Advertisement
ಮಾಹಿತಿ

ನಾಗರಿಕ ಸೇವಾ ಪರೀಕ್ಷೆಗಳ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಡಿ.20 ರ ತನಕ ಅವಕಾಶ

Share

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ನಡೆಸುತ್ತಿರುವ ನಾಗರಿಕ ಸೇವಾ ಪರೀಕ್ಷೆಗಳ ಬಗೆಗಿನ ಉಚಿತ ತರಬೇತಿ ಕೇಂದ್ರ ‘ಯಶಸ್’ ಇದರ ಈ ಬಾರಿಯ ಆಯ್ಕೆ ಪ್ರಕ್ರಿಯೆಯ ಮೊದಲ ಹಂತದ ಪ್ರವೇಶ ಪರೀಕ್ಷೆ ಡಿ.25ರಂದು ನಡೆಯಲಿದ್ದು ಆಸಕ್ತ ವಿದ್ಯಾರ್ಥಿಗಳಿಗೆ ಡಿ.20ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Advertisement
Advertisement

ಒಂಬತ್ತನೆಯ ತರಗತಿಯಲ್ಲಿ ಕನಿಷ್ಟ 60% ಅಂಕ ಗಳಿಸಿ ಪ್ರಸ್ತುತ ಹತ್ತನೆಯ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಪ್ರವೇಶ ಬಯಸುವ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು yashas.vivekanandaedu.org ನಿಂದ ಡೌನ್‍ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಸಂಬಂಧಿತ ಶಾಲೆಯ ಮುಖ್ಯ ಶಿಕ್ಷಕರ ಸಹಿಯೊಂದಿಗೆ ಯಶಸ್ ಕಛೇರಿಗೆ ಅಂಚೆ ಮೂಲಕ ತಲುಪುವಂತೆ ಕಳುಹಿಸಬಹುದು. ಅಥವಾ ಆನ್‍ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.

Advertisement

ಡಿ.25ರಂದು ನಡೆಯುವ ಈ ಪರೀಕ್ಷೆ ಪುತ್ತೂರಿನ ವಿವೇಕಾನಂದ ಪಿ.ಯು.ಕಾಲೇಜು, ಕಲ್ಲಡ್ಕದ ಶ್ರೀರಾಮ ಪದವಿಪೂರ್ವ ಕಾಲೇಜು, ಕಾಸರಗೋಡಿನ ಪೆರ್ಲದ ನಾಲಂದ ಕಾಲೇಜ್ ಆಫ್ ಆಟ್ರ್ಸ್, ಸೈನ್ಸ್ ಆಂಡ್ ಕಾಮರ್ಸ್, ಮಂಗಳೂರಿನ ಶಾರದಾ ಪದವಿಪೂರ್ವ ಕಾಲೇಜು, ಮಡಿಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜು, ಸುಳ್ಯದ ಶಾರದ ಪ್ರೌಢಶಾಲೆ, ಕಡಬದ ಸರಸ್ವತಿ ವಿದ್ಯಾಲಯ, ಮಣಿಪಾಲದ ಎಂ.ಐ.ಟಿ. ಹಾಗೂ ಬೆಳ್ತಂಗಡಿಯ ವಾಣಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 12.30 ವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಈ ಮೇಲಿನ ಯಾವುದೇ ಕೇಂದ್ರದಲ್ಲೂ ಪರೀಕ್ಷೆ ಬರೆಯುವುದಕ್ಕೆ ಅವಕಾಶ ಇರುತ್ತದೆ.

ಅಂತಿಮ ಹಂತದ ಪರೀಕ್ಷೆಯಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಉಚಿತವಾಗಿ ನಾಗರಿಕ ಸೇವಾ ಕ್ಷೇತ್ರಗಳಾದ ಐಎಎಸ್, ಐಪಿಎಸ್ ಮೊದಲಾದವುಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ತರಬೇತಿ ನೀಡುತ್ತಿದೆ. ಅಂತಿಮವಾಗಿ ಆಯ್ಕೆಯಾಗುವ ಇಪ್ಪತ್ತೈದು ಮಂದಿ ವಿವೇಕಾನಂದ ಸಂಸ್ಥೆಯಲ್ಲಿ ತಮ್ಮ ಪಾರಂಪರಿಕ ಪಿ.ಯು., ಪದವಿ ಮೊದಲಾದ ಶಿಕ್ಷಣದೊಂದಿಗೆ ಯಶಸ್ ತರಬೇತಿಯನ್ನು ಪಡೆಯಲಿದ್ದಾರೆ. ಪ್ರತಿನಿತ್ಯ ಯಶಸ್ ತರಬೇತಿ ನಡೆಯಲಿದ್ದು ಅದು ಸಂಪೂರ್ಣ ಉಚಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ : 08251 298599, 9901852117 ಸಂಪರ್ಕಿಸಬಹುದಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

19 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

20 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

21 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

21 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

23 hours ago