ನಾಡಿನೆಲ್ಲೆಡೆ ಆಯುಧ ಪೂಜಾ ಸಂಭ್ರಮ

October 7, 2019
6:28 PM

ಸುಳ್ಯ: ಸುಳ್ಯ ನಗರ ಸೇರಿದಂತೆ ತಾಲೂಕಿನಲ್ಲಿ ವಿಜೃಂಭಣೆಯ ಆಯುಧ ಪೂಜಾ ಉತ್ಸವ ನಡೆಯಿತು. ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ನವರಾತ್ರಿ ಮಹೋತ್ಸವದ ವಿಜೃಂಭಣೆಯ ಮಧ್ಯೆಯೇ ಸೋಮವಾರ ಆಯುಧ ಪೂಜೆ’ಯ ಸಂಭ್ರಮ ಕಂಡು ಬಂತು.

Advertisement
Advertisement
Advertisement
Advertisement

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನ ಸೇರಿದಂತೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಿತು. ದೇವಸ್ಥಾನಗಳಲ್ಲಿ ನಡೆದ ಆಯುಧ ಪೂಜೆಯಲ್ಲಿ ಸಾವಿರಾರು ವಾಹನಗಳನ್ನು ಪೂಜಿಸಲು ತರಲಾಗಿತ್ತು.

Advertisement

ವಿವಿಧ ಸರಕಾರಿ ಕಚೇರಿಗಳಲ್ಲಿ, ವಿವಿಧ ಸಂಸ್ಥೆಗಳ ಕಚೇರಿ, ಅಂಗಡಿ, ಗ್ಯಾರೇಜ್, ಮಳಿಗೆ ಸಹತ ನಗರ ಮತ್ತು ಗ್ರಾಮೀಣ ಪ್ರದೇಶ ಸೇರಿ ವಿವಿಧೆಡೆ ಸಂಭ್ರಮದಿಂದ ಆಯುಧ ಪೂಜೆ ನಡೆಯಿತು. ಎಲ್ಲೆಡೆ ವರ್ಣಮಯ ಶೃಂಗಾರವನ್ನು ಮಾಡಲಾಗಿತ್ತು. ಸಾವಿರಾರು ವಾಹನಗಳ ಪೂಜೆ ನಡೆಸಲಾಯಿತು. ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ದಸರಾ ಉತ್ಸವ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಸುಳ್ಯ ಶಾರದಾಂಬಾ ಉತ್ಸವದ ವೇದಿಕೆಯಲ್ಲಿಯೂ ಆಯುಧ ಪೂಜೆ ನಡೆಯಿತು. ನೂರಾರು ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು.
ಸೋಮವಾರ ಬೆಳಿಗ್ಗೆ ಆರಂಭಗೊಂಡ ಆಯುಧ ಪೂಜಾ ಉತ್ಸವ ರಾತ್ರಿಯವರೆಗೂ ಮುಂದುವರಿಯಿತು.

ಸರಕಾರಿ ಮತ್ತು ಖಾಸಗಿ ಬಸ್‌ಗಳ ಸಹಿತ ಎಲ್ಲಾ ವಾಹನಗಳನ್ನು ಶ್ರೀಗಂಧ, ವೈವಿಧ್ಯಮಯ ಹೂವುಗಳಿಂದ ಅಲಂಕರಿಸಲಾಗಿತ್ತು. ಆಯುಧ ಪೂಜೆ ಪ್ರಯುಕ್ತ ಹೂ, ಹಣ್ಣು ಹಂಪಲು, ತೆಂಗಿನ ಕಾಯಿ, ನಿಂಬೆ ಹಣ್ಣಿಗೆ ಭಾರೀ ಬೇಡಿಕೆ ಇತ್ತು. ರಸ್ತೆ ಬದಿಗಳಲ್ಲಿಯೂ ಹೂವಿನ ಮಾರಾಟದ ಭರಾಟೆ ಕಂಡು ಬಂದಿತ್ತು. ಸೇವಂತಿಗೆ, ಮಲ್ಲಿಗೆ ಮತ್ತಿತರ ಹೂವುಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿತ್ತು. ಆಯುಧ ಪೂಜೆಗೆ ಲಿಂಬೆಹಣ್ಣು ಮತ್ತು ಹಸಿ ಮೆಣಸಿನ ಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತಿದ್ದು ಹೆಚ್ಚಿನ ಬೇಡಿಕೆ ಇತ್ತು ಎನ್ನುತ್ತಾರೆ ವ್ಯಾಪಾರಿಗಳು.
ಹಲವು ಕಡೆಗಳಲ್ಲಿ ಭಾನುವಾರವೂ ವಾಹನಗಳ ಪೂಜೆ ನಡೆದಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |
February 1, 2025
7:07 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror