ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕ ನಾರಾಯಣ ಕೆ ಕುಂಬ್ರ ಅವರು ತಮ್ಮ ಸಾಹಿತ್ಯ ಸೇವೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ‘ಮಾನವರು ಸಹೋದರರು ಸೌಹಾರ್ದ ವೇದಿಕೆ’ ಹಾಗೂ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕೊಡಮಾಡುವ ಸಾಹಿತ್ಯ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕ್ಟೋಬರ್ 5ರಂದು ಕುಂಬ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಸುದಾನ ಶಿಕ್ಷಣ ಸಂಸ್ಥೆಯ ಧರ್ಮಗುರು ರೆ.ಫಾ. ವಿಜಯ ಹಾರ್ವಿನ್, ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳ ಹಾಗೂ ಅಪರಾಧ ಪತ್ತೆ ದಳದ ರಾಜ್ಯಾಧ್ಯಕ್ಷ ಪ್ರಶಾಂತ್ ರೈ ಮರವಂಜ, ಯುವ ಉದ್ಯಮಿ ಸಂಶುದ್ದೀನ್ ಎ.ಆರ್, ಚಿಂತಕ ಜಗದೀಶ್ ಪಡ್ಪು, ಕವಯತ್ರಿ ಶಾಂತ ಕುಂಟಿನಿ, ಸೌಹಾರ್ದ ವೇದಿಕೆಯ ಅಧ್ಯಕ್ಷ ಅಬ್ದುಲ್ ಅಜೀಜ್ ಪುಣಚ, ಚಂದನ ಸಾಹಿತ್ಯ ವೇದಿಕೆ ಅಧ್ಯಕ್ಷ ಭೀಮರಾವ್ ವಾಷ್ಠರ್ ಮತ್ತಿತರರು ಉಪಸ್ಥಿತರಿದ್ದರು.
ನಾರಾಯಣ ಕುಂಬ್ರ ಅವರು ಹಲವಾರು ಬಾರಿ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ಕವಿಗೋಷ್ಟಿಯಲ್ಲಿ ಭಾಗವಹಿಸಿ ತಮ್ಮ ಕವನವನ್ನು ವಾಚಿಸಿರುತ್ತಾರೆ. ಪುತ್ತೂರಿನ ಕಡಲೂರಿನ ಲೇಖಕರು ಸಂಘಟನೆಯ ಕೋಶಾಧಿಕಾರಿಯಾಗಿ, ಪುತ್ತೂರಿನ ಸಿರಿಗನ್ನಡ ವೇದಿಕೆಯ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…