ಪೆರ್ಲ: ಕೇರಳದ ನೆರೆ ಸಂತ್ರಸ್ತರಿಗೆ ನಿತ್ಯೋಪಯೋಗಿ ವಸ್ತುಗಳನ್ನು ಒದಗಿಸುವ ಉದ್ದೇಶದೊಂದಿಗೆ ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ಪೆರ್ಲ ಪೇಟೆಯಲ್ಲಿ ನೆರೆ ಪರಿಹಾರ ನಿಧಿ ಸಂಗ್ರಹಿಸಲಾಯಿತು.
ಎನ್ನೆಸ್ಸೆಸ್ ಯೋಜನಾಧಿಕಾರಿ ಸುರೇಶ್ ಕೆ ಎಂ. ಮಾತನಾಡಿ, ನೆರೆಯಿಂದಾಗಿ ಯಾವುದೇ ಸಮಸ್ಯೆ ಎದುರಿಸದೇ, ಬೆಚ್ಚಗಿನ ಮನೆಯಲ್ಲಿ ವಾಸಿಸುತ್ತ, 3 ಹೊತ್ತು ಹೊಟ್ಟೆ ತುಂಬಾ ಆಹಾರ ಸೇವಿಸುವ, ಬಣ್ಣ ಬಣ್ಣದ ಬಟ್ಟೆ ಧರಿಸುವ, ನಾವು ಪುಣ್ಯವಂತರು. ಆದರೆ ಭೀಕಾರ ಮಳೆಯಿಂದಾಗಿ ಉಂಟಾದ ನೆರೆಯಿಂದಾಗಿ, ತಮ್ಮದನ್ನೆಲ್ಲ ಕಳೆದುಕೊಂಡ, ಮನೆಯಿಲ್ಲದೇ ನಿರಾಶ್ರಿತರ ಕೇಂದ್ರದಲ್ಲಿ ವಾಸಿಸುವ, ಒಂದು ಹೊತ್ತಿನ ಅನ್ನಕ್ಕೆ ಪರದಾಡುವ, ಉಡಲು ಬಟ್ಟೆ ಇಲ್ಲದೆ, ಉಟ್ಟ ಬಟ್ಟೆಯನ್ನೇ ಉಡುವಾ ನೆರೆ ಸಂತ್ರಸ್ತರ ನೋವಿಗೆ ಸ್ಪಂದಿಸಿ, ನಮ್ಮಿಂದಾದ ಸಹಾಯ ಮಾಡುವುದು ಪ್ರತಿಯೊಬ್ಬನ ಕರ್ತವ್ಯ. ಇಂದು ನಾವು ನಿರಾಶ್ರಿತರಿಗೆ ಆಸರೆ ಆದಲ್ಲಿ, ಮುಂದೊಂದು ದಿನ ನಮಗೆ ಆ ಪರಿಸ್ಥಿತಿ ಎದುರಾಗಿಸಬೇಕಾಗಿ ಬಂದಲ್ಲಿ ಇನ್ನೊಬ್ಬ ನಮಗೆ ಆಸರೆ ಆಗುತ್ತಾನೆ ಎನ್ನುವುದಲ್ಲಿ ಸಂಶಯವಿಲ್ಲ ಎಂದರು.
ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ವಿಭಾಗದ ಉಪನ್ಯಾಸಕ ಅಜಿತ್, ಶ್ರೀನಿಧಿ, ಎನ್ನೆಸ್ಸೆಸ್ ಕಾರ್ಯದರ್ಶಿಗಳಾದ ಜಗತ್, ಅಭಿಲಾಶ್, ಅಜಿತ್, ಅಂಜನಾ, ಕಾವ್ಯ ಹಾಗೂ ಎನ್ನೆಸ್ಸೆಸ್ ಸ್ವಯಂ ಸೇವಕರು ಉಪಸ್ಥಿತರಿದ್ದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…