Advertisement
ಸಾಹಿತ್ಯ

ನಾಡಿನ 64 ಸಾಧಕ ಶ್ರೇಷ್ಠರಿಗೆ ಕನ್ನಡ ರಾಜ್ಯೋತ್ಸವ ಪುರಸ್ಕಾರದ ಗರಿ

Share

ಚಿಕ್ಕಮಗಳೂರು: ಶಿಕ್ಷಣ ತಜ್ಞ ಕುವೆಂಪು ವಿವಿ ವಿಶ್ರಾಂತ ಕುಲಪತಿ ಸುಳ್ಯ ತಾಲೂಕಿನ ಚೊಕ್ಕಾಡಿ ಕೊಳಂಬೆ ಪ್ರೊ.ಕೆ.ಚಿದಾನಂದ ಗೌಡ, ಪುತ್ತೂರಿನ ಯಕ್ಷಗಾನ ಕಲಾವಿದ ಶ್ರೀಧರ ಭಂಡಾರಿ, ಬೆಳ್ತಂಗಡಿಯ ಭತ್ತದ ತಳಿ ಸಂರಕ್ಷಕ ಡಿ.ಕೆ.ದೇವರಾವ್  ಸಹಿತ 64 ಸಾಧಕ ಗಣ್ಯರು 2019ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ನೇತೃತ್ವದಲ್ಲಿ ರಚಿಸಲಾಗಿದ್ದ 20 ತಜ್ಞರ ಸಲಹಾ ಸಮಿತಿ ಶಿಫಾರಸು ಮಾಡಿದ್ದ 128 ಸಾಧಕರ ಪಟ್ಟಿಯಲ್ಲಿ ಅಂತಿಮವಾಗಿ 29 ವಿವಿಧ ಕ್ಷೇತ್ರಗಳ 64 ಮಂದಿಯನ್ನು ರಾಜ್ಯ ಸರ್ಕಾರ ಗೌರವಕ್ಕೆ ಆಯ್ಕೆ ಮಾಡಿದೆ. ಅ. 25ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪುರಸ್ಕೃತರ ಆಯ್ಕೆ ಅಂತಿಮಗೊಳಿಸಲಾಗಿತ್ತು. ಪ್ರಮುಖವಾಗಿ ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ, ಡಾ. ಗುರುರಾಜ ಕರಜಗಿ, ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯ ಮೂರ್ತಿ ಎನ್. ಕುಮಾರ್, ಸಿತಾರ್ ವಿದ್ವಾನ್ ಛೋಟೆ ರಹಿಮತ್ ಖಾನ್, ಹಿರಿಯ ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ್, ಅಂತಾರಾಷ್ಟ್ರೀಯ ಯೋಗ ಚಾಂಪಿಯನ್ ಖುಷಿ, ಹಿರಿಯ ಪತ್ರಕರ್ತ ಬಿ.ವಿ.ಮಲ್ಲಿಕಾರ್ಜುನಯ್ಯ ಮೊದಲಾದವರಿಗೆ ಪ್ರಶಸ್ತಿ ಲಭ್ಯವಾಗಿದೆ.

ಸಚಿವ ಸಿ.ಟಿ. ರವಿ ಸುದ್ದಿಗೋಷ್ಠಿಯಲ್ಲಿ ಪುರಸ್ಕೃತರ ಪಟ್ಟಿ ಪ್ರಕಟಿಸಿದರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿ ರೂಪಿಸಿರುವ ಮಾರ್ಗಸೂಚಿಗಳ ಅನ್ವಯ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ನ.1ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ರಾಜ್ಯೋತ್ಸವ ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪ್ರಶಸ್ತಿಯು 1 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಕೆತ್ತನೆ ಮಾಡಿದ 25 ಗ್ರಾಂ ಚಿನ್ನದ ಪದಕ ಒಳಗೊಂಡಿದೆ. ರಂಗಭೂಮಿ, ಜಾನಪದ ಹಾಗೂ ವಿವಿಧ ಕ್ಷೇತ್ರಗಳ ವಿಶಿಷ್ಠ ಸಾಧನೆಗೆ ಮೀಸಲಾದ ಸಂಕೀರ್ಣ ಕ್ಷೇತ್ರದಿಂದ ಗರಿಷ್ಠ ತಲಾ 6 ಸಾಧಕರು ಆಯ್ಕೆಯಾಗಿದ್ದರೆ, ವೈದ್ಯಕೀಯದಿಂದ ಐವರನ್ನು ಆಯ್ಕೆ ಮಾಡಲಾಗಿದೆ. ಶಿಕ್ಷಣ, ಸಾಹಿತ್ಯ ಹಾಗೂ ಸಂಗೀತ ಕ್ಷೇತ್ರಕ್ಕೆ ತಲಾ 4, ಕ್ರೀಡೆ ಹಾಗೂ ಹೊರನಾಡು ಕನ್ನಡಿಗರಿಗೆ 3, ಶಿಲ್ಪಕಲೆ, ಚಿತ್ರಕಲೆ, ಸಮಾಜಸೇವೆ, ಕೃಷಿ, ಯೋಗ, ಪರಿಸರ, ಸಂಘಸಂಸ್ಥೆಗೆ ತಲಾ 2, ಯಕ್ಷಗಾನ, ಬಯಲಾಟ, ಚಲನಚಿತ್ರ, ಕಿರುತೆರೆ, ಪತ್ರಿಕೋದ್ಯಮ, ಸಹಕಾರ, ನ್ಯಾಯಾಂಗ, ಗುಡಿ ಕೈಗಾರಿಕೆ ಹಾಗೂ ವಿಮರ್ಶಾ ಕ್ಷೇತ್ರದಿಂದ ಒಬ್ಬರನ್ನು ಪರಿಗಣಿಸಲಾಗಿದೆ ಎಂದು ಸಚಿವ ಸಿ.ಟಿ.ರವಿ ತಿಳಿಸಿದರು.

29 ವಿವಿಧ ಕ್ಷೇತ್ರಗಳ 64 ಸಾಧಕರು ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದು, ನ.1ರಂದು ರಾಜ್ಯ ಸರ್ಕಾರ ಪ್ರಶಸ್ತಿ ವಿತರಿಸಿ ಗೌರವಿಸಲಿದೆ. ಸಾಹಿತ್ಯ, ರಂಗಭೂಮಿ, ಜಾನಪದ, ಸಂಗೀತ, ಶಿಲ್ಪಕಲೆ, ಚಿತ್ರಕಲೆ, ಶಿಕ್ಷಣ, ಸಂಕೀರ್ಣ, ವೈದ್ಯಕೀಯ, ಕ್ರೀಡೆ, ಹೊರನಾಡು ಕನ್ನಡಿಗರು, ಸಮಾಜಸೇವೆ, ಕೃಷಿ, ಯೋಗ, ಪರಿಸರ, ಯಕ್ಷಗಾನ, ಬಯಲಾಟ, ಚಲನಚಿತ್ರ, ಕಿರುತೆರೆ, ಪತ್ರಿಕೋದ್ಯಮ, ಸಹಕಾರ, ನ್ಯಾಯಾಂಗ, ಸಂಘಸಂಸ್ಥೆ, ಗುಡಿ ಕೈಗಾರಿಕೆ ಹಾಗೂ ವಿಮರ್ಶಾ ಕ್ಷೇತ್ರದಿಂದ ಆಯ್ಕೆಯಾದ ಸಾಧಕರು. ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆ ವೇಳೆ ಯಾವುದೇ ಒತ್ತಡ, ಶಿಫಾರಸಿಗೆ ಮಣಿದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಹೇಳಿದರು. ಸಾಧಕರನ್ನು ಆಯ್ಕೆ ಮಾಡುವಾಗ ಸಾಮಾಜಿಕ ನ್ಯಾಯ, ಅರ್ಹತೆ, ಜಿಲ್ಲಾವಾರು ಪ್ರಾತಿನಿಧ್ಯ ಪರಿಗಣಿಸಲಾಗಿದೆ.

29 ವಿವಿಧ ಕ್ಷೇತ್ರಗಳಿಂದ 1512 ಜನ ಅರ್ಜಿ ಸಲ್ಲಿಸಿದ್ದರು. ಇದರೊಟ್ಟಿಗೆ ಪ್ರಶಸ್ತಿಗೆ ಅರ್ಹರಾಗಿದ್ದು ಎಲೆಮರೆಕಾಯಿಯಂತಿರುವವರ ಕುರಿತು ಮಾಹಿತಿ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಕೇಳಲಾಗಿತ್ತು. ಅದರಲ್ಲಿ 357 ಜನರನ್ನು ಗುರುತಿಸಿ, 12 ಜನರಿಗೆ ಪ್ರಶಸ್ತಿ ನೀಡಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

4 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

4 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

4 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

12 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

13 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

13 hours ago