Advertisement
ಸುದ್ದಿಗಳು

ನಾರಾಯಣ ಕೆ ಕುಂಬ್ರ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿ

Share

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕ ನಾರಾಯಣ ಕೆ ಕುಂಬ್ರ ಅವರು ತಮ್ಮ ಸಾಹಿತ್ಯ ಸೇವೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ‘ಮಾನವರು ಸಹೋದರರು ಸೌಹಾರ್ದ ವೇದಿಕೆ’ ಹಾಗೂ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕೊಡಮಾಡುವ ಸಾಹಿತ್ಯ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕ್ಟೋಬರ್ 5ರಂದು ಕುಂಬ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಸುದಾನ ಶಿಕ್ಷಣ ಸಂಸ್ಥೆಯ ಧರ್ಮಗುರು ರೆ.ಫಾ. ವಿಜಯ ಹಾರ್ವಿನ್, ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳ ಹಾಗೂ ಅಪರಾಧ ಪತ್ತೆ ದಳದ ರಾಜ್ಯಾಧ್ಯಕ್ಷ ಪ್ರಶಾಂತ್ ರೈ ಮರವಂಜ, ಯುವ ಉದ್ಯಮಿ ಸಂಶುದ್ದೀನ್ ಎ.ಆರ್, ಚಿಂತಕ ಜಗದೀಶ್ ಪಡ್ಪು, ಕವಯತ್ರಿ ಶಾಂತ ಕುಂಟಿನಿ, ಸೌಹಾರ್ದ ವೇದಿಕೆಯ ಅಧ್ಯಕ್ಷ ಅಬ್ದುಲ್ ಅಜೀಜ್ ಪುಣಚ, ಚಂದನ ಸಾಹಿತ್ಯ ವೇದಿಕೆ ಅಧ್ಯಕ್ಷ ಭೀಮರಾವ್ ವಾಷ್ಠರ್ ಮತ್ತಿತರರು ಉಪಸ್ಥಿತರಿದ್ದರು.

 

ನಾರಾಯಣ ಕುಂಬ್ರ ಅವರು ಹಲವಾರು ಬಾರಿ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ಕವಿಗೋಷ್ಟಿಯಲ್ಲಿ ಭಾಗವಹಿಸಿ ತಮ್ಮ ಕವನವನ್ನು ವಾಚಿಸಿರುತ್ತಾರೆ. ಪುತ್ತೂರಿನ ಕಡಲೂರಿನ ಲೇಖಕರು ಸಂಘಟನೆಯ ಕೋಶಾಧಿಕಾರಿಯಾಗಿ, ಪುತ್ತೂರಿನ ಸಿರಿಗನ್ನಡ ವೇದಿಕೆಯ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

3 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

10 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

11 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

18 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

19 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago