ ಪುತ್ತೂರಿನ ವಿವೇಕಾನಂದ ಪಿ.ಯು.ಕಾಲೇಜು, ಕಲ್ಲಡ್ಕದ ಶ್ರೀರಾಮ ಪದವಿಪೂರ್ವ ಕಾಲೇಜು, ಕಾಸರಗೋಡಿನ ಪೆರ್ಲದ ನಾಲಂದ ಕಾಲೇಜ್ ಆಫ್ ಆಟ್ರ್ಸ್, ಸೈನ್ಸ್ ಆಂಡ್ ಕಾಮರ್ಸ್, ಮಂಗಳೂರಿನ ಶಾರದಾ ಪದವಿಪೂರ್ವ ಕಾಲೇಜು, ಮಡಿಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜು, ಸುಳ್ಯದ ಶಾರದ ಪ್ರೌಢಶಾಲೆ, ಕಡಬದ ಸರಸ್ವತಿ ವಿದ್ಯಾಲಯ, ಮಣಿಪಾಲದ ಎಂ.ಐ.ಟಿ. ಹಾಗೂ ಬೆಳ್ತಂಗಡಿಯ ವಾಣಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 12.30 ವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಈ ಮೇಲಿನ ಯಾವುದೇ ಕೇಂದ್ರದಲ್ಲೂ ಪರೀಕ್ಷೆ ಬರೆಯುವುದಕ್ಕೆ ಅವಕಾಶ ಇರುತ್ತದೆ.

ಅಂತಿಮ ಹಂತದ ಪರೀಕ್ಷೆಯಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಉಚಿತವಾಗಿ ನಾಗರಿಕ ಸೇವಾ ಕ್ಷೇತ್ರಗಳಾದ ಐಎಎಸ್, ಐಪಿಎಸ್ ಮೊದಲಾದವುಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ತರಬೇತಿ ನೀಡುತ್ತಿದೆ. ಅಂತಿಮವಾಗಿ ಆಯ್ಕೆಯಾಗುವ ಇಪ್ಪತ್ತೈದು ಮಂದಿ ವಿವೇಕಾನಂದ ಸಂಸ್ಥೆಯಲ್ಲಿ ತಮ್ಮ ಪಾರಂಪರಿಕ ಪಿ.ಯು., ಪದವಿ ಮೊದಲಾದ ಶಿಕ್ಷಣದೊಂದಿಗೆ ಯಶಸ್ ತರಬೇತಿಯನ್ನು ಪಡೆಯಲಿದ್ದಾರೆ. ಪ್ರತಿನಿತ್ಯ ಯಶಸ್ ತರಬೇತಿ ನಡೆಯಲಿದ್ದು ಅದು ಸಂಪೂರ್ಣ ಉಚಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ : 08251 298599, 9901852117 ಸಂಪರ್ಕಿಸಬಹುದಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

10 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

17 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

20 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago