Advertisement
ಸುದ್ದಿಗಳು

ನಾಳೆ ನಮ್ಮೂರಲ್ಲಿ ಮಳೆ ಇರಬಹುದೇ ?

Share

ಸುಳ್ಯ: ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ನಾಳೆಯ ವಾತಾವರಣ ಸುಳ್ಯ ಪ್ರದೇಶದಲ್ಲಿ ಹೇಗಿರಬಹುದು ಎಂಬ ನಿರೀಕ್ಷೆ, ಕಾತರ ಎಲ್ಲರಲ್ಲೂ ಇದೆ.

Advertisement

ಹವಾಮಾನ ಇಲಾಖೆ ಆಗಾಗ ವೆದರ್ ರಿಪೋರ್ಟ್ ನೀಡುತ್ತದೆ. ಭಾರತದ ಹವಾಮಾನ ತಿಳಿಸುವ ಉಪಗ್ರಹ ಚಿತ್ರವನ್ನು ಆಗಾಗ ಅಪ್ ಲೋಡ್ ಕೂಡಾ ಮಾಡುತ್ತಾರೆ. ಆದರೆ ಇದನ್ನು ಅರ್ಥ ಮಾಡಿಕೊಳ್ಳಲು ನಮಗೆ ಕಷ್ಟವಾಗುತ್ತದೆ. ಇಂತಹ ಸೌಲಭ್ಯವನ್ನು ಸರಳವಾಗಿ ಗಮನಿಸಿ ನಮಗೆ ತಿಳಿಸುತ್ತಾರೆ, ಕೃಷಿಕ ಸಾಯಿಶೇಖರ್ ಕರಿಕಳ. ಅನೇಕರು ನಾಳೆಯ ವೆದರ್ ಹೇಗಿದೆ ಎಂದು ಸಾಯಿಶೇಖರ್ ಅವರನ್ನು ಕೇಳಿದ್ದು ಇದೆ. ಅದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡುತ್ತಿರುವ ಸಾಯಿಶೇಖರ್ ಈಗ “ಸುಳ್ಯನ್ಯೂಸ್.ಕಾಂ” ಗೆ ಮಾಹಿತಿ ನೀಡಿದ್ದಾರೆ. ನಾಳೆಯ ವೆದರ್ ಹೇಗಿದೆ ಎಂದು ಕೇಳಿದ್ದಕ್ಕೆ ಅವರು ಸ್ಯಾಟಲೈಟ್ ಚಿತ್ರ ನೋಡಿ ಹೀಗೆ ಹೇಳಿದ್ದಾರೆ, ಕೆಲವೊಮ್ಮೆ ವಾತಾವರಣ ತಕ್ಷಣದ ಏರುಪೇರಿನಿಂದ ವ್ಯತ್ಯಾಸ ಇರಬಹುದು ಎಂದು ಅವರು ಹೇಳುತ್ತಾ,

ನಾಳೆ ಮಡಿಕೇರಿ ಭಾಗದಲ್ಲಿ ಉತ್ತಮ ಮಳೆ ಸಾಧ್ಯತೆ ಇದೆ. ಆಗುಂಬೆ ಸಾಧಾರಣ ಮಳೆ ಸಾಧ್ಯತೆ ಇದೆ. ಹಾಗಾಗಿ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಮೋಡ ಆಥವಾ ತುಂತುರು ಮಳೆ ಸಾಧ್ಯತೆ ಇದೆ. ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು ಎಂದು ಅವರು ಹೇಳಿದ್ದಾರೆ.

ಸಾಯಿಶೇಖರ್ , ಕರಿಕಳ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

44 minutes ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

60 minutes ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

1 hour ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

13 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago