Advertisement
ಸಾಹಿತ್ಯ

ನಾಡಿನ 64 ಸಾಧಕ ಶ್ರೇಷ್ಠರಿಗೆ ಕನ್ನಡ ರಾಜ್ಯೋತ್ಸವ ಪುರಸ್ಕಾರದ ಗರಿ

Share

ಚಿಕ್ಕಮಗಳೂರು: ಶಿಕ್ಷಣ ತಜ್ಞ ಕುವೆಂಪು ವಿವಿ ವಿಶ್ರಾಂತ ಕುಲಪತಿ ಸುಳ್ಯ ತಾಲೂಕಿನ ಚೊಕ್ಕಾಡಿ ಕೊಳಂಬೆ ಪ್ರೊ.ಕೆ.ಚಿದಾನಂದ ಗೌಡ, ಪುತ್ತೂರಿನ ಯಕ್ಷಗಾನ ಕಲಾವಿದ ಶ್ರೀಧರ ಭಂಡಾರಿ, ಬೆಳ್ತಂಗಡಿಯ ಭತ್ತದ ತಳಿ ಸಂರಕ್ಷಕ ಡಿ.ಕೆ.ದೇವರಾವ್  ಸಹಿತ 64 ಸಾಧಕ ಗಣ್ಯರು 2019ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ನೇತೃತ್ವದಲ್ಲಿ ರಚಿಸಲಾಗಿದ್ದ 20 ತಜ್ಞರ ಸಲಹಾ ಸಮಿತಿ ಶಿಫಾರಸು ಮಾಡಿದ್ದ 128 ಸಾಧಕರ ಪಟ್ಟಿಯಲ್ಲಿ ಅಂತಿಮವಾಗಿ 29 ವಿವಿಧ ಕ್ಷೇತ್ರಗಳ 64 ಮಂದಿಯನ್ನು ರಾಜ್ಯ ಸರ್ಕಾರ ಗೌರವಕ್ಕೆ ಆಯ್ಕೆ ಮಾಡಿದೆ. ಅ. 25ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪುರಸ್ಕೃತರ ಆಯ್ಕೆ ಅಂತಿಮಗೊಳಿಸಲಾಗಿತ್ತು. ಪ್ರಮುಖವಾಗಿ ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ, ಡಾ. ಗುರುರಾಜ ಕರಜಗಿ, ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯ ಮೂರ್ತಿ ಎನ್. ಕುಮಾರ್, ಸಿತಾರ್ ವಿದ್ವಾನ್ ಛೋಟೆ ರಹಿಮತ್ ಖಾನ್, ಹಿರಿಯ ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ್, ಅಂತಾರಾಷ್ಟ್ರೀಯ ಯೋಗ ಚಾಂಪಿಯನ್ ಖುಷಿ, ಹಿರಿಯ ಪತ್ರಕರ್ತ ಬಿ.ವಿ.ಮಲ್ಲಿಕಾರ್ಜುನಯ್ಯ ಮೊದಲಾದವರಿಗೆ ಪ್ರಶಸ್ತಿ ಲಭ್ಯವಾಗಿದೆ.

ಸಚಿವ ಸಿ.ಟಿ. ರವಿ ಸುದ್ದಿಗೋಷ್ಠಿಯಲ್ಲಿ ಪುರಸ್ಕೃತರ ಪಟ್ಟಿ ಪ್ರಕಟಿಸಿದರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿ ರೂಪಿಸಿರುವ ಮಾರ್ಗಸೂಚಿಗಳ ಅನ್ವಯ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ನ.1ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ರಾಜ್ಯೋತ್ಸವ ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪ್ರಶಸ್ತಿಯು 1 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಕೆತ್ತನೆ ಮಾಡಿದ 25 ಗ್ರಾಂ ಚಿನ್ನದ ಪದಕ ಒಳಗೊಂಡಿದೆ. ರಂಗಭೂಮಿ, ಜಾನಪದ ಹಾಗೂ ವಿವಿಧ ಕ್ಷೇತ್ರಗಳ ವಿಶಿಷ್ಠ ಸಾಧನೆಗೆ ಮೀಸಲಾದ ಸಂಕೀರ್ಣ ಕ್ಷೇತ್ರದಿಂದ ಗರಿಷ್ಠ ತಲಾ 6 ಸಾಧಕರು ಆಯ್ಕೆಯಾಗಿದ್ದರೆ, ವೈದ್ಯಕೀಯದಿಂದ ಐವರನ್ನು ಆಯ್ಕೆ ಮಾಡಲಾಗಿದೆ. ಶಿಕ್ಷಣ, ಸಾಹಿತ್ಯ ಹಾಗೂ ಸಂಗೀತ ಕ್ಷೇತ್ರಕ್ಕೆ ತಲಾ 4, ಕ್ರೀಡೆ ಹಾಗೂ ಹೊರನಾಡು ಕನ್ನಡಿಗರಿಗೆ 3, ಶಿಲ್ಪಕಲೆ, ಚಿತ್ರಕಲೆ, ಸಮಾಜಸೇವೆ, ಕೃಷಿ, ಯೋಗ, ಪರಿಸರ, ಸಂಘಸಂಸ್ಥೆಗೆ ತಲಾ 2, ಯಕ್ಷಗಾನ, ಬಯಲಾಟ, ಚಲನಚಿತ್ರ, ಕಿರುತೆರೆ, ಪತ್ರಿಕೋದ್ಯಮ, ಸಹಕಾರ, ನ್ಯಾಯಾಂಗ, ಗುಡಿ ಕೈಗಾರಿಕೆ ಹಾಗೂ ವಿಮರ್ಶಾ ಕ್ಷೇತ್ರದಿಂದ ಒಬ್ಬರನ್ನು ಪರಿಗಣಿಸಲಾಗಿದೆ ಎಂದು ಸಚಿವ ಸಿ.ಟಿ.ರವಿ ತಿಳಿಸಿದರು.

29 ವಿವಿಧ ಕ್ಷೇತ್ರಗಳ 64 ಸಾಧಕರು ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದು, ನ.1ರಂದು ರಾಜ್ಯ ಸರ್ಕಾರ ಪ್ರಶಸ್ತಿ ವಿತರಿಸಿ ಗೌರವಿಸಲಿದೆ. ಸಾಹಿತ್ಯ, ರಂಗಭೂಮಿ, ಜಾನಪದ, ಸಂಗೀತ, ಶಿಲ್ಪಕಲೆ, ಚಿತ್ರಕಲೆ, ಶಿಕ್ಷಣ, ಸಂಕೀರ್ಣ, ವೈದ್ಯಕೀಯ, ಕ್ರೀಡೆ, ಹೊರನಾಡು ಕನ್ನಡಿಗರು, ಸಮಾಜಸೇವೆ, ಕೃಷಿ, ಯೋಗ, ಪರಿಸರ, ಯಕ್ಷಗಾನ, ಬಯಲಾಟ, ಚಲನಚಿತ್ರ, ಕಿರುತೆರೆ, ಪತ್ರಿಕೋದ್ಯಮ, ಸಹಕಾರ, ನ್ಯಾಯಾಂಗ, ಸಂಘಸಂಸ್ಥೆ, ಗುಡಿ ಕೈಗಾರಿಕೆ ಹಾಗೂ ವಿಮರ್ಶಾ ಕ್ಷೇತ್ರದಿಂದ ಆಯ್ಕೆಯಾದ ಸಾಧಕರು. ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆ ವೇಳೆ ಯಾವುದೇ ಒತ್ತಡ, ಶಿಫಾರಸಿಗೆ ಮಣಿದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಹೇಳಿದರು. ಸಾಧಕರನ್ನು ಆಯ್ಕೆ ಮಾಡುವಾಗ ಸಾಮಾಜಿಕ ನ್ಯಾಯ, ಅರ್ಹತೆ, ಜಿಲ್ಲಾವಾರು ಪ್ರಾತಿನಿಧ್ಯ ಪರಿಗಣಿಸಲಾಗಿದೆ.

29 ವಿವಿಧ ಕ್ಷೇತ್ರಗಳಿಂದ 1512 ಜನ ಅರ್ಜಿ ಸಲ್ಲಿಸಿದ್ದರು. ಇದರೊಟ್ಟಿಗೆ ಪ್ರಶಸ್ತಿಗೆ ಅರ್ಹರಾಗಿದ್ದು ಎಲೆಮರೆಕಾಯಿಯಂತಿರುವವರ ಕುರಿತು ಮಾಹಿತಿ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಕೇಳಲಾಗಿತ್ತು. ಅದರಲ್ಲಿ 357 ಜನರನ್ನು ಗುರುತಿಸಿ, 12 ಜನರಿಗೆ ಪ್ರಶಸ್ತಿ ನೀಡಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

10 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago