Advertisement
ಸುದ್ದಿಗಳು

ನಾಡಿನೆಲ್ಲೆಡೆ ಆಯುಧ ಪೂಜಾ ಸಂಭ್ರಮ

Share

ಸುಳ್ಯ: ಸುಳ್ಯ ನಗರ ಸೇರಿದಂತೆ ತಾಲೂಕಿನಲ್ಲಿ ವಿಜೃಂಭಣೆಯ ಆಯುಧ ಪೂಜಾ ಉತ್ಸವ ನಡೆಯಿತು. ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ನವರಾತ್ರಿ ಮಹೋತ್ಸವದ ವಿಜೃಂಭಣೆಯ ಮಧ್ಯೆಯೇ ಸೋಮವಾರ ಆಯುಧ ಪೂಜೆ’ಯ ಸಂಭ್ರಮ ಕಂಡು ಬಂತು.

Advertisement

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನ ಸೇರಿದಂತೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಿತು. ದೇವಸ್ಥಾನಗಳಲ್ಲಿ ನಡೆದ ಆಯುಧ ಪೂಜೆಯಲ್ಲಿ ಸಾವಿರಾರು ವಾಹನಗಳನ್ನು ಪೂಜಿಸಲು ತರಲಾಗಿತ್ತು.

ವಿವಿಧ ಸರಕಾರಿ ಕಚೇರಿಗಳಲ್ಲಿ, ವಿವಿಧ ಸಂಸ್ಥೆಗಳ ಕಚೇರಿ, ಅಂಗಡಿ, ಗ್ಯಾರೇಜ್, ಮಳಿಗೆ ಸಹತ ನಗರ ಮತ್ತು ಗ್ರಾಮೀಣ ಪ್ರದೇಶ ಸೇರಿ ವಿವಿಧೆಡೆ ಸಂಭ್ರಮದಿಂದ ಆಯುಧ ಪೂಜೆ ನಡೆಯಿತು. ಎಲ್ಲೆಡೆ ವರ್ಣಮಯ ಶೃಂಗಾರವನ್ನು ಮಾಡಲಾಗಿತ್ತು. ಸಾವಿರಾರು ವಾಹನಗಳ ಪೂಜೆ ನಡೆಸಲಾಯಿತು. ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ದಸರಾ ಉತ್ಸವ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಸುಳ್ಯ ಶಾರದಾಂಬಾ ಉತ್ಸವದ ವೇದಿಕೆಯಲ್ಲಿಯೂ ಆಯುಧ ಪೂಜೆ ನಡೆಯಿತು. ನೂರಾರು ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು.
ಸೋಮವಾರ ಬೆಳಿಗ್ಗೆ ಆರಂಭಗೊಂಡ ಆಯುಧ ಪೂಜಾ ಉತ್ಸವ ರಾತ್ರಿಯವರೆಗೂ ಮುಂದುವರಿಯಿತು.

ಸರಕಾರಿ ಮತ್ತು ಖಾಸಗಿ ಬಸ್‌ಗಳ ಸಹಿತ ಎಲ್ಲಾ ವಾಹನಗಳನ್ನು ಶ್ರೀಗಂಧ, ವೈವಿಧ್ಯಮಯ ಹೂವುಗಳಿಂದ ಅಲಂಕರಿಸಲಾಗಿತ್ತು. ಆಯುಧ ಪೂಜೆ ಪ್ರಯುಕ್ತ ಹೂ, ಹಣ್ಣು ಹಂಪಲು, ತೆಂಗಿನ ಕಾಯಿ, ನಿಂಬೆ ಹಣ್ಣಿಗೆ ಭಾರೀ ಬೇಡಿಕೆ ಇತ್ತು. ರಸ್ತೆ ಬದಿಗಳಲ್ಲಿಯೂ ಹೂವಿನ ಮಾರಾಟದ ಭರಾಟೆ ಕಂಡು ಬಂದಿತ್ತು. ಸೇವಂತಿಗೆ, ಮಲ್ಲಿಗೆ ಮತ್ತಿತರ ಹೂವುಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿತ್ತು. ಆಯುಧ ಪೂಜೆಗೆ ಲಿಂಬೆಹಣ್ಣು ಮತ್ತು ಹಸಿ ಮೆಣಸಿನ ಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತಿದ್ದು ಹೆಚ್ಚಿನ ಬೇಡಿಕೆ ಇತ್ತು ಎನ್ನುತ್ತಾರೆ ವ್ಯಾಪಾರಿಗಳು.
ಹಲವು ಕಡೆಗಳಲ್ಲಿ ಭಾನುವಾರವೂ ವಾಹನಗಳ ಪೂಜೆ ನಡೆದಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

20 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

20 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

1 day ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

2 days ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 days ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 days ago