ನಾಡಿನೆಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ತುಳುನಾಡಿನಲ್ಲಿ ನಾಗಾರಾಧನೆ ವಿಶೇಷವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ನಾಗನಿಗೆ ವಿಶೇಷ ಪೂಜೆ ನಡೆಯಿತು. ಮನೆ ಮನೆಗಳಲ್ಲಿ ನಾಗ ಬನಗಳಲ್ಲಿ ವಿಶೇಷ ಪೂಜೆ, ತಂಬಿಲ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿಯಂದು ವಿಶೇಷ ಪೂಜೆಯ ಜೊತೆಗೆ ದೇವಸ್ಥಾನದಲ್ಲಿ ಈ ಬಾರಿ ನಾಗರಹಾವು ಕಂಡುಬಂದದ್ದು ಭಕ್ತ ಸಮೂಹಕ್ಕೆ ವಿಶೇಷ ಎನಿಸಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ
ನಾಗರಪಂಚಮಿಯಂದು ತುಳುನಾಡಿನ ಎಲ್ಲಾ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ವಿಶೇಷವಾದ ಪೂಜೆ ನಡೆಯುತ್ತದೆ. ಈ ಬಾರಿ ಕೊರೋನಾ ಕಾರಣದಿಂದ ಆಚರಣೆ , ಸಂಪ್ರದಾಯಕ್ಕೆ ಧಕ್ಕೆ ಬಾರದಂತೆ ಎಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ಪ್ರತೀ ಬಾರಿಯಂತೆ ಈ ಬಾರಿಯೂ ಮನೆ ಮನೆಗಳಲ್ಲಿರುವ ನಾಗ ಬನಗಳಲ್ಲಿ ವಿಶೇಷ ಆರಾಧನೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಂಡುಬಂದ ನಾಗರಹಾವು – ವೀಡಿಯೋ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿಯಂದು ನಾಗರಹಾವು ಕಂಡುಬಂದದ್ದು ವಿಶೇಷ ಎನಿಸಿತು. ಕುಕ್ಕೆ ಸುಬ್ರಹ್ಮಣ್ಯ ಎಂದರೆ ನಾಗನ ಊರು. ಇಲ್ಲಿನ ಪರಿಸರದಲ್ಲಿ ಹಿಂದಿನಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ನಾಗರಹಾವುಗಳು ಕಂಡುಬರುತ್ತಿತ್ತು. ಅಭಿವೃದ್ಧಿಯ ಹೆಸರಿನಲ್ಲಿ ಕಾಂಕ್ರೀಟ್ ಕಾಡುಗಳಾದ ಬಳಿಕ ಅಪರೂಪ ಎನಿಸಿದೆ, ಈಗ ವಿಶೇಷ ಎನಿಸಿದೆ.
ನಾಗಬನಗಳಲ್ಲಿ :
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…