ಪೆರ್ಲ: ಕೇರಳದ ನೆರೆ ಸಂತ್ರಸ್ತರಿಗೆ ನಿತ್ಯೋಪಯೋಗಿ ವಸ್ತುಗಳನ್ನು ಒದಗಿಸುವ ಉದ್ದೇಶದೊಂದಿಗೆ ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ಪೆರ್ಲ ಪೇಟೆಯಲ್ಲಿ ನೆರೆ ಪರಿಹಾರ ನಿಧಿ ಸಂಗ್ರಹಿಸಲಾಯಿತು.
ಎನ್ನೆಸ್ಸೆಸ್ ಯೋಜನಾಧಿಕಾರಿ ಸುರೇಶ್ ಕೆ ಎಂ. ಮಾತನಾಡಿ, ನೆರೆಯಿಂದಾಗಿ ಯಾವುದೇ ಸಮಸ್ಯೆ ಎದುರಿಸದೇ, ಬೆಚ್ಚಗಿನ ಮನೆಯಲ್ಲಿ ವಾಸಿಸುತ್ತ, 3 ಹೊತ್ತು ಹೊಟ್ಟೆ ತುಂಬಾ ಆಹಾರ ಸೇವಿಸುವ, ಬಣ್ಣ ಬಣ್ಣದ ಬಟ್ಟೆ ಧರಿಸುವ, ನಾವು ಪುಣ್ಯವಂತರು. ಆದರೆ ಭೀಕಾರ ಮಳೆಯಿಂದಾಗಿ ಉಂಟಾದ ನೆರೆಯಿಂದಾಗಿ, ತಮ್ಮದನ್ನೆಲ್ಲ ಕಳೆದುಕೊಂಡ, ಮನೆಯಿಲ್ಲದೇ ನಿರಾಶ್ರಿತರ ಕೇಂದ್ರದಲ್ಲಿ ವಾಸಿಸುವ, ಒಂದು ಹೊತ್ತಿನ ಅನ್ನಕ್ಕೆ ಪರದಾಡುವ, ಉಡಲು ಬಟ್ಟೆ ಇಲ್ಲದೆ, ಉಟ್ಟ ಬಟ್ಟೆಯನ್ನೇ ಉಡುವಾ ನೆರೆ ಸಂತ್ರಸ್ತರ ನೋವಿಗೆ ಸ್ಪಂದಿಸಿ, ನಮ್ಮಿಂದಾದ ಸಹಾಯ ಮಾಡುವುದು ಪ್ರತಿಯೊಬ್ಬನ ಕರ್ತವ್ಯ. ಇಂದು ನಾವು ನಿರಾಶ್ರಿತರಿಗೆ ಆಸರೆ ಆದಲ್ಲಿ, ಮುಂದೊಂದು ದಿನ ನಮಗೆ ಆ ಪರಿಸ್ಥಿತಿ ಎದುರಾಗಿಸಬೇಕಾಗಿ ಬಂದಲ್ಲಿ ಇನ್ನೊಬ್ಬ ನಮಗೆ ಆಸರೆ ಆಗುತ್ತಾನೆ ಎನ್ನುವುದಲ್ಲಿ ಸಂಶಯವಿಲ್ಲ ಎಂದರು.
ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ವಿಭಾಗದ ಉಪನ್ಯಾಸಕ ಅಜಿತ್, ಶ್ರೀನಿಧಿ, ಎನ್ನೆಸ್ಸೆಸ್ ಕಾರ್ಯದರ್ಶಿಗಳಾದ ಜಗತ್, ಅಭಿಲಾಶ್, ಅಜಿತ್, ಅಂಜನಾ, ಕಾವ್ಯ ಹಾಗೂ ಎನ್ನೆಸ್ಸೆಸ್ ಸ್ವಯಂ ಸೇವಕರು ಉಪಸ್ಥಿತರಿದ್ದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…