Advertisement
ಸುದ್ದಿಗಳು

ನಾಲ್ವರು ಹಿರಿಯ ಶಿಕ್ಷಕರಿಗೆ ‘ಮಲೆನಾಡ ಸಿರಿ’ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ: ಸೆ.9ರಂದು ಪ್ರಶಸ್ತಿ ಪ್ರದಾನ

Share

ಸುಳ್ಯ: ಸುಳ್ಯ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಸಹಯೋಗದೊಂದಿಗೆ ನೀಡುವ ‘ಮಲೆನಾಡ ಸಿರಿ’ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ತಾಲೂಕಿನ ನಾಲ್ವರು ಶಿಕ್ಷಕರು ಆಯ್ಕೆಯಾಗಿದ್ದಾರೆ.

Advertisement
Advertisement

ಮಕ್ಕಳಿಗೆ “ಗಣಿತ ಮನೆ ಪಾಠ’ ಹೇಳಿಕೊಟ್ಟು ಆನೇಕ ವಿದ್ಯಾರ್ಥಿಗಳಿಗೆ ದಾರಿದೀಪವಾದ ಕರ್ನಾಟಕ ಅಭಿವೃದ್ಧಿ ನಿಗಮದ ನಿವೃತ್ತ ಕಛೇರಿ ಅಧೀಕ್ಷಕರಾದ ದಯಾನಂದ ಉಚ್ಛಿಲ, ಸುಳ್ಯ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿಯಾಗಿ ಉತ್ತಮ ಕಾರ್ಯನಿರ್ವಹಿಸಿ ರಾಜ್ಯಮಟ್ಟದಲ್ಲೇ ಉತ್ತಮ ಅಧಿಕಾರಿ ಎಂದು ಗುರುತಿಸಲ್ಪಟ್ಟು ಉತ್ತಮ ಸಮನ್ವಯಾಧಿಕಾರಿ ಎಂಬ ಪ್ರಶಸ್ತಿಗೆ ಭಾಜನರಾದ ಚಂದ್ರಶೇಖರ್ ಪೇರಾಲ್, ಶೈಕ್ಷಣಿಕ ಕರ್ತವ್ಯದ ಜೊತೆಗೆ ಶಶಾಂಕ ಚಾರಿಟೇಬಲ್ ಟ್ರಸ್ಟ್ ಅನ್ನು ಸ್ಥಾಪಿಸಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಪ್ರತೀ ವರ್ಷ ನೆರವು ನೀಡುತ್ತಿರುವ ಬಳ್ಪ ಬಾನಡ್ಕ ಶಾಲೆಯ ಶಿಕ್ಷಕಿ ಜಾನಕಿ. ಕೆ, ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುವುದರೊಂದಿಗೆ ಸುಳ್ಯದಲ್ಲಿ ನಡೆಯುವ ರಾಷ್ಟ್ರೀಯ ಹಬ್ಬಗಳ ಆಚರಣೆ ಮತ್ತು ಕನ್ನಡ ರಾಜ್ಯೋತ್ಸವ, ಗಣರಾಜ್ಯೋತ್ಸವ ಪಥ ಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಿರುವ ಸುಳ್ಯ ಜ್ಯೂನಿಯರ್ ಕಾಲೇಜಿನ ನಟರಾಜ್ ಮಾಸ್ತರ್ ರವರು ಮಲೆನಾಡ ಸಿರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Advertisement

 

ಸೆ.9ರಂದು ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ತಹಶೀಲ್ದಾರ್ ಹಾಗೂ ದಂಡಾಧಿಕಾರಿ ಕುಂಞಿ ಅಹಮ್ಮದ್ ರವರು ‘ಮಲೆನಾಡ ಸಿರಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ತಾಲೂಕು ಶಿಕ್ಷಣಾಧಿಕಾರಿ ಎಸ್.ಪಿ. ಮಹದೇವ್, ತಾಲೂಕು ವೈದ್ಯಾಧಿಕಾರಿ ಡಾ. ಬಾನುಮತಿ, ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಎನ್.ಎ.ಜ್ಞಾನೇಶ್, ಹಿರಿಯ ಉದ್ಯಮಿ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್ಸ್, ಜನತಾ ಗ್ರೂಪ್ಸ್ ನ ಕೆ.ಎಂ. ಮಸ್ತಫ, ಹಮೀದ್ ಜನತಾ, ಮಜೀದ್ ಜನತಾ, ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಅಧ್ಯಕ್ಷರಾದ ಉಮ್ಮರ್ ಬೀಜದಕಟ್ಟೆ, ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ಭಾನುಪ್ರಕಾಶ್ ಭಾಗವಹಿಸಲಿದ್ದಾರೆ ಎಂದು ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಿಯಾಝ್ ಕಟ್ಟೆಕ್ಕಾರ್ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

1 hour ago

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…

2 hours ago

ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…

3 hours ago

ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!

ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…

3 hours ago

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…

3 hours ago

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

7 hours ago