Advertisement
ರಾಷ್ಟ್ರೀಯ

ನಾಳೆಯೇ ಲೋಕಸಭಾ ಚುನಾವಣಾ ಫಲಿತಾಂಶ : ವಿವಿ ಪ್ಯಾಟ್ ಚೀಟಿ ಎಣಿಕೆಯ ಬೇಡಿಕೆ ತಿರಸ್ಕಾರ

Share
ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ ನಾಳೆಯೇ ಪ್ರಕಟವಾಗಲಿದೆ. ಕೊನೆಯ ಕ್ಷಣದಲ್ಲಿ ರಾಜಕೀಯ ಪಕ್ಷಗಳ ನಾಯಕರು ಫಲಿತಾಂಶಕ್ಕೆ ಮುನ್ನವೇ ವಿವಿಪ್ಯಾಟ್ ಚೀಟಿಯನ್ನು  ಎಣಿಕೆ ಮಾಡಿದ ಬಳಿಕವೇ ಫಲಿತಾಂಶ ಘೋಷಣೆ ಮಾಡಬೇಕು ಎಂಬ ಬೇಡಿಕೆಯನ್ನು ಚುನಾವಣಾ ಆಯೋಗವು  ತಿರಸ್ಕರಿಸಿದೆ.
ವಿದ್ಯುನ್ಮಾನ ಮತಯಂತ್ರ ಮತ್ತು  ಮತದಾನ ಖಾತ್ರಿಯ ಬಗ್ಗೆ ಯಂತ್ರದ ಚೀಟಿಗಳನ್ನು ತಾಳೆ ಮಾಡಬೇಕೆಂದು ವಿಪಕ್ಷಗಳು ಚುನಾವಣಾ ಆಯೋಗಕ್ಕೆ ಮಂಗಳವಾರ ಮನವಿ ಮಾಡಿದ್ದವು. ಆದರೆ ಚುನಾವಣಾ ಆಯೋಗವು  ಈ ಬೇಡಿಕೆಯನ್ನು ತಿರಸ್ಕರಿಸಿದ್ದು ಮತ ಎಣಿಕೆಯ ಕಡೇ ಕ್ಷಣದ ತಯಾರಿ ನಡೆದಿರುವಾಗ  ಯಾವ ಬದಲಾವಣೆಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.
ಆದರೆ ಏನಾದರೂ ವ್ಯತ್ಯಾಸಗಳು ಕಂಡು ಬಂದರೆ ಅಂತಹ ಲೋಕಸಭೆ ಕ್ಷೇತ್ರದ ಎಲ್ಲಾ ಮತಗಳನ್ನು ಮತ್ತೊಮ್ಮೆ ಪರಿಶೀಲನೆ ಮಾಡಬೇಕು, ಚೀಟಿ ಎಣಿಕೆ ಮಾಡಬೇಕು ಎಂದು  ವಿವಿಧ ಪಕ್ಷಗಳು ಒತ್ತಾಯ ಮಾಡಿವೆ.
ಸುಪ್ರೀಂ ಕೋರ್ಟ್ ಕೂಡಾ ವಿವಿಪ್ಯಾಟ್ ಗಳ  ತಾಳೆಯನ್ನು ಗಮನಿಸಿ ಫಲಿತಾಶ ನೀಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿದೆ, ಅಲ್ಲದೆ  ಜನರ ಆಯ್ಕೆಯನ್ನು ಅನುಮಾನಿಸುವುದಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಂಜೆ 5 ಗಂಟೆ ಒಳಗೆ ಫಲಿತಾಂಶದ ನಿರೀಕ್ಷೆ :
ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳ ಫಲಿತಾಂಶ ಸಂಜೆಯ ವೇಳೆಗೆ ಲಭ್ಯವಾಗಲಿದೆ. ಪ್ರತೀ  ಲೋಕಸಭಾ ಕ್ಷೇತ್ರದ ತಲಾ 5 ಮತಗಟ್ಟೆಗಳ ವಿವಿಪ್ಯಾಟ್ ಚೀಟಿಗಳನ್ನು ಎಣಿಕೆ ಮಾಡಿ, ಇವಿಎಂ ಫಲಿತಾಂಶದ ಜೊತೆ ತಾಳೆ ಮಾಡಬೇಕಾಗುತ್ತದೆ. ಇದರಿಂದಾಗಿ ಫಲಿತಾಂಶ ಪ್ರಕಟವಾಗಲು ಸುಮಾರು 4 ಗಂಟೆ ತಡವಾಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಇದೀಗ ಈ ಬಗ್ಗೆ ಗೊಂದಲ ನಿವಾರಣೆಯಾಗಿದ್ದು ಸಂಜೆ 3 ಗಂಟೆ ಒಳಗಡೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

2 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

4 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

11 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

13 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

19 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago