Advertisement
ಸುದ್ದಿಗಳು

ನಾಡಿನೆಲ್ಲೆಡೆ ಆಯುಧ ಪೂಜಾ ಸಂಭ್ರಮ

Share

ಸುಳ್ಯ: ಸುಳ್ಯ ನಗರ ಸೇರಿದಂತೆ ತಾಲೂಕಿನಲ್ಲಿ ವಿಜೃಂಭಣೆಯ ಆಯುಧ ಪೂಜಾ ಉತ್ಸವ ನಡೆಯಿತು. ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ನವರಾತ್ರಿ ಮಹೋತ್ಸವದ ವಿಜೃಂಭಣೆಯ ಮಧ್ಯೆಯೇ ಸೋಮವಾರ ಆಯುಧ ಪೂಜೆ’ಯ ಸಂಭ್ರಮ ಕಂಡು ಬಂತು.

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನ ಸೇರಿದಂತೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಿತು. ದೇವಸ್ಥಾನಗಳಲ್ಲಿ ನಡೆದ ಆಯುಧ ಪೂಜೆಯಲ್ಲಿ ಸಾವಿರಾರು ವಾಹನಗಳನ್ನು ಪೂಜಿಸಲು ತರಲಾಗಿತ್ತು.

ವಿವಿಧ ಸರಕಾರಿ ಕಚೇರಿಗಳಲ್ಲಿ, ವಿವಿಧ ಸಂಸ್ಥೆಗಳ ಕಚೇರಿ, ಅಂಗಡಿ, ಗ್ಯಾರೇಜ್, ಮಳಿಗೆ ಸಹತ ನಗರ ಮತ್ತು ಗ್ರಾಮೀಣ ಪ್ರದೇಶ ಸೇರಿ ವಿವಿಧೆಡೆ ಸಂಭ್ರಮದಿಂದ ಆಯುಧ ಪೂಜೆ ನಡೆಯಿತು. ಎಲ್ಲೆಡೆ ವರ್ಣಮಯ ಶೃಂಗಾರವನ್ನು ಮಾಡಲಾಗಿತ್ತು. ಸಾವಿರಾರು ವಾಹನಗಳ ಪೂಜೆ ನಡೆಸಲಾಯಿತು. ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ದಸರಾ ಉತ್ಸವ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಸುಳ್ಯ ಶಾರದಾಂಬಾ ಉತ್ಸವದ ವೇದಿಕೆಯಲ್ಲಿಯೂ ಆಯುಧ ಪೂಜೆ ನಡೆಯಿತು. ನೂರಾರು ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು.
ಸೋಮವಾರ ಬೆಳಿಗ್ಗೆ ಆರಂಭಗೊಂಡ ಆಯುಧ ಪೂಜಾ ಉತ್ಸವ ರಾತ್ರಿಯವರೆಗೂ ಮುಂದುವರಿಯಿತು.

ಸರಕಾರಿ ಮತ್ತು ಖಾಸಗಿ ಬಸ್‌ಗಳ ಸಹಿತ ಎಲ್ಲಾ ವಾಹನಗಳನ್ನು ಶ್ರೀಗಂಧ, ವೈವಿಧ್ಯಮಯ ಹೂವುಗಳಿಂದ ಅಲಂಕರಿಸಲಾಗಿತ್ತು. ಆಯುಧ ಪೂಜೆ ಪ್ರಯುಕ್ತ ಹೂ, ಹಣ್ಣು ಹಂಪಲು, ತೆಂಗಿನ ಕಾಯಿ, ನಿಂಬೆ ಹಣ್ಣಿಗೆ ಭಾರೀ ಬೇಡಿಕೆ ಇತ್ತು. ರಸ್ತೆ ಬದಿಗಳಲ್ಲಿಯೂ ಹೂವಿನ ಮಾರಾಟದ ಭರಾಟೆ ಕಂಡು ಬಂದಿತ್ತು. ಸೇವಂತಿಗೆ, ಮಲ್ಲಿಗೆ ಮತ್ತಿತರ ಹೂವುಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿತ್ತು. ಆಯುಧ ಪೂಜೆಗೆ ಲಿಂಬೆಹಣ್ಣು ಮತ್ತು ಹಸಿ ಮೆಣಸಿನ ಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತಿದ್ದು ಹೆಚ್ಚಿನ ಬೇಡಿಕೆ ಇತ್ತು ಎನ್ನುತ್ತಾರೆ ವ್ಯಾಪಾರಿಗಳು.
ಹಲವು ಕಡೆಗಳಲ್ಲಿ ಭಾನುವಾರವೂ ವಾಹನಗಳ ಪೂಜೆ ನಡೆದಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

8 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

10 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

15 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

21 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

21 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

2 days ago