Advertisement
ರಾಷ್ಟ್ರೀಯ

ನಾಳೆಯೇ ಲೋಕಸಭಾ ಚುನಾವಣಾ ಫಲಿತಾಂಶ : ವಿವಿ ಪ್ಯಾಟ್ ಚೀಟಿ ಎಣಿಕೆಯ ಬೇಡಿಕೆ ತಿರಸ್ಕಾರ

Share
ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ ನಾಳೆಯೇ ಪ್ರಕಟವಾಗಲಿದೆ. ಕೊನೆಯ ಕ್ಷಣದಲ್ಲಿ ರಾಜಕೀಯ ಪಕ್ಷಗಳ ನಾಯಕರು ಫಲಿತಾಂಶಕ್ಕೆ ಮುನ್ನವೇ ವಿವಿಪ್ಯಾಟ್ ಚೀಟಿಯನ್ನು  ಎಣಿಕೆ ಮಾಡಿದ ಬಳಿಕವೇ ಫಲಿತಾಂಶ ಘೋಷಣೆ ಮಾಡಬೇಕು ಎಂಬ ಬೇಡಿಕೆಯನ್ನು ಚುನಾವಣಾ ಆಯೋಗವು  ತಿರಸ್ಕರಿಸಿದೆ.
ವಿದ್ಯುನ್ಮಾನ ಮತಯಂತ್ರ ಮತ್ತು  ಮತದಾನ ಖಾತ್ರಿಯ ಬಗ್ಗೆ ಯಂತ್ರದ ಚೀಟಿಗಳನ್ನು ತಾಳೆ ಮಾಡಬೇಕೆಂದು ವಿಪಕ್ಷಗಳು ಚುನಾವಣಾ ಆಯೋಗಕ್ಕೆ ಮಂಗಳವಾರ ಮನವಿ ಮಾಡಿದ್ದವು. ಆದರೆ ಚುನಾವಣಾ ಆಯೋಗವು  ಈ ಬೇಡಿಕೆಯನ್ನು ತಿರಸ್ಕರಿಸಿದ್ದು ಮತ ಎಣಿಕೆಯ ಕಡೇ ಕ್ಷಣದ ತಯಾರಿ ನಡೆದಿರುವಾಗ  ಯಾವ ಬದಲಾವಣೆಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.
ಆದರೆ ಏನಾದರೂ ವ್ಯತ್ಯಾಸಗಳು ಕಂಡು ಬಂದರೆ ಅಂತಹ ಲೋಕಸಭೆ ಕ್ಷೇತ್ರದ ಎಲ್ಲಾ ಮತಗಳನ್ನು ಮತ್ತೊಮ್ಮೆ ಪರಿಶೀಲನೆ ಮಾಡಬೇಕು, ಚೀಟಿ ಎಣಿಕೆ ಮಾಡಬೇಕು ಎಂದು  ವಿವಿಧ ಪಕ್ಷಗಳು ಒತ್ತಾಯ ಮಾಡಿವೆ.
ಸುಪ್ರೀಂ ಕೋರ್ಟ್ ಕೂಡಾ ವಿವಿಪ್ಯಾಟ್ ಗಳ  ತಾಳೆಯನ್ನು ಗಮನಿಸಿ ಫಲಿತಾಶ ನೀಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿದೆ, ಅಲ್ಲದೆ  ಜನರ ಆಯ್ಕೆಯನ್ನು ಅನುಮಾನಿಸುವುದಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಂಜೆ 5 ಗಂಟೆ ಒಳಗೆ ಫಲಿತಾಂಶದ ನಿರೀಕ್ಷೆ :
ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳ ಫಲಿತಾಂಶ ಸಂಜೆಯ ವೇಳೆಗೆ ಲಭ್ಯವಾಗಲಿದೆ. ಪ್ರತೀ  ಲೋಕಸಭಾ ಕ್ಷೇತ್ರದ ತಲಾ 5 ಮತಗಟ್ಟೆಗಳ ವಿವಿಪ್ಯಾಟ್ ಚೀಟಿಗಳನ್ನು ಎಣಿಕೆ ಮಾಡಿ, ಇವಿಎಂ ಫಲಿತಾಂಶದ ಜೊತೆ ತಾಳೆ ಮಾಡಬೇಕಾಗುತ್ತದೆ. ಇದರಿಂದಾಗಿ ಫಲಿತಾಂಶ ಪ್ರಕಟವಾಗಲು ಸುಮಾರು 4 ಗಂಟೆ ತಡವಾಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಇದೀಗ ಈ ಬಗ್ಗೆ ಗೊಂದಲ ನಿವಾರಣೆಯಾಗಿದ್ದು ಸಂಜೆ 3 ಗಂಟೆ ಒಳಗಡೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago