Advertisement
ರಾಷ್ಟ್ರೀಯ

ನಾನು ಸಕ್ರಿಯವಾಗಿದ್ದೇನೆ – ಆರೋಗ್ಯ ಸಮಸ್ಯೆ ಇಲ್ಲ – ಸ್ಪಷ್ಟನೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

Share

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ  ಚರ್ಚೆಯಾಗುತ್ತಿದ್ದ ವಿಷಯಕ್ಕೆ ತೆರೆ ಬಿದ್ದಿದೆ. ಕೆಲವು ದಿನಗಳ ಹಿಂದೆಯಷ್ಟೇ ಸಿಎಎ ವಿಚಾರದಲ್ಲಿ ದೇಶದಾದ್ಯಂತ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ  ಶಹಭಾಸ್ ಗಿಟ್ಟಿಸಿಕೊಂಡಿದ್ದರು. ಆದರೆ ಈಗ ಕೊರೊನಾ ವಿಷಯದಲ್ಲಿ  ನರೇಂದ್ರ ಮೋದಿ ಅವರೇ ಮುಂದೆ ಬಂದಿದ್ದಾರೆ ಮಾತ್ರವಲ್ಲ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೀಡ್ ಮಾಡುತ್ತಾರೆ. ಇದೇಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಎಲ್ಲೂ ಕಾಣಿಸುತ್ತಿಲ್ಲ ಎಂಬ ಚರ್ಚೆ ಆರಂಭವಾಗಿತ್ತು. ಈ ಸಂದರ್ಭ ಆರೋಗ್ಯದ ಸಮಸ್ಯೆ ಎಂದು ಒಂದು ಕಡೆ ವಾದ ಇದ್ದರೆ ಇನ್ನೊಂದು ಕಡೆ ಅಮಿತ್ ಶಾ ಅವರನ್ನು ಬದಿಗೆ ಸರಿಸಲಾಗುತ್ತಿದೆ, ಅವರ ಅಭಿಪ್ರಾಯ ಪಡೆಯಲಾಗುತ್ತಿಲ್ಲ ಎಂಬ ಬಗ್ಗೆಯೂ ಚರ್ಚೆಯಾಗುತ್ತಿತ್ತು.

ಇದೀಗ ಈ ಎಲ್ಲಾ ಚರ್ಚೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೇ ಟ್ವಿಟ್ಟರ್ ಮೂಲಕವೇ ಉತ್ತರ ನೀಡಿದ್ದಾರೆ, ಮಾತ್ರವಲ್ಲ ಮಾಧ್ಯಮಗಳ ಮೂಲಕ  ಇಲಾಖೆಗಳಿಗೆ ಸಂಬಂಧಿಸಿದ ಹೇಳಿಕೆಗಳನ್ನೂ ನೀಡಿದ್ದಾರೆ.

ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ನಾನು ಆರೋಗ್ಯವಾಗಿದ್ದೇನೆ. ನನಗೆ ಏನೂ ಆಗಿಲ್ಲ. ನಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ, ಪ್ರಸ್ತುತ ದೇಶ ಮಾರಣಾಂತಿಕ ಕೊರೊನಾ ವೈರಸ್‌ ವಿರುದ್ದ ಹೋರಾಟ ನಡೆಸುತ್ತಿದೆ. ಗೃಹ ಸಚಿವನಾಗಿ ನಾನು ಮಾಡಬೇಕಾದ ಕಾರ್ಯಗಳನ್ನು ನಿರ್ವಹಿಸುತ್ತಿದ್ದೇನೆ. ಈ ಅಪಪ್ರಚಾರದ ಬಗ್ಗೆ ನನ್ನ ಗಮನಕ್ಕೆ ಬಂದರೂ ಸಹ ನಾನು ತಲೆಕೆಡಿಸಿಕೊಳ್ಳದ ಕಾರಣದಿಂದ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ ಎಂದು ತಿಳಿಸಿದ್ದಾರೆ. ಈಗ ಬಿಜೆಪಿಯ ಲಕ್ಷಾಂತರ ಕಾರ್ಯಕರ್ತರು ಹಾಗೂ ನನ್ನ ಹಿತೈಷಿಗಳು ಕಳೆದ ಎರಡು ದಿನಗಳಿಂದ ನನ್ನ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಹಾಗಾಗಿ ಈ ವಿಚಾರವಾಗಿ ನಾನೇ ಸ್ಪಷ್ಟನೆ ನೀಡುತ್ತಿದ್ದೇನೆ. ನನಗೆ ಯಾವುದೇ ಕಾಯಿಲೆ ಇಲ್ಲ. ನಾನು ಆರೋಗ್ಯವಾಗಿದ್ದೇನೆ ಎಂದಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

4 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

5 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

6 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

12 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

17 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago