ಸುಳ್ಯ: ಬಿ ಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಶಾಸಕ ಅಂಗಾರ ಅವರು ನಾಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ.
ಕಳೆದ ಹಲವಾರು ದಿನಗಳಿಂದ ಈ ಬಗ್ಗೆ ಚರ್ಚೆ ನಡೆಯುತ್ತಿತ್ತು. ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆ ಎಂಬುದು ನಿರೀಕ್ಷೆಯಾಗಿತ್ತು. ಸಂಪುಟದಲ್ಲಿ ಸ್ಥಾನ ಪಡೆಯುವ ಶಾಸಕರುಗಳ ಅಧಿಕೃತವಾದ ಪಟ್ಟಿ ಇದುವರೆಗೂ ಬಿಡುಗಡೆಯಾಗಿಲ್ಲ.ನಾಳೆ ಬೆಳಗ್ಗೆ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈಗಾಗಲೇ ಶಾಸಕ ಅಂಗಾರ ಅವರು ಬೆಂಗಳೂರಿಗೆ ತೆರಳಿದ್ದು ಸಚಿವ ಸ್ಥಾನದ ಬಗ್ಗೆ ಸುಳ್ಯನ್ಯೂಸ್.ಕಾಂ ಜೊತೆ ವಿಶ್ವಾಸದ ಮಾತುಗಳನ್ನಾಡಿದ್ದಾರೆ.ಇದುವರೆಗೆ ಯಾವುದೇ ಅಧಿಕೃತವಾದ ಮಾಹಿತಿ ಬಂದಿಲ್ಲ ಎಂದೂ ತಿಳಿಸಿದ್ದಾರೆ. ಹಿರಿಯ ಶಾಸಕ ಅಂಗಾರ ಅವರ ಹೆಸರು ಸಚಿವ ಸ್ಥಾನಕ್ಕೆ ಈಗಾಗಲೇ ಅಂತಿಮವಾಗಿದೆ ಎಂದು ಮೂಲಗಳು ಸುಳ್ಯನ್ಯೂಸ್.ಕಾಂ ಗೆ ತಿಳಿಸಿದೆ.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…