ಸುಳ್ಯ: ಸುಳ್ಯ ನಗರ ಸೇರಿದಂತೆ ತಾಲೂಕಿನಲ್ಲಿ ವಿಜೃಂಭಣೆಯ ಆಯುಧ ಪೂಜಾ ಉತ್ಸವ ನಡೆಯಿತು. ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ನವರಾತ್ರಿ ಮಹೋತ್ಸವದ ವಿಜೃಂಭಣೆಯ ಮಧ್ಯೆಯೇ ಸೋಮವಾರ ಆಯುಧ ಪೂಜೆ’ಯ ಸಂಭ್ರಮ ಕಂಡು ಬಂತು.
ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನ ಸೇರಿದಂತೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಿತು. ದೇವಸ್ಥಾನಗಳಲ್ಲಿ ನಡೆದ ಆಯುಧ ಪೂಜೆಯಲ್ಲಿ ಸಾವಿರಾರು ವಾಹನಗಳನ್ನು ಪೂಜಿಸಲು ತರಲಾಗಿತ್ತು.
ವಿವಿಧ ಸರಕಾರಿ ಕಚೇರಿಗಳಲ್ಲಿ, ವಿವಿಧ ಸಂಸ್ಥೆಗಳ ಕಚೇರಿ, ಅಂಗಡಿ, ಗ್ಯಾರೇಜ್, ಮಳಿಗೆ ಸಹತ ನಗರ ಮತ್ತು ಗ್ರಾಮೀಣ ಪ್ರದೇಶ ಸೇರಿ ವಿವಿಧೆಡೆ ಸಂಭ್ರಮದಿಂದ ಆಯುಧ ಪೂಜೆ ನಡೆಯಿತು. ಎಲ್ಲೆಡೆ ವರ್ಣಮಯ ಶೃಂಗಾರವನ್ನು ಮಾಡಲಾಗಿತ್ತು. ಸಾವಿರಾರು ವಾಹನಗಳ ಪೂಜೆ ನಡೆಸಲಾಯಿತು. ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ದಸರಾ ಉತ್ಸವ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಸುಳ್ಯ ಶಾರದಾಂಬಾ ಉತ್ಸವದ ವೇದಿಕೆಯಲ್ಲಿಯೂ ಆಯುಧ ಪೂಜೆ ನಡೆಯಿತು. ನೂರಾರು ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು.
ಸೋಮವಾರ ಬೆಳಿಗ್ಗೆ ಆರಂಭಗೊಂಡ ಆಯುಧ ಪೂಜಾ ಉತ್ಸವ ರಾತ್ರಿಯವರೆಗೂ ಮುಂದುವರಿಯಿತು.
ಸರಕಾರಿ ಮತ್ತು ಖಾಸಗಿ ಬಸ್ಗಳ ಸಹಿತ ಎಲ್ಲಾ ವಾಹನಗಳನ್ನು ಶ್ರೀಗಂಧ, ವೈವಿಧ್ಯಮಯ ಹೂವುಗಳಿಂದ ಅಲಂಕರಿಸಲಾಗಿತ್ತು. ಆಯುಧ ಪೂಜೆ ಪ್ರಯುಕ್ತ ಹೂ, ಹಣ್ಣು ಹಂಪಲು, ತೆಂಗಿನ ಕಾಯಿ, ನಿಂಬೆ ಹಣ್ಣಿಗೆ ಭಾರೀ ಬೇಡಿಕೆ ಇತ್ತು. ರಸ್ತೆ ಬದಿಗಳಲ್ಲಿಯೂ ಹೂವಿನ ಮಾರಾಟದ ಭರಾಟೆ ಕಂಡು ಬಂದಿತ್ತು. ಸೇವಂತಿಗೆ, ಮಲ್ಲಿಗೆ ಮತ್ತಿತರ ಹೂವುಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿತ್ತು. ಆಯುಧ ಪೂಜೆಗೆ ಲಿಂಬೆಹಣ್ಣು ಮತ್ತು ಹಸಿ ಮೆಣಸಿನ ಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತಿದ್ದು ಹೆಚ್ಚಿನ ಬೇಡಿಕೆ ಇತ್ತು ಎನ್ನುತ್ತಾರೆ ವ್ಯಾಪಾರಿಗಳು.
ಹಲವು ಕಡೆಗಳಲ್ಲಿ ಭಾನುವಾರವೂ ವಾಹನಗಳ ಪೂಜೆ ನಡೆದಿತ್ತು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…