ಸುಳ್ಯ: ಬಿ ಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಶಾಸಕ ಅಂಗಾರ ಅವರು ನಾಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ.
ಕಳೆದ ಹಲವಾರು ದಿನಗಳಿಂದ ಈ ಬಗ್ಗೆ ಚರ್ಚೆ ನಡೆಯುತ್ತಿತ್ತು. ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆ ಎಂಬುದು ನಿರೀಕ್ಷೆಯಾಗಿತ್ತು. ಸಂಪುಟದಲ್ಲಿ ಸ್ಥಾನ ಪಡೆಯುವ ಶಾಸಕರುಗಳ ಅಧಿಕೃತವಾದ ಪಟ್ಟಿ ಇದುವರೆಗೂ ಬಿಡುಗಡೆಯಾಗಿಲ್ಲ.ನಾಳೆ ಬೆಳಗ್ಗೆ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈಗಾಗಲೇ ಶಾಸಕ ಅಂಗಾರ ಅವರು ಬೆಂಗಳೂರಿಗೆ ತೆರಳಿದ್ದು ಸಚಿವ ಸ್ಥಾನದ ಬಗ್ಗೆ ಸುಳ್ಯನ್ಯೂಸ್.ಕಾಂ ಜೊತೆ ವಿಶ್ವಾಸದ ಮಾತುಗಳನ್ನಾಡಿದ್ದಾರೆ.ಇದುವರೆಗೆ ಯಾವುದೇ ಅಧಿಕೃತವಾದ ಮಾಹಿತಿ ಬಂದಿಲ್ಲ ಎಂದೂ ತಿಳಿಸಿದ್ದಾರೆ. ಹಿರಿಯ ಶಾಸಕ ಅಂಗಾರ ಅವರ ಹೆಸರು ಸಚಿವ ಸ್ಥಾನಕ್ಕೆ ಈಗಾಗಲೇ ಅಂತಿಮವಾಗಿದೆ ಎಂದು ಮೂಲಗಳು ಸುಳ್ಯನ್ಯೂಸ್.ಕಾಂ ಗೆ ತಿಳಿಸಿದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…