Advertisement
ಸುದ್ದಿಗಳು

ನಾಡಿನೆಲ್ಲೆಡೆ ಆಯುಧ ಪೂಜಾ ಸಂಭ್ರಮ

Share

ಸುಳ್ಯ: ಸುಳ್ಯ ನಗರ ಸೇರಿದಂತೆ ತಾಲೂಕಿನಲ್ಲಿ ವಿಜೃಂಭಣೆಯ ಆಯುಧ ಪೂಜಾ ಉತ್ಸವ ನಡೆಯಿತು. ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ನವರಾತ್ರಿ ಮಹೋತ್ಸವದ ವಿಜೃಂಭಣೆಯ ಮಧ್ಯೆಯೇ ಸೋಮವಾರ ಆಯುಧ ಪೂಜೆ’ಯ ಸಂಭ್ರಮ ಕಂಡು ಬಂತು.

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನ ಸೇರಿದಂತೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಿತು. ದೇವಸ್ಥಾನಗಳಲ್ಲಿ ನಡೆದ ಆಯುಧ ಪೂಜೆಯಲ್ಲಿ ಸಾವಿರಾರು ವಾಹನಗಳನ್ನು ಪೂಜಿಸಲು ತರಲಾಗಿತ್ತು.

ವಿವಿಧ ಸರಕಾರಿ ಕಚೇರಿಗಳಲ್ಲಿ, ವಿವಿಧ ಸಂಸ್ಥೆಗಳ ಕಚೇರಿ, ಅಂಗಡಿ, ಗ್ಯಾರೇಜ್, ಮಳಿಗೆ ಸಹತ ನಗರ ಮತ್ತು ಗ್ರಾಮೀಣ ಪ್ರದೇಶ ಸೇರಿ ವಿವಿಧೆಡೆ ಸಂಭ್ರಮದಿಂದ ಆಯುಧ ಪೂಜೆ ನಡೆಯಿತು. ಎಲ್ಲೆಡೆ ವರ್ಣಮಯ ಶೃಂಗಾರವನ್ನು ಮಾಡಲಾಗಿತ್ತು. ಸಾವಿರಾರು ವಾಹನಗಳ ಪೂಜೆ ನಡೆಸಲಾಯಿತು. ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ದಸರಾ ಉತ್ಸವ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಸುಳ್ಯ ಶಾರದಾಂಬಾ ಉತ್ಸವದ ವೇದಿಕೆಯಲ್ಲಿಯೂ ಆಯುಧ ಪೂಜೆ ನಡೆಯಿತು. ನೂರಾರು ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು.
ಸೋಮವಾರ ಬೆಳಿಗ್ಗೆ ಆರಂಭಗೊಂಡ ಆಯುಧ ಪೂಜಾ ಉತ್ಸವ ರಾತ್ರಿಯವರೆಗೂ ಮುಂದುವರಿಯಿತು.

ಸರಕಾರಿ ಮತ್ತು ಖಾಸಗಿ ಬಸ್‌ಗಳ ಸಹಿತ ಎಲ್ಲಾ ವಾಹನಗಳನ್ನು ಶ್ರೀಗಂಧ, ವೈವಿಧ್ಯಮಯ ಹೂವುಗಳಿಂದ ಅಲಂಕರಿಸಲಾಗಿತ್ತು. ಆಯುಧ ಪೂಜೆ ಪ್ರಯುಕ್ತ ಹೂ, ಹಣ್ಣು ಹಂಪಲು, ತೆಂಗಿನ ಕಾಯಿ, ನಿಂಬೆ ಹಣ್ಣಿಗೆ ಭಾರೀ ಬೇಡಿಕೆ ಇತ್ತು. ರಸ್ತೆ ಬದಿಗಳಲ್ಲಿಯೂ ಹೂವಿನ ಮಾರಾಟದ ಭರಾಟೆ ಕಂಡು ಬಂದಿತ್ತು. ಸೇವಂತಿಗೆ, ಮಲ್ಲಿಗೆ ಮತ್ತಿತರ ಹೂವುಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿತ್ತು. ಆಯುಧ ಪೂಜೆಗೆ ಲಿಂಬೆಹಣ್ಣು ಮತ್ತು ಹಸಿ ಮೆಣಸಿನ ಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತಿದ್ದು ಹೆಚ್ಚಿನ ಬೇಡಿಕೆ ಇತ್ತು ಎನ್ನುತ್ತಾರೆ ವ್ಯಾಪಾರಿಗಳು.
ಹಲವು ಕಡೆಗಳಲ್ಲಿ ಭಾನುವಾರವೂ ವಾಹನಗಳ ಪೂಜೆ ನಡೆದಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

15 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

22 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

22 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

1 day ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

1 day ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

2 days ago