ನಾಡಿನೆಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ತುಳುನಾಡಿನಲ್ಲಿ ನಾಗಾರಾಧನೆ ವಿಶೇಷವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ನಾಗನಿಗೆ ವಿಶೇಷ ಪೂಜೆ ನಡೆಯಿತು. ಮನೆ ಮನೆಗಳಲ್ಲಿ ನಾಗ ಬನಗಳಲ್ಲಿ ವಿಶೇಷ ಪೂಜೆ, ತಂಬಿಲ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿಯಂದು ವಿಶೇಷ ಪೂಜೆಯ ಜೊತೆಗೆ ದೇವಸ್ಥಾನದಲ್ಲಿ ಈ ಬಾರಿ ನಾಗರಹಾವು ಕಂಡುಬಂದದ್ದು ಭಕ್ತ ಸಮೂಹಕ್ಕೆ ವಿಶೇಷ ಎನಿಸಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ
ನಾಗರಪಂಚಮಿಯಂದು ತುಳುನಾಡಿನ ಎಲ್ಲಾ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ವಿಶೇಷವಾದ ಪೂಜೆ ನಡೆಯುತ್ತದೆ. ಈ ಬಾರಿ ಕೊರೋನಾ ಕಾರಣದಿಂದ ಆಚರಣೆ , ಸಂಪ್ರದಾಯಕ್ಕೆ ಧಕ್ಕೆ ಬಾರದಂತೆ ಎಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ಪ್ರತೀ ಬಾರಿಯಂತೆ ಈ ಬಾರಿಯೂ ಮನೆ ಮನೆಗಳಲ್ಲಿರುವ ನಾಗ ಬನಗಳಲ್ಲಿ ವಿಶೇಷ ಆರಾಧನೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಂಡುಬಂದ ನಾಗರಹಾವು – ವೀಡಿಯೋ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿಯಂದು ನಾಗರಹಾವು ಕಂಡುಬಂದದ್ದು ವಿಶೇಷ ಎನಿಸಿತು. ಕುಕ್ಕೆ ಸುಬ್ರಹ್ಮಣ್ಯ ಎಂದರೆ ನಾಗನ ಊರು. ಇಲ್ಲಿನ ಪರಿಸರದಲ್ಲಿ ಹಿಂದಿನಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ನಾಗರಹಾವುಗಳು ಕಂಡುಬರುತ್ತಿತ್ತು. ಅಭಿವೃದ್ಧಿಯ ಹೆಸರಿನಲ್ಲಿ ಕಾಂಕ್ರೀಟ್ ಕಾಡುಗಳಾದ ಬಳಿಕ ಅಪರೂಪ ಎನಿಸಿದೆ, ಈಗ ವಿಶೇಷ ಎನಿಸಿದೆ.
ನಾಗಬನಗಳಲ್ಲಿ :
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…