ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕ ನಾರಾಯಣ ಕೆ ಕುಂಬ್ರ ಅವರು ತಮ್ಮ ಸಾಹಿತ್ಯ ಸೇವೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ‘ಮಾನವರು ಸಹೋದರರು ಸೌಹಾರ್ದ ವೇದಿಕೆ’ ಹಾಗೂ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕೊಡಮಾಡುವ ಸಾಹಿತ್ಯ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕ್ಟೋಬರ್ 5ರಂದು ಕುಂಬ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಸುದಾನ ಶಿಕ್ಷಣ ಸಂಸ್ಥೆಯ ಧರ್ಮಗುರು ರೆ.ಫಾ. ವಿಜಯ ಹಾರ್ವಿನ್, ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳ ಹಾಗೂ ಅಪರಾಧ ಪತ್ತೆ ದಳದ ರಾಜ್ಯಾಧ್ಯಕ್ಷ ಪ್ರಶಾಂತ್ ರೈ ಮರವಂಜ, ಯುವ ಉದ್ಯಮಿ ಸಂಶುದ್ದೀನ್ ಎ.ಆರ್, ಚಿಂತಕ ಜಗದೀಶ್ ಪಡ್ಪು, ಕವಯತ್ರಿ ಶಾಂತ ಕುಂಟಿನಿ, ಸೌಹಾರ್ದ ವೇದಿಕೆಯ ಅಧ್ಯಕ್ಷ ಅಬ್ದುಲ್ ಅಜೀಜ್ ಪುಣಚ, ಚಂದನ ಸಾಹಿತ್ಯ ವೇದಿಕೆ ಅಧ್ಯಕ್ಷ ಭೀಮರಾವ್ ವಾಷ್ಠರ್ ಮತ್ತಿತರರು ಉಪಸ್ಥಿತರಿದ್ದರು.
ನಾರಾಯಣ ಕುಂಬ್ರ ಅವರು ಹಲವಾರು ಬಾರಿ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ಕವಿಗೋಷ್ಟಿಯಲ್ಲಿ ಭಾಗವಹಿಸಿ ತಮ್ಮ ಕವನವನ್ನು ವಾಚಿಸಿರುತ್ತಾರೆ. ಪುತ್ತೂರಿನ ಕಡಲೂರಿನ ಲೇಖಕರು ಸಂಘಟನೆಯ ಕೋಶಾಧಿಕಾರಿಯಾಗಿ, ಪುತ್ತೂರಿನ ಸಿರಿಗನ್ನಡ ವೇದಿಕೆಯ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…