ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದ್ದ ವಿಷಯಕ್ಕೆ ತೆರೆ ಬಿದ್ದಿದೆ. ಕೆಲವು ದಿನಗಳ ಹಿಂದೆಯಷ್ಟೇ ಸಿಎಎ ವಿಚಾರದಲ್ಲಿ ದೇಶದಾದ್ಯಂತ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಹಭಾಸ್ ಗಿಟ್ಟಿಸಿಕೊಂಡಿದ್ದರು. ಆದರೆ ಈಗ ಕೊರೊನಾ ವಿಷಯದಲ್ಲಿ ನರೇಂದ್ರ ಮೋದಿ ಅವರೇ ಮುಂದೆ ಬಂದಿದ್ದಾರೆ ಮಾತ್ರವಲ್ಲ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೀಡ್ ಮಾಡುತ್ತಾರೆ. ಇದೇಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಲ್ಲೂ ಕಾಣಿಸುತ್ತಿಲ್ಲ ಎಂಬ ಚರ್ಚೆ ಆರಂಭವಾಗಿತ್ತು. ಈ ಸಂದರ್ಭ ಆರೋಗ್ಯದ ಸಮಸ್ಯೆ ಎಂದು ಒಂದು ಕಡೆ ವಾದ ಇದ್ದರೆ ಇನ್ನೊಂದು ಕಡೆ ಅಮಿತ್ ಶಾ ಅವರನ್ನು ಬದಿಗೆ ಸರಿಸಲಾಗುತ್ತಿದೆ, ಅವರ ಅಭಿಪ್ರಾಯ ಪಡೆಯಲಾಗುತ್ತಿಲ್ಲ ಎಂಬ ಬಗ್ಗೆಯೂ ಚರ್ಚೆಯಾಗುತ್ತಿತ್ತು.
ಇದೀಗ ಈ ಎಲ್ಲಾ ಚರ್ಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಟ್ವಿಟ್ಟರ್ ಮೂಲಕವೇ ಉತ್ತರ ನೀಡಿದ್ದಾರೆ, ಮಾತ್ರವಲ್ಲ ಮಾಧ್ಯಮಗಳ ಮೂಲಕ ಇಲಾಖೆಗಳಿಗೆ ಸಂಬಂಧಿಸಿದ ಹೇಳಿಕೆಗಳನ್ನೂ ನೀಡಿದ್ದಾರೆ.
ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾನು ಆರೋಗ್ಯವಾಗಿದ್ದೇನೆ. ನನಗೆ ಏನೂ ಆಗಿಲ್ಲ. ನಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ, ಪ್ರಸ್ತುತ ದೇಶ ಮಾರಣಾಂತಿಕ ಕೊರೊನಾ ವೈರಸ್ ವಿರುದ್ದ ಹೋರಾಟ ನಡೆಸುತ್ತಿದೆ. ಗೃಹ ಸಚಿವನಾಗಿ ನಾನು ಮಾಡಬೇಕಾದ ಕಾರ್ಯಗಳನ್ನು ನಿರ್ವಹಿಸುತ್ತಿದ್ದೇನೆ. ಈ ಅಪಪ್ರಚಾರದ ಬಗ್ಗೆ ನನ್ನ ಗಮನಕ್ಕೆ ಬಂದರೂ ಸಹ ನಾನು ತಲೆಕೆಡಿಸಿಕೊಳ್ಳದ ಕಾರಣದಿಂದ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ ಎಂದು ತಿಳಿಸಿದ್ದಾರೆ. ಈಗ ಬಿಜೆಪಿಯ ಲಕ್ಷಾಂತರ ಕಾರ್ಯಕರ್ತರು ಹಾಗೂ ನನ್ನ ಹಿತೈಷಿಗಳು ಕಳೆದ ಎರಡು ದಿನಗಳಿಂದ ನನ್ನ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಹಾಗಾಗಿ ಈ ವಿಚಾರವಾಗಿ ನಾನೇ ಸ್ಪಷ್ಟನೆ ನೀಡುತ್ತಿದ್ದೇನೆ. ನನಗೆ ಯಾವುದೇ ಕಾಯಿಲೆ ಇಲ್ಲ. ನಾನು ಆರೋಗ್ಯವಾಗಿದ್ದೇನೆ ಎಂದಿದ್ದಾರೆ.
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…