Advertisement
ರಾಷ್ಟ್ರೀಯ

ನಾನು ಸಕ್ರಿಯವಾಗಿದ್ದೇನೆ – ಆರೋಗ್ಯ ಸಮಸ್ಯೆ ಇಲ್ಲ – ಸ್ಪಷ್ಟನೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

Share

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ  ಚರ್ಚೆಯಾಗುತ್ತಿದ್ದ ವಿಷಯಕ್ಕೆ ತೆರೆ ಬಿದ್ದಿದೆ. ಕೆಲವು ದಿನಗಳ ಹಿಂದೆಯಷ್ಟೇ ಸಿಎಎ ವಿಚಾರದಲ್ಲಿ ದೇಶದಾದ್ಯಂತ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ  ಶಹಭಾಸ್ ಗಿಟ್ಟಿಸಿಕೊಂಡಿದ್ದರು. ಆದರೆ ಈಗ ಕೊರೊನಾ ವಿಷಯದಲ್ಲಿ  ನರೇಂದ್ರ ಮೋದಿ ಅವರೇ ಮುಂದೆ ಬಂದಿದ್ದಾರೆ ಮಾತ್ರವಲ್ಲ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೀಡ್ ಮಾಡುತ್ತಾರೆ. ಇದೇಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಎಲ್ಲೂ ಕಾಣಿಸುತ್ತಿಲ್ಲ ಎಂಬ ಚರ್ಚೆ ಆರಂಭವಾಗಿತ್ತು. ಈ ಸಂದರ್ಭ ಆರೋಗ್ಯದ ಸಮಸ್ಯೆ ಎಂದು ಒಂದು ಕಡೆ ವಾದ ಇದ್ದರೆ ಇನ್ನೊಂದು ಕಡೆ ಅಮಿತ್ ಶಾ ಅವರನ್ನು ಬದಿಗೆ ಸರಿಸಲಾಗುತ್ತಿದೆ, ಅವರ ಅಭಿಪ್ರಾಯ ಪಡೆಯಲಾಗುತ್ತಿಲ್ಲ ಎಂಬ ಬಗ್ಗೆಯೂ ಚರ್ಚೆಯಾಗುತ್ತಿತ್ತು.

ಇದೀಗ ಈ ಎಲ್ಲಾ ಚರ್ಚೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೇ ಟ್ವಿಟ್ಟರ್ ಮೂಲಕವೇ ಉತ್ತರ ನೀಡಿದ್ದಾರೆ, ಮಾತ್ರವಲ್ಲ ಮಾಧ್ಯಮಗಳ ಮೂಲಕ  ಇಲಾಖೆಗಳಿಗೆ ಸಂಬಂಧಿಸಿದ ಹೇಳಿಕೆಗಳನ್ನೂ ನೀಡಿದ್ದಾರೆ.

ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ನಾನು ಆರೋಗ್ಯವಾಗಿದ್ದೇನೆ. ನನಗೆ ಏನೂ ಆಗಿಲ್ಲ. ನಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ, ಪ್ರಸ್ತುತ ದೇಶ ಮಾರಣಾಂತಿಕ ಕೊರೊನಾ ವೈರಸ್‌ ವಿರುದ್ದ ಹೋರಾಟ ನಡೆಸುತ್ತಿದೆ. ಗೃಹ ಸಚಿವನಾಗಿ ನಾನು ಮಾಡಬೇಕಾದ ಕಾರ್ಯಗಳನ್ನು ನಿರ್ವಹಿಸುತ್ತಿದ್ದೇನೆ. ಈ ಅಪಪ್ರಚಾರದ ಬಗ್ಗೆ ನನ್ನ ಗಮನಕ್ಕೆ ಬಂದರೂ ಸಹ ನಾನು ತಲೆಕೆಡಿಸಿಕೊಳ್ಳದ ಕಾರಣದಿಂದ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ ಎಂದು ತಿಳಿಸಿದ್ದಾರೆ. ಈಗ ಬಿಜೆಪಿಯ ಲಕ್ಷಾಂತರ ಕಾರ್ಯಕರ್ತರು ಹಾಗೂ ನನ್ನ ಹಿತೈಷಿಗಳು ಕಳೆದ ಎರಡು ದಿನಗಳಿಂದ ನನ್ನ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಹಾಗಾಗಿ ಈ ವಿಚಾರವಾಗಿ ನಾನೇ ಸ್ಪಷ್ಟನೆ ನೀಡುತ್ತಿದ್ದೇನೆ. ನನಗೆ ಯಾವುದೇ ಕಾಯಿಲೆ ಇಲ್ಲ. ನಾನು ಆರೋಗ್ಯವಾಗಿದ್ದೇನೆ ಎಂದಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

4 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

5 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

7 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

12 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

12 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

23 hours ago