ಸುಳ್ಯ: ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ನಾಳೆಯ ವಾತಾವರಣ ಸುಳ್ಯ ಪ್ರದೇಶದಲ್ಲಿ ಹೇಗಿರಬಹುದು ಎಂಬ ನಿರೀಕ್ಷೆ, ಕಾತರ ಎಲ್ಲರಲ್ಲೂ ಇದೆ.
ಹವಾಮಾನ ಇಲಾಖೆ ಆಗಾಗ ವೆದರ್ ರಿಪೋರ್ಟ್ ನೀಡುತ್ತದೆ. ಭಾರತದ ಹವಾಮಾನ ತಿಳಿಸುವ ಉಪಗ್ರಹ ಚಿತ್ರವನ್ನು ಆಗಾಗ ಅಪ್ ಲೋಡ್ ಕೂಡಾ ಮಾಡುತ್ತಾರೆ. ಆದರೆ ಇದನ್ನು ಅರ್ಥ ಮಾಡಿಕೊಳ್ಳಲು ನಮಗೆ ಕಷ್ಟವಾಗುತ್ತದೆ. ಇಂತಹ ಸೌಲಭ್ಯವನ್ನು ಸರಳವಾಗಿ ಗಮನಿಸಿ ನಮಗೆ ತಿಳಿಸುತ್ತಾರೆ, ಕೃಷಿಕ ಸಾಯಿಶೇಖರ್ ಕರಿಕಳ. ಅನೇಕರು ನಾಳೆಯ ವೆದರ್ ಹೇಗಿದೆ ಎಂದು ಸಾಯಿಶೇಖರ್ ಅವರನ್ನು ಕೇಳಿದ್ದು ಇದೆ. ಅದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡುತ್ತಿರುವ ಸಾಯಿಶೇಖರ್ ಈಗ “ಸುಳ್ಯನ್ಯೂಸ್.ಕಾಂ” ಗೆ ಮಾಹಿತಿ ನೀಡಿದ್ದಾರೆ. ನಾಳೆಯ ವೆದರ್ ಹೇಗಿದೆ ಎಂದು ಕೇಳಿದ್ದಕ್ಕೆ ಅವರು ಸ್ಯಾಟಲೈಟ್ ಚಿತ್ರ ನೋಡಿ ಹೀಗೆ ಹೇಳಿದ್ದಾರೆ, ಕೆಲವೊಮ್ಮೆ ವಾತಾವರಣ ತಕ್ಷಣದ ಏರುಪೇರಿನಿಂದ ವ್ಯತ್ಯಾಸ ಇರಬಹುದು ಎಂದು ಅವರು ಹೇಳುತ್ತಾ,
ನಾಳೆ ಮಡಿಕೇರಿ ಭಾಗದಲ್ಲಿ ಉತ್ತಮ ಮಳೆ ಸಾಧ್ಯತೆ ಇದೆ. ಆಗುಂಬೆ ಸಾಧಾರಣ ಮಳೆ ಸಾಧ್ಯತೆ ಇದೆ. ಹಾಗಾಗಿ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಮೋಡ ಆಥವಾ ತುಂತುರು ಮಳೆ ಸಾಧ್ಯತೆ ಇದೆ. ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು ಎಂದು ಅವರು ಹೇಳಿದ್ದಾರೆ.
ಸಾಯಿಶೇಖರ್ , ಕರಿಕಳ
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
View Comments
Weather report hege noduvudu
ನಾವೆಲ್ಲರೂ ಮಳೆಯ ನಿರೀಕ್ಷೆಯಲ್ಲಿ ಇದ್ದೇವೆ.