Advertisement
ಸಾಹಿತ್ಯ

ನಾಡೋಜ ಹಂಪನಾ ವ್ಯಕ್ತಿ, ಕೃತಿ: ಅನುಸಂಧಾನ ವಿಚಾರ ಸಂಕಿರಣ

Share

ಧರ್ಮಸ್ಥಳ:  ಸಹನಶೀಲ ಸ್ವಭಾವದ, ಅಗಾಧ ಭಾಷಾ ಪಾಂಡಿತ್ಯ ಹೊಂದಿರುವ, ಹೃದಯ ಶ್ರೀಮಂತಿಕೆ ಹೊಂದಿರುವ ನಾಡೋಜ ಹಂಪಸಂದ್ರ ನಾಗರಾಜಯ್ಯ (ಹಂಪನಾ) ಅವರುಕನ್ನಡ ನಾಡು-ನುಡಿ, ಸಂಸ್ಕೃತಿಗೆ ಅಮೂಲ್ಯ ಸೇವೆ ನೀಡಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶುಕ್ರವಾರ ಉಜಿರೆಯಲ್ಲಿಎಸ್.ಡಿ.ಎಂ.ಕಾಲೇಜಿನಲ್ಲಿ ಕನ್ನಡ ಸಂಘ ಮತ್ತು ಕನ್ನಡ ಸಾಹಿತ್ಯ ಪರಿಷತ್‍ನ ಬೆಳ್ತಂಗಡಿನ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಹಂಪನಾ ವ್ಯಕ್ತಿ, ಕೃತಿ: ಅನುಸಂಧಾನ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಇಂದು “ಶಾಸ್ತ್ರಿ” ಪರಂಪರೆ ಕಣ್ಮರೆಯಾಗಿದೆ. ಜೈನಧರ್ಮದ ಆಳವಾದ ಅಧ್ಯಯನ ಮಾಡಿದವರು “ಶಾಸ್ತ್ರಿ” ಆಗುತ್ತಾರೆ. ಆದರೆ ಇಂದು ವಿಶೇಷ ಧಾರ್ಮಿಕ ಅಧ್ಯಯನ ಮಾಡಿದ ಶಾಸ್ತ್ರಿಗಳ ಕೊರತೆ ಎದ್ದು ಕಾಣುತ್ತಿದೆ. ಜೈನಧರ್ಮದಲ್ಲಿ ವಿಶೇಷ ಅಧ್ಯಯನ, ಸಂಶೋಧನೆ ಮಾಡಿದ ಹಂಪನಾ ಇಂದುಎಲ್ಲರಿಗೂ ಧರ್ಮದ ಬಗ್ಗೆ ಅಧಿಕೃತ ಮಾಹಿತಿ ನೀಡುವ “ಹಂಪನಾ ಶಾಸ್ತ್ರಿ” ಆಗಿದ್ದಾರೆ ಎಂದು ಹೆಗ್ಗಡೆಯವರು ಶ್ಲಾಘಿಸಿದರು.

ನಾಡೋಜ ಕಮಲಾ ಹಂಪನಾ ವಿರಚಿತ “ಬೇರು-ಬೆಂಕಿ-ಬಿಳಲು” ಕೃತಿ ಬಿಡುಗಡೆ ಮಾಡಿದ ಹೇಮಾವತಿ ವಿ. ಹೆಗ್ಗಡೆಯವರು ಮಾತನಾಡಿ, ತಮ್ಮಜೀವನಾನುಭವವನ್ನು, ನೋವು-ನಲಿವನ್ನು ಕಮಲಾ ಹಂಪನಾ ಪುಸ್ತಕದಲ್ಲಿ ವಿವರಿಸಿದ್ದು ಕಾದಂಬರಿಯಂತೆ ಸುಲಿತವಾಗಿ ಓದಿಸಿಕೊಂಡು ಹೋಗುತ್ತದೆಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಿವೃತ್ತ ಪ್ರಾಧ್ಯಾಪಕ ಬಿ.ಎ. ವಿವೇಕ ರೈ ಶುಭಾಶಂಸನೆ ಮಾಡಿ, ವ್ಯಕ್ತಿಯು ವೃತ್ತಿಯಿಂದ ನಿವೃತ್ತನಾದ ಬಳಿಕ ಆತನ ನಿಜವಾದಜೀವನಆರಂಭವಾಗುತ್ತದೆ. ವಿದ್ಯಾರ್ಥಿಗಳು ನಿರಂತರಓದುವ ಹವ್ಯಾಸದೊಂದಿಗೆಅಧ್ಯಯನ ಶೀಲತೆ ಬೆಳೆಸಿಕೊಳ್ಳಬೇಕು.ಪ್ರಾಕೃತ ಹಾಗೂ ಸಂಸ್ಕೃತ ಅಧ್ಯಯನದೊಂದಿಗೆ ಹಳೆಗನ್ನಡ ಕಾವ್ಯಗಳನ್ನು ಓದಬೇಕು ಎಂದರು.

ಅಧ್ಯಕ್ಷತೆ ವಹಿಸಿದ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ನಾಡೋಜ ಚಂದ್ರಶೇಖರ ಕಂಬಾರ ಮಾತನಾಡಿ, ಬ್ರಿಟಿಷರ ಆಡಳಿತದಿಂದ ನಾವು ಅವರದಾಸಾನುದಾಸರಾಗಿ ಬೆಳೆಯಬೇಕಾಯಿತು. ಸ್ವಾತಂತ್ರ್ಯದೊರಕಿದ ಬಳಿಕ ಭಕ್ತಿ ಚಳವಳಿಯಿಂದ ಧಾರ್ಮಿಕ ಉನ್ನತಿ ಸಾಧ್ಯವಾಯಿತು.ಎಲ್ಲರೂ ಮುಕ್ತವಾದ ಭಕ್ತಿಯಿಂದ ದೇವರ ಅನುಗ್ರಹಕ್ಕೆ ಪಾತ್ರರಾಗಲು ಸಾಧ್ಯವಾಯಿತು.ಯಾವುದು ವಿನಯವನ್ನು ನೀಡುತ್ತದೊ ಅದು ನಿಜವಾದ ವಿದ್ಯೆ. ಕಥೆಗಳ ಮೂಲಕ ಬದುಕಿಗೆ ಪೂರಕವಾದ ಅಮೂಲ್ಯ ಮಾರ್ಗದರ್ಶನ ಸಿಗುತ್ತದೆ.ಈ ದಿಸೆಯಲ್ಲಿ ಮೂರು ಸಾವಿರ ಕಥೆಗಳನ್ನು ಬರೆದ ಹಂಪನಾ ಕೊಡುಗೆಅಮೂಲ್ಯವಾಗಿದೆ.ಕಥೆಗಳ ಮೂಲಕ ಬ್ರಹ್ಮ ಸುಖ ನೀಡುವರ ಸಾನುಭವ ದೊರಕುತ್ತದೆ.ನಮ್ಮದುಃಖ ದುಮ್ಮಾನಗಳು ದೂರವಾಗುತ್ತವೆ.
ಪ್ರಾಕೃತ ವಿಶ್ವವಿದ್ಯಾಲಯ ಪ್ರಾರಂಭಿಸಬೇಕುಎಂದುಅವರು ಸರ್ಕಾರವನ್ನು ಒತ್ತಾಯಿಸಿದರು.

ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್. ಪ್ರಭಾಕರ್ ಮತ್ತು ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರಕುಮಾರ್‍ಹಾಗೂ ಡಾ. ಬಿ. ಯಶೋವರ್ಮ, ರಾಜ್ಯಶ್ರೀ ಹಂಪನಾ, ಮಾಜಿ ಸಚಿವ ಕೆ.ಅಭಯಚಂದ್ರಜೈನ್ ಉಪಸ್ಥಿತರಿದ್ದರು.

ಕಾಲೇಜಿನಕನ್ನಡ ವಿಭಾಗದ ಮುಖ್ಯಸ್ಥ ಡಾ. ಬಿ.ಪಿ. ಸಂಪತ್‍ಕುಮಾರ್ ಸ್ವಾಗತಿಸಿದರು.ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಧನ್ಯವಾದವಿತ್ತರು.ಡಾ. ರಾಜಶೇಖರ ಹಳೆಮನೆ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

3 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

7 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

7 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

17 hours ago

ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳ…

17 hours ago

ಹವಾಮಾನ ವರದಿ | 01-06-2026 | ಜೂನ್ 4 ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭ ಸಾಧ್ಯತೆ – ಜೂನ್ 8ರಿಂದ ಮಳೆ ಮತ್ತಷ್ಟು ಹೆಚ್ಚಳದ ಸೂಚನೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ವಾತಾವರಣ ಮುಂದುವರಿಯಲಿದೆ. ಜೂನ್…

23 hours ago