ಸುಳ್ಯ: ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ನಾಳೆಯ ವಾತಾವರಣ ಸುಳ್ಯ ಪ್ರದೇಶದಲ್ಲಿ ಹೇಗಿರಬಹುದು ಎಂಬ ನಿರೀಕ್ಷೆ, ಕಾತರ ಎಲ್ಲರಲ್ಲೂ ಇದೆ.
ಹವಾಮಾನ ಇಲಾಖೆ ಆಗಾಗ ವೆದರ್ ರಿಪೋರ್ಟ್ ನೀಡುತ್ತದೆ. ಭಾರತದ ಹವಾಮಾನ ತಿಳಿಸುವ ಉಪಗ್ರಹ ಚಿತ್ರವನ್ನು ಆಗಾಗ ಅಪ್ ಲೋಡ್ ಕೂಡಾ ಮಾಡುತ್ತಾರೆ. ಆದರೆ ಇದನ್ನು ಅರ್ಥ ಮಾಡಿಕೊಳ್ಳಲು ನಮಗೆ ಕಷ್ಟವಾಗುತ್ತದೆ. ಇಂತಹ ಸೌಲಭ್ಯವನ್ನು ಸರಳವಾಗಿ ಗಮನಿಸಿ ನಮಗೆ ತಿಳಿಸುತ್ತಾರೆ, ಕೃಷಿಕ ಸಾಯಿಶೇಖರ್ ಕರಿಕಳ. ಅನೇಕರು ನಾಳೆಯ ವೆದರ್ ಹೇಗಿದೆ ಎಂದು ಸಾಯಿಶೇಖರ್ ಅವರನ್ನು ಕೇಳಿದ್ದು ಇದೆ. ಅದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡುತ್ತಿರುವ ಸಾಯಿಶೇಖರ್ ಈಗ “ಸುಳ್ಯನ್ಯೂಸ್.ಕಾಂ” ಗೆ ಮಾಹಿತಿ ನೀಡಿದ್ದಾರೆ. ನಾಳೆಯ ವೆದರ್ ಹೇಗಿದೆ ಎಂದು ಕೇಳಿದ್ದಕ್ಕೆ ಅವರು ಸ್ಯಾಟಲೈಟ್ ಚಿತ್ರ ನೋಡಿ ಹೀಗೆ ಹೇಳಿದ್ದಾರೆ, ಕೆಲವೊಮ್ಮೆ ವಾತಾವರಣ ತಕ್ಷಣದ ಏರುಪೇರಿನಿಂದ ವ್ಯತ್ಯಾಸ ಇರಬಹುದು ಎಂದು ಅವರು ಹೇಳುತ್ತಾ,
ನಾಳೆ ಮಡಿಕೇರಿ ಭಾಗದಲ್ಲಿ ಉತ್ತಮ ಮಳೆ ಸಾಧ್ಯತೆ ಇದೆ. ಆಗುಂಬೆ ಸಾಧಾರಣ ಮಳೆ ಸಾಧ್ಯತೆ ಇದೆ. ಹಾಗಾಗಿ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಮೋಡ ಆಥವಾ ತುಂತುರು ಮಳೆ ಸಾಧ್ಯತೆ ಇದೆ. ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು ಎಂದು ಅವರು ಹೇಳಿದ್ದಾರೆ.
ಸಾಯಿಶೇಖರ್ , ಕರಿಕಳ
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
View Comments
Weather report hege noduvudu
ನಾವೆಲ್ಲರೂ ಮಳೆಯ ನಿರೀಕ್ಷೆಯಲ್ಲಿ ಇದ್ದೇವೆ.