Advertisement
ರಾಷ್ಟ್ರೀಯ

ನಾಳೆಯೇ ಲೋಕಸಭಾ ಚುನಾವಣಾ ಫಲಿತಾಂಶ : ವಿವಿ ಪ್ಯಾಟ್ ಚೀಟಿ ಎಣಿಕೆಯ ಬೇಡಿಕೆ ತಿರಸ್ಕಾರ

Share
ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ ನಾಳೆಯೇ ಪ್ರಕಟವಾಗಲಿದೆ. ಕೊನೆಯ ಕ್ಷಣದಲ್ಲಿ ರಾಜಕೀಯ ಪಕ್ಷಗಳ ನಾಯಕರು ಫಲಿತಾಂಶಕ್ಕೆ ಮುನ್ನವೇ ವಿವಿಪ್ಯಾಟ್ ಚೀಟಿಯನ್ನು  ಎಣಿಕೆ ಮಾಡಿದ ಬಳಿಕವೇ ಫಲಿತಾಂಶ ಘೋಷಣೆ ಮಾಡಬೇಕು ಎಂಬ ಬೇಡಿಕೆಯನ್ನು ಚುನಾವಣಾ ಆಯೋಗವು  ತಿರಸ್ಕರಿಸಿದೆ.
ವಿದ್ಯುನ್ಮಾನ ಮತಯಂತ್ರ ಮತ್ತು  ಮತದಾನ ಖಾತ್ರಿಯ ಬಗ್ಗೆ ಯಂತ್ರದ ಚೀಟಿಗಳನ್ನು ತಾಳೆ ಮಾಡಬೇಕೆಂದು ವಿಪಕ್ಷಗಳು ಚುನಾವಣಾ ಆಯೋಗಕ್ಕೆ ಮಂಗಳವಾರ ಮನವಿ ಮಾಡಿದ್ದವು. ಆದರೆ ಚುನಾವಣಾ ಆಯೋಗವು  ಈ ಬೇಡಿಕೆಯನ್ನು ತಿರಸ್ಕರಿಸಿದ್ದು ಮತ ಎಣಿಕೆಯ ಕಡೇ ಕ್ಷಣದ ತಯಾರಿ ನಡೆದಿರುವಾಗ  ಯಾವ ಬದಲಾವಣೆಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.
ಆದರೆ ಏನಾದರೂ ವ್ಯತ್ಯಾಸಗಳು ಕಂಡು ಬಂದರೆ ಅಂತಹ ಲೋಕಸಭೆ ಕ್ಷೇತ್ರದ ಎಲ್ಲಾ ಮತಗಳನ್ನು ಮತ್ತೊಮ್ಮೆ ಪರಿಶೀಲನೆ ಮಾಡಬೇಕು, ಚೀಟಿ ಎಣಿಕೆ ಮಾಡಬೇಕು ಎಂದು  ವಿವಿಧ ಪಕ್ಷಗಳು ಒತ್ತಾಯ ಮಾಡಿವೆ.
ಸುಪ್ರೀಂ ಕೋರ್ಟ್ ಕೂಡಾ ವಿವಿಪ್ಯಾಟ್ ಗಳ  ತಾಳೆಯನ್ನು ಗಮನಿಸಿ ಫಲಿತಾಶ ನೀಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿದೆ, ಅಲ್ಲದೆ  ಜನರ ಆಯ್ಕೆಯನ್ನು ಅನುಮಾನಿಸುವುದಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಂಜೆ 5 ಗಂಟೆ ಒಳಗೆ ಫಲಿತಾಂಶದ ನಿರೀಕ್ಷೆ :
ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳ ಫಲಿತಾಂಶ ಸಂಜೆಯ ವೇಳೆಗೆ ಲಭ್ಯವಾಗಲಿದೆ. ಪ್ರತೀ  ಲೋಕಸಭಾ ಕ್ಷೇತ್ರದ ತಲಾ 5 ಮತಗಟ್ಟೆಗಳ ವಿವಿಪ್ಯಾಟ್ ಚೀಟಿಗಳನ್ನು ಎಣಿಕೆ ಮಾಡಿ, ಇವಿಎಂ ಫಲಿತಾಂಶದ ಜೊತೆ ತಾಳೆ ಮಾಡಬೇಕಾಗುತ್ತದೆ. ಇದರಿಂದಾಗಿ ಫಲಿತಾಂಶ ಪ್ರಕಟವಾಗಲು ಸುಮಾರು 4 ಗಂಟೆ ತಡವಾಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಇದೀಗ ಈ ಬಗ್ಗೆ ಗೊಂದಲ ನಿವಾರಣೆಯಾಗಿದ್ದು ಸಂಜೆ 3 ಗಂಟೆ ಒಳಗಡೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago