ಸುಳ್ಯ: ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ನಾಳೆಯ ವಾತಾವರಣ ಸುಳ್ಯ ಪ್ರದೇಶದಲ್ಲಿ ಹೇಗಿರಬಹುದು ಎಂಬ ನಿರೀಕ್ಷೆ, ಕಾತರ ಎಲ್ಲರಲ್ಲೂ ಇದೆ.
ಹವಾಮಾನ ಇಲಾಖೆ ಆಗಾಗ ವೆದರ್ ರಿಪೋರ್ಟ್ ನೀಡುತ್ತದೆ. ಭಾರತದ ಹವಾಮಾನ ತಿಳಿಸುವ ಉಪಗ್ರಹ ಚಿತ್ರವನ್ನು ಆಗಾಗ ಅಪ್ ಲೋಡ್ ಕೂಡಾ ಮಾಡುತ್ತಾರೆ. ಆದರೆ ಇದನ್ನು ಅರ್ಥ ಮಾಡಿಕೊಳ್ಳಲು ನಮಗೆ ಕಷ್ಟವಾಗುತ್ತದೆ. ಇಂತಹ ಸೌಲಭ್ಯವನ್ನು ಸರಳವಾಗಿ ಗಮನಿಸಿ ನಮಗೆ ತಿಳಿಸುತ್ತಾರೆ, ಕೃಷಿಕ ಸಾಯಿಶೇಖರ್ ಕರಿಕಳ. ಅನೇಕರು ನಾಳೆಯ ವೆದರ್ ಹೇಗಿದೆ ಎಂದು ಸಾಯಿಶೇಖರ್ ಅವರನ್ನು ಕೇಳಿದ್ದು ಇದೆ. ಅದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡುತ್ತಿರುವ ಸಾಯಿಶೇಖರ್ ಈಗ “ಸುಳ್ಯನ್ಯೂಸ್.ಕಾಂ” ಗೆ ಮಾಹಿತಿ ನೀಡಿದ್ದಾರೆ. ನಾಳೆಯ ವೆದರ್ ಹೇಗಿದೆ ಎಂದು ಕೇಳಿದ್ದಕ್ಕೆ ಅವರು ಸ್ಯಾಟಲೈಟ್ ಚಿತ್ರ ನೋಡಿ ಹೀಗೆ ಹೇಳಿದ್ದಾರೆ, ಕೆಲವೊಮ್ಮೆ ವಾತಾವರಣ ತಕ್ಷಣದ ಏರುಪೇರಿನಿಂದ ವ್ಯತ್ಯಾಸ ಇರಬಹುದು ಎಂದು ಅವರು ಹೇಳುತ್ತಾ,
ನಾಳೆ ಮಡಿಕೇರಿ ಭಾಗದಲ್ಲಿ ಉತ್ತಮ ಮಳೆ ಸಾಧ್ಯತೆ ಇದೆ. ಆಗುಂಬೆ ಸಾಧಾರಣ ಮಳೆ ಸಾಧ್ಯತೆ ಇದೆ. ಹಾಗಾಗಿ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಮೋಡ ಆಥವಾ ತುಂತುರು ಮಳೆ ಸಾಧ್ಯತೆ ಇದೆ. ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು ಎಂದು ಅವರು ಹೇಳಿದ್ದಾರೆ.
ಸಾಯಿಶೇಖರ್ , ಕರಿಕಳ
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
View Comments
Weather report hege noduvudu
ನಾವೆಲ್ಲರೂ ಮಳೆಯ ನಿರೀಕ್ಷೆಯಲ್ಲಿ ಇದ್ದೇವೆ.